Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏರ್‌ಇಂಡಿಯಾ ಮಾರಾಟಕ್ಕೆ ಕೇಂದ್ರ...

ಏರ್‌ಇಂಡಿಯಾ ಮಾರಾಟಕ್ಕೆ ಕೇಂದ್ರ ಸಿದ್ಧತೆ?

ವಾರ್ತಾಭಾರತಿವಾರ್ತಾಭಾರತಿ31 May 2017 8:04 PM IST
share
ಏರ್‌ಇಂಡಿಯಾ ಮಾರಾಟಕ್ಕೆ ಕೇಂದ್ರ ಸಿದ್ಧತೆ?

ಹೊಸದಿಲ್ಲಿ, ,ಮೇ 31: ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಸಕ್ರಿಯವಾಗಿ ಪರಿಶೀಲಿಸುತ್ತಿದ್ದಾರೆಂದು ಈ ಬಗ್ಗೆ ನೇರವಾದ ಮಾಹಿತಿಯನ್ನು ಹೊಂದಿರುವ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ವಿಮಾನಗಳ ಖರೀದಿಗೆ ಸಂಬಂಧಿಸಿ ಏರ್ ಇಂಡಿಯಾ ಹೊಂದಿರುವ 200 ಶತಕೋಟಿ ರೂ.ಗಳ ಸಾಲದ ಬಾಧ್ಯತೆಯನ್ನು ವಹಿಸಿಕೊಳ್ಳುವಂತೆ ಅವರು ಖರೀದಿದಾರ ಸಂಸ್ಥೆಯನ್ನು ಕೇಳಿಕೊಳ್ಳುವ ಸಾಧ್ಯತೆಯಿದೆ ಯೆಂದು ಅವರು ಹೇಳಿದ್ದಾರೆ.

  ಸುಮಾರು 8 ಶತಕೋಟಿ ಡಾಲರ್ ಸಾಲದಲ್ಲಿದ್ದು, ಭಾರೀ ನಷ್ಟ ಅನುಭವಿಸುತ್ತಿರುವ ಏರ್‌ಇಂಡಿಯಾವನ್ನು ಮಾರಾಟ ಮಾಡುವಂತೆ ಸರಕಾರಿ ಸಮಿತಿಯೊಂದು ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಪ್ರಧಾನಿ ಈ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತಿದ್ದಾರೆನ್ನಲಾಗಿದೆ. ಆದರೆ ಏರ್‌ಇಂಡಿಯಾದ ಬಾಕಿ ಉಳಿದ 5 ಶತಕೋಟಿ ಡಾಲರ್ ಸಾಲವನ್ನು ಮನ್ನಾ ಮಾಡಬೇಕೇ ಅಥವಾ ಮರುಹೊಂದಿಸಿಕೊಳ್ಳಬೇಕೇ ಎಂಬ ಬಗ್ಗೆ ಕೇಂದ್ರ ಸರಕಾರವು ಇನ್ನಷ್ಟೇ ನಿರ್ಧಾರವನ್ನು ಕೈಗೊಳ್ಳಬೇಕಾಗಿದೆ ಎಂದು ಆತ ಹೇಳಿದ್ದಾರೆ.

        ಏರ್‌ಇಂಡಿಯಾದ ಮಾರಾಟಕ್ಕೆ ಮುನ್ನ ಅದರ ಬಳಿಯಿರುವ 3 ಶತಕೋಟಿ ಡಾಲರ್‌ಗೂ ಅಧಿಕ ವೌಲ್ಯದ ರಿಯಲ್ ಎಸ್ಟೇಟ್ ಸೇರಿದಂತೆ ಹೆಚ್ಚು ಮಹತ್ವವನ್ನು ಪಡೆದಿರದ ಆಸ್ತಿಗಳನ್ನು ವಿಲೇವಾರಿ ಮಾಡುವ ಪ್ರಕ್ರಿಯೆಯೂ ಆರಂಭಗೊಳ್ಳಲಿದೆ. ಆದರೆ ಏರ್‌ಇಂಡಿಯಾ ಮಾರಾಟ ಪ್ರಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ ಅಥವಾ ಏರ್ ಇಂಡಿಯಾ ವಕ್ತಾರ ಧನಂಜಯ್ ಕುಮಾರ್ ಅವರಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲವೆಂದು ಅಮೆರಿಕದ ವಾಣಿಜ್ಯ ವಿಷಯಗಳ ಸುದ್ದಿವಾಹಿನಿ ಬ್ಲೂಂಬರ್ಗ್ ತಿಳಿಸಿದೆ.

   ಏರ್‌ಇಂಡಿಯಾದ ಭವಿಷ್ಯದ ದೃಷ್ಟಿಯಿಂದ ಅದನ್ನು ಮಾರಾಟ ಮಾಡುವ ಕುರಿತ ಆಯ್ಕೆಗಳನ್ನು ಮುಕ್ತವಾಗಿಡಬೇಕೆಂದದು ನೀತಿ ಆಯೋಗವು ಕೇಂದ್ರ ಸರಕಾರಕ್ಕೆ ಸಲಹೆ ನೀಡಿರುವುದಾಗಿ ಕೇಂದ್ರ ನಾಗರಿಕ ವಾಯುಯಾನ ಸಚಿವ ಅಶೋಕ್ ಗಜಪತಿ ರಾಜು ಮಂಗಳವಾರ ತಿಳಿಸಿದ್ದರು. ಮೇ 26ರಂದು ಬ್ಲೂಂಬರ್ಗ್ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗಾರಿಯಾ ಅವರು ಮಾತನಾಡುತ್ತಾ, ಏರ್‌ಇಂಡಿಯಾದ ಪ್ರಸಕ್ತ ಹಣಕಾಸು ಸ್ಥಿತಿಗತಿಯನ್ನು ಗಮನಿಸಿದರೆ ಅದನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ್ದರು.

  ದಶಕದ ಹಿಂದೆ ದೇಶದ ವಾಯುಯಾನ ಮಾರುಕಟ್ಟೆಯಲ್ಲಿ ಏರ್‌ಇಂಡಿಯಾದ ಪಾಲು ಶೇ.35ರಷ್ಟಿದ್ದರೆ, ಈಗ ಅದು 12.9 ಶೇ.ಕ್ಕೆ ಕುಸಿದಿದೆ. ಸರಕಾರದ ಅಂಕಿಅಂಶಗಳ ಪ್ರಕಾರ ತೈಲ ಬೆಲೆ ಕುಸಿತದ ಪರಿಣಾಮವಾಗಿ 2016ರ ಮಾರ್ಚ್‌ನಲ್ಲಿ ಏರ್‌ಇಂಡಿಯಾಕ್ಕೆ ಸುಮಾರು 1 ಶತಕೋಟಿ ಡಾಲರ್‌ಗಳ ನಿರ್ವಹಣಾ ಲಾಭ ದೊರೆತಿತ್ತು. ಆದಾಗ್ಯೂ, ಈಗಲೂ ಅದು 28.4 ಶತಕೋಟಿ ಡಾಲರ್‌ಗಳ ನಷ್ಟವನ್ನು ಅನುಭವಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X