Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ತಂಬಾಕಿನಿಂದ ದೂರವಿರೋಣ

ತಂಬಾಕಿನಿಂದ ದೂರವಿರೋಣ

ಇಂದು ವಿಶ್ವ ತಂಬಾಕು ರಹಿತ ದಿನ

ಡಾ. ಮುರಲೀ ಮೋಹನ್, ಚೂಂತಾರುಡಾ. ಮುರಲೀ ಮೋಹನ್, ಚೂಂತಾರು30 May 2017 6:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತಂಬಾಕಿನಿಂದ ದೂರವಿರೋಣ

ವಿಶ್ವ ಆರೋಗ್ಯ ಸಂಸ್ಥೆ (WHO) ವಿಶ್ವದ ಮಾನವ ಸಂಪತ್ತಿನ ರಕ್ಷಣೆ ಮಾಡುವುದಕ್ಕಾಗಿಯೇ 1987ರಿಂದ, ಮೇ 31ನ್ನು ‘ವಿಶ್ವ ತಂಬಾಕು ರಹಿತ ದಿನ’ ಎಂದು ಅರ್ಥಗರ್ಭಿತವಾಗಿ ಆಚರಿಸುತ್ತಾ ಬಂದಿದೆ. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ರೋಗರುಜಿನ, ಸಾವು ನೋವು, ದುಗುಡ ದುಮ್ಮಾನಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ, ಜನರಲ್ಲಿ ಜಾಗೃತಿ ಮೂಡಿಸವ ಸದುದ್ದೇಶದಿಂದಲೇ ಈ ಆಚರಣೆಯನ್ನು ಜಾರಿಗೆ ತಂದಿದೆ.

ಇಂದಿನ ವ್ಯಾಪಾರಿ ಮನೋಭಾವದ ಮತ್ತು ಜಾಗತೀಕರಣಗೊಂಡ ಜಗತ್ತಿನಲ್ಲಿ ಸಿಗರೇಟು, ತಂಬಾಕು ಸೇವನೆ ಎಂಬುದು ಪ್ರತಿಷ್ಠೆ ಮತ್ತು ಪ್ಯಾಶನ್ ಆಗಿಬಿಟ್ಟಿದೆ. ದೃಶ್ಯಮಾಧ್ಯಮ, ಜಾಹೀರಾತು ಮತ್ತು ಜಾಗತೀಕರಣದ ವೈಭವೀಕರಣದಿಂದ ಇಂದಿನ ಯುವ ಜನತೆ ದಾರಿ ತಪ್ಪಿಧೂಮಪಾನದ ಮೋಜಿನ ಜೂಜಿಗೆ ಬಲಿಯಾಗಿ ಲಕ್ಷಾಂತರ ಜನರು ಸಾವಿಗೆ ಪ್ರತಿದಿನ ಅಹ್ವಾನ ನೀಡುತ್ತಿದ್ದಾರೆ. ದಾರಿ ತಪ್ಪುತ್ತಿರುವ ಯುವಜನತೆಯಲ್ಲಿ ಜಾಗೃತಿ ಮೂಡಿಸಲು ಮತ್ತು ಧೂಮಪಾನದ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ‘ತಂಬಾಕು ರಹಿತ’ ಸಮಾಜ ನಿರ್ಮಾಣ ಮಾಡುವ ಸದುದ್ದೇಶದಿಂದಲೇ ಈ ದಿನವನ್ನು ಆಚರಿಸಲಾಗುತ್ತಿದೆ.

ಧೂಮಪಾನ-ವಿಷಪಾನ 

ನಮ್ಮ ದೇಹದ ಅರ್ಬುದ ರೋಗಕ್ಕೆ ಅತೀ ಪ್ರಾಮುಖ್ಯವಾದ ಕಾರಣ ಎಂದರೆ ಧೂಮಪಾನ ಒಂದು ಸಿಗರೇಟಿನಲ್ಲಿ ಸರಿಸುಮಾರು 7ರಿಂದ 8ಮಿಲಿ ಗ್ರಾಂನಷ್ಟು ‘ಟಾರ್’ ನ ಪ್ರಮಾಣವನ್ನು ಕಂಡುಹಿಡಿಯಲಾಗಿದೆ. ಅರ್ಬುದ ರೋಗಕ್ಕೆ ರಹದಾರಿ ನೀಡುವ ‘ಎನ್-ನೈಟ್ರೋಸೋಮಿಕೋಟಿನ್’ ಎಂಬ ಬಹಳ ಅಪಾಯಕಾರಿ ವಸ್ತು ಸಿಗರೇಟಿನಲ್ಲಿದೆ. ಏನಿಲ್ಲವೆಂದರೂ ಸುಮಾರು 4,500 ಅಪಾಯಕಾರಿ ರಾಸಾಯನಿಕ ವಸ್ತುಗಳು ಸಿಗರೇಟಿನಲ್ಲಿ ಕಂಡುಬರುತ್ತದೆ. ಸಿಗರೇಟಿನ ಟಾರಿನಲ್ಲಿ ಬೆಂಜೋಪೈರಿನ್, ಪಾರಿನ್ಯೂಕ್ಲಿಯರ್ ಆಸಿಡ್, ಆರೋಮಾಟಿಕ್ ಹೈಡ್ರೊಕಾರ್ಬನ್, ನೈಟ್ರೋಸೊಮಿನ್ ಇತ್ಯಾದಿ 200ಕ್ಕೂ ಹೆಚ್ಚು ಕ್ಯಾನ್ಸರ್ ಪ್ರಚೋದನ ರಾಸಾಯನಿಕಗಳು ಇವೆೆ ಎಂದು ಸಂಶೋಧನೆಗಳಿಂದ ಕಂಡುಹಿಡಿಯಲಾಗಿದೆ. ಸಿಗರೇಟಿನ ಹೊಗೆಯಲ್ಲಿರುವ ಕಾರ್ಬನ್ ಡೈ ಆಕ್ಸೈಡ್, ಕಾರ್ಬನ್ ಮೋನೋಕ್ಸೈಡ್ ಮತ್ತು ಹೈಡ್ರೋಜನ್ ಅನಿಲಗಳು ದೇಹದ ಆಮ್ಲಜನಕದ ಪೂರೈಕೆಗೆ ಅಡ್ಡಿ ಉಂಟುಮಾಡುತ್ತದೆ. ಧೂಮಪಾನದ ಹೊಗೆಯಲ್ಲಿರುವ ಹೈಡ್ರೋಜನ್ ಸಯಸೈಡ್, ಅಮೋನಿಯ, ಅಸಿಟೋನ್, ಫೀನಾಲ್, ಹೈಡ್ರಾಜನ್, ಕ್ರೆರಿಡಿನ್ ಮುಂತಾದ ಅಪಾಯಕಾರಿ ಅನಿಲಗಳು, ರಾಸಾಯನಿಕಗಳು ನಮ್ಮ ಶ್ವಾಸಕೋಶಕ್ಕೆ ಮಾರಕವಾದ ಪರಿಣಾಮ ಬೀರಿ ಶ್ವಾಸಕೋಶದ ಅರ್ಬುದರೋಗಕ್ಕೆ ನಾಂದಿ ಹಾಡುತ್ತದೆ ಎಂದು ಸಂಶೋಧನೆಗಳಿಂದ ತಿಳಿದುಬಂದಿದೆ. ಇದರ ಜೊತೆಗೆ ಪೊಲೋನಿಯಂ-210 ಎಂಬ ರೇಡಿಯೊ ಆಕ್ಟಿನ್ ವಿಕಿರಣ ವಸ್ತು ಕೂಡಾ ಸಿಗರೇಟಿನ ಹೊಗೆಯಲ್ಲಿದೆ ಎಂದು ಸಂಶೋಧನೆಗಳಿಂದ ಖಚಿತಪಟ್ಟಿದೆ. ಸರಿ ಸುಮಾರು 600ರಿಂದ 700 ಡಿಗ್ರಿ ಸೆಂಟಿಗ್ರೇಡ್‌ನಲ್ಲಿ ದಹಿಸುವ ಸಿಗರೆಟ್ ಒಳಗಿನ ತಂಬಾಕು ನೂರಾರು ರಾಸಾಯನಿಕ ವಿಷಾನಿಲಗಳನ್ನು ತಯಾರು ಮಾಡುವ ಕಾರ್ಖಾನೆ ಇದ್ದಂತೆ ಎನ್ನಬಹುದು. ಒಟ್ಟಿನಲ್ಲಿ ಸಿಗರೇಟು ಎಂಬುದು ಅಪಾಯಕಾರಿ ರಾಸಾಯನಿಕಗಳ ಅಗ್ನಿಜ್ವಾಲೆ ಎಂದರೂ ತಪ್ಪಲ್ಲ. ಯಾಕೆ ಧೂಮಪಾನ ತ್ಯಜಿಸಬೇಕು?

ನಮ್ಮ ದೇಹದೊಳಗಿನ ಎಲ್ಲಾ ವಿಷಕಾರಿ ಅನಿಲಗಳನ್ನು ದೇಹದಿಂದ ಹೊರಹಾಕುವ ಕಾರ್ಯ ನಿರ್ವಹಿಸುವ ಅಂಗ ಯಕೃತ್ತು. ಧೂಮಪಾನದ ಮೂಲಕ ನಮ್ಮ ಶರೀರ ಪ್ರವೇಶಿಸುವ ವಿಷಾನಿಲಗಳು ನಮ್ಮ ಶ್ವಾಸಕೋಶದ ಒಳಗೆ ಪ್ರವೇಶಿಸಿ ಬಳಿಕ ರಕ್ತದ ಮೂಲಕ ಯಕೃತ್ತನ್ನು ತಲುಪುತ್ತದೆ. ಕಾಲಕ್ರಮೇಣ ಧೂಮಪಾನದಿಂದ ಯಕೃತ್ತು ತನ್ನ ಕ್ರಿಯಾಶೀಲತೆಯನ್ನು ಕಳೆದುಕೊಂಡು ನಿಷಷ್ಕ್ರಿಯಗೊಳ್ಳುತ್ತದೆ. ಹೀಗೆ ಧೂಮಪಾನ ಶರೀರದ ಎಲ್ಲಾ ಅಂಗಗಳಾದ ಶ್ವಾಸಕೋಶ, ಯಕೃತ್, ರಕ್ತನಾಳ, ಮೆದುಳು ಮುಂತಾದ ಅಂಗಗಳನ್ನು ಒಂದೊಂದಾಗಿ ಆಪೋಶನ ತೆಗೆದುಕೊಂಡು ವ್ಯಕ್ತಿಯ ರೋಗನಿರೋಧಕ ಶಕ್ತಿಯನ್ನು ಕುಂದಿಸಿ ಧೂಮಪಾನಿ ಶರೀರವನ್ನು ರೋಗಗಳ ಹಂದರವಾಗಿ ಮಾರ್ಪಾಡುಮಾಡುತ್ತದೆ.

ತಂಬಾಕು ಮತ್ತು ತಂಬಾಕಿನ ವಿವಿಧ ಉತ್ಪನ್ನಗಳು ಮನುಕುಲದ ಬಹುದೊಡ್ಡ ವೈರಿ ಎಂದರೂ ತಪ್ಪಲ್ಲ. ಜಗತ್ತಿನಲ್ಲಿ ಹೃದಯದ ಕಾಯಿಲೆಯ ಬಳಿಕ ಮಾರಣಾಂತಿಕವಾದ ಎರಡನೆ ದೊಡ್ಡ ಕಾಯಿಲೆ ಎಂದರೆ ಕ್ಯಾನ್ಸರ್ (ಅರ್ಬುದ ರೋಗ). ವಿಪರ್ಯಾಸವೆಂದರೆ ತಡೆಯಬಹುದಾದ ಎಲ್ಲ ಕ್ಯಾನ್ಸರ್‌ಗಳಿಗೆ ಪ್ರಮುಖ ಕಾರಣ ತಂಬಾಕು ಮತ್ತು ಅದರ ಉತ್ಪನ್ನಗಳು. ಮನುಷ್ಯ ಜಾಗತಿಕವಾಗಿ ಬೆಳೆದಂತೆಲ್ಲಾ ಹೊಸಹೊಸ ಆವಿಷ್ಕಾರಗಳು ಹುಟ್ಟಿಕೊಂಡು, ತಂತ್ರಜ್ಞಾನದಲ್ಲಿ ಅದ್ಭುತ ಪ್ರಶಂಸೆ ಸಾಧಿಸಿದರೂ, ಧೂಮಪಾನ, ತಂಬಾಕು ಮುಂತಾದ ಆಧುನಿಕ ಜೀವನ ಶೈಲಿಯ ಸಂಗಾತಿಗಳು ಮನುಕುಲಕ್ಕೆ ಬಹುದೊಡ್ಡ ಕಂಟಕವಾಗಿ ಬೆಳೆದು ನಿಂತಿದೆ.

ನಮ್ಮ ದೇಶದಲ್ಲಿ ಸುಮಾರು 12ರಿಂದ 13 ಕೋಟಿ ತಂಬಾಕು ಬಳಕೆದಾರರು ಇದ್ದು, ಕ್ಯಾನ್ಸರ್ ಸೇರಿದಂತೆ, ತಂಬಾಕು ಸಂಬಂಧಿ ರೋಗಗಳಿಂದಾಗಿ ವರ್ಷಕ್ಕೆ ಒಂದು ಕೋಟಿ ಜನರು ಮೃತರಾಗುತ್ತಾರೆ. ಆತಂಕಕಾರಿ ವಿಷಯವೆಂದರೆ ಈ ರೋಗಗಳು 30 ರಿಂದ 50 ವರ್ಷದವರಲ್ಲಿ ಕಂಡು ಬರುತ್ತದೆ. ಇವು ಜೀವನದ ಅತ್ಯಂತ ಉತ್ಪಾದಕರ ವರ್ಷಗಳಾಗಿದ್ದು ಇದರಿಂದಾಗಿ ಅಪಾರವಾದ ಸಾಮಾಜಿಕ ಮತ್ತು ಆರ್ಥಿಕ ನಷ್ಟ ಉಂಟಾಗುತ್ತದೆ. ಈಗೀಗ 20-30ರ ಹರೆಯದ ಯುವಕರಲ್ಲೂ ಕ್ಯಾನ್ಸರ್ ಕಂಡು ಬರುತ್ತಿರುವುದು ಬಹಳ ಆತಂಕಕಾರಿ ಬೆಳವಣಿಗೆ. ಹೀಗಾಗಿ ತಂಬಾಕಿನ ಉತ್ಪನ್ನಗಳನ್ನು ಯುವಜನತೆಯೂ ಸೇರಿ ಎಲ್ಲರೂ ಬಹಿಷ್ಕರಿಸಲೇ ಬೇಕಾಗಿದೆ. ಹೀಗಾದಾಗ ಮಾತ್ರ ನಮಗೂ ಹಿತ ಮತ್ತು ದೇಶಕ್ಕೂ ಹಿತ

ತಡೆಗಟ್ಟುವುದು ಹೇಗೆ?

1. ತಂಬಾಕು ಮತ್ತು ಅದರ ಉತ್ಪನ್ನಗಳ ಜಾಹೀರಾತುಗಳನ್ನು ನಿರ್ಬಂಧಿಸುವುದು.
2. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸುವುದು.
3. ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸುವುದು.
4. ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕರಪತ್ರ, ಬೀದಿನಾಟಕ ಮತ್ತು ತಂಬಾಕು ವರ್ಜನಾ ಶಿಬಿರಗಳನ್ನು ನಡೆಸುವುದು.
5. ದೃಶ್ಯ ಮಾಧ್ಯಮಗಳಲ್ಲಿ ಧೂಮಪಾನವನ್ನು ವೈಭವೀಕರಿಸುವ ದೃಶ್ಯಗಳಿಗೆ ಕತ್ತರಿ ಹಾಕುವುದು.
6.  ಕೊಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದು. 

ಧೂಮಪಾನ ತ್ಯಜಿಸಿದ ಬಳಿಕದ ಪರಿಣಾಮಗಳನ್ನು
ಈ ಕೆಳಗಿನಂತೆ ವಿಂಗಡಿಸಲಾಗಿದೆ: 

24 ಗಂಟೆಗಳ ನಂತರ

♦ರಕ್ತದ ಒತ್ತಡ ಸಹಜ ಸ್ಥಿತಿಗೆ ಬರುತ್ತದೆ.

♦ ನಾಡಿಮಿಡಿತ ಸಹಜ ಸ್ಥಿತಿಗೆ ಬರುತ್ತದೆ.

♦ ಕೈಕಾಲುಗಳ ತಾಪಮಾನ ಸಹಜ ಸ್ಥಿತಿಗೆ ತಲುಪುತ್ತದೆ.

♦ ಮನಸ್ಸು ಸಮಸ್ಥಿತಿಗೆ ಬರುತ್ತದೆ.

♦ ರಕ್ತದಲ್ಲಿ ಸೇರಿದ ಕಾರ್ಬನ್ ಮೋನೊಕ್ಸೈಡ್ (ಇಂಗಾಲ)ನ ಪ್ರಮಾಣ ಕಡಿಮೆಯಾಗಿ, ಆಮ್ಲಜನಕದ ಪ್ರಮಾಣ ಹೆಚ್ಚುತ್ತದೆ.

♦ ಹೃದಯ ಬಡಿತ ಸಹಜಸ್ಥಿತಿಗೆ ಬಂದು, ಹೃದಯ ಕ್ರಿಯಾಶೀಲಗೊಳ್ಳುತ್ತದೆ.

ಒಂದು ವಾರದ ಬಳಿಕ

♦ ನಿಷ್ಕ್ರಿಯಗೊಂಡ ನರನಾಡಿಗಳು ಚೇತರಿಸಿಕೊಳ್ಳುತ್ತವೆ.
♦ ಜಡಗೊಂಡ ಪಂಚೇಂದ್ರಿಯಗಳು ಚುರುಕುಗೊಳ್ಳುತ್ತವೆ.
♦ ನಾಲಗೆಯಲ್ಲಿನ ರುಚಿ ಸಹಜ ಸ್ಥಿತಿಗೆ ಮರಳುತ್ತದೆ.
♦ ದೇಹದಲ್ಲಿ ಚೈತನ್ಯ ತುಂಬಿ, ಆಯಾಸ, ಉಬ್ಬಸ ಕಡಿಮೆಯಾಗುತ್ತದೆ.
♦ ದೇಹದ ರಕ್ತಸಂಚಾರ ಉತ್ತಮಗೊಳ್ಳುತ್ತದೆ.
♦ ದೇಹದ ಇತರ ಅಂಗಾಂಗಗಳ ಕ್ರಿಯಶೀಲತೆ ಉತ್ತಮಗೊಳ್ಳುತ್ತದೆ.

6 ತಿಂಗಳ ಬಳಿಕ

♦ ರಕ್ತದಲ್ಲಿನ ಕೊಬ್ಬಿನ ಅಂಶ ಕಡಿಮೆಯಾಗಿ ಸಹಜ ರಕ್ತ ಸಂಚಾರಕ್ಕೆ ಅವಕಾಶ ನೀಡುತ್ತದೆ.
♦ ಶ್ವಾಸಕೋಶದ ಶಕ್ತಿ ಸಾಮರ್ಥ್ಯ ಶೇ. 40ರಷ್ಟು ಹೆಚ್ಚುತ್ತದೆ.
♦ ದೇಹದ ರಕ್ತ ಸಂಚಲನೆ ಸರಿಯಾಗಿ ಹೊಸ ಉಲ್ಲಾಸ ಮಾಡುತ್ತದೆ.
♦ ದೇಹದ ಆರೋಗ್ಯ ಸುಧಾರಿಸಿ, ಧೂಮಪಾನದಿಂದ ಉಂಟಾಗುತ್ತಿದ್ದ ಕೆಮ್ಮು -ದಮ್ಮು ಇಲ್ಲದಂತಾಗಿ, ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
♦ ಆಯಾಸ ಮತ್ತು ಏದುಸಿರು ಸಮಸ್ಯೆ ಕ್ಷೀಣವಾಗುತ್ತದೆ ಮತ್ತು ಧೂಮಪಾನದಿಂದ ಘಾಸಿ ಗೊಂಡಿದ್ದ ಶ್ವಾಸಕೋಶ ಮತ್ತಿತರ ಅಂಗಾಂಗಗಳ ಜೀವಕೋಶಗಳು ಸಹಜ ಸ್ಥಿತಿಗೆ ಮರಳಿ, ಹೊಸ ಜೀವಕೋಶಗಳು ಹುಟ್ಟಿಕೊಳ್ಳುತ್ತದೆ.
♦ ಹೃದಯಾಘಾತ, ಕ್ಯಾನ್ಸರ್ ಮತ್ತು ಪಾರ್ಶ್ವವಾಯು ಉಂಟಾಗುವ ಸಾಧ್ಯತೆ ಕಡಿಮೆಯಾಗುತ್ತಾ, ಆಲಸ್ಯ, ಆಯಾಸದಿಂದ ಮನಸ್ಸು ಮುಕ್ತಿಯಾಗಿ, ಮನಸ್ಸು ಪ್ರುಲ್ಲಗೊಳ್ಳುತ್ತದೆ. ಆರೋಗ್ಯ ಪೂರ್ಣವಾದ ಮಾನಸಿಕ ಚಿಂತನಾಶಕ್ತಿ ಮನಸ್ಸಿಗೆ ದೊರಕಿ, ದೈಹಿಕ ಸಾಮರ್ಥ್ಯವೂ ವೃದ್ಧಿಸುತ್ತದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಡಾ. ಮುರಲೀ ಮೋಹನ್, ಚೂಂತಾರು
ಡಾ. ಮುರಲೀ ಮೋಹನ್, ಚೂಂತಾರು
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X