Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿಯ ಪರಿಣಾಮ: ಭಾರತದ...

ನೋಟು ರದ್ದತಿಯ ಪರಿಣಾಮ: ಭಾರತದ ಅಗ್ರಸ್ಥಾನ ಕಿತ್ತುಕೊಂಡ ಚೀನಾ!

ವಾರ್ತಾಭಾರತಿವಾರ್ತಾಭಾರತಿ1 Jun 2017 9:09 AM IST
share
ನೋಟು ರದ್ದತಿಯ ಪರಿಣಾಮ: ಭಾರತದ ಅಗ್ರಸ್ಥಾನ ಕಿತ್ತುಕೊಂಡ ಚೀನಾ!

ಹೊಸದಿಲ್ಲಿ, ಜೂ.1: ನೋಟು ರದ್ದತಿಯಿಂದಾಗಿ ದೇಶದ ಆರ್ಥಿಕ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದ್ದು, ಭಾರತ, ವಿಶ್ವದಲ್ಲೇ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂಬ ಹೆಗ್ಗಳಿಕೆಗೂ ಇದೀಗ ಕುತ್ತು ಬಂದಿದೆ. ಮಾರ್ಚ್‌ನಲ್ಲಿ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತ ಆರ್ಥಿಕತೆಯ ಪ್ರಗತಿದರ ಶೇಕಡ 6.1ಕ್ಕೆ ಕುಸಿದಿದ್ದು, 2016-17ರ ಪ್ರಗತಿದರ 7.1ಕ್ಕೆ ಕುಸಿದಿದೆ. ಇದು ಮೂರು ವರ್ಷಗಳಲ್ಲೇ ಕನಿಷ್ಠ. ಭಾರತದ ಅಗ್ರಸ್ಥಾನವನ್ನು ಕಿತ್ತುಕೊಂಡಿರುವ ಚೀನಾ, ಇದೀಗ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ಅರ್ಥಿಕತೆ ಎಂಬ ಹೆಗ್ಗಳಿಕೆ ಪಡೆದಿದೆ.

ಉತ್ಪಾದನಾ ಮತ್ತು ಸೇವಾ ವಲಯದ ಸಾಧನೆ ಕುಸಿತವಾಗಿರುವುದು ಭಾರತದ ಒಟ್ಟಾರೆ ಹಿನ್ನಡೆಗೆ ಪ್ರಮುಖ ಕಾರಣವಾಗಿದೆ. ಮೋದಿ ಸರ್ಕಾರ ಮೂರನೇ ವರ್ಷದ ಸಂಭ್ರಮಾಚರಣೆಯಲ್ಲಿರುವಾಗಲೇ ಈ ಅಂಶ ಬಹಿರಂಗವಾಗಿದೆ. 2016-17ರಲ್ಲಿ ದಾಖಲಾದ ಪ್ರಗತಿದರ ಹಿಂದಿನ ಎರಡು ವರ್ಷಗಳಿಗಿಂತ ಕಡಿಮೆ. 2015-16ರಲ್ಲಿ ಶೇಕಡ 8 ಹಾಗೂ ಅದಕ್ಕೂ ಹಿಂದಿನ ವರ್ಷ ಶೇಕಡ 7.5ರಷ್ಟು ಪ್ರಗತಿದರ ದಾಖಲಾಗಿತ್ತು.

2017ರ ಜನವರಿ- ಮಾರ್ಚ್ ಅವಧಿಯಲ್ಲಿ ಚೀನಾ ಶೇಕಡ 6.8ರಷ್ಟು ಪ್ರಗತಿ ಸಾಧಿಸಿದೆ. 2015ರಲ್ಲಿ ಮೊದಲ ಬಾರಿಗೆ ಭಾರತ ಚೀನಾವನ್ನು ಮೀರಿಸುವ ಸಾಧನೆ ಮಾಡಿತ್ತು. ಇದೀಗ ಚೀನಾ ತನ್ನ ಅಗ್ರಸ್ಥಾನವನ್ನು ಮತ್ತೆ ಕಿತ್ತುಕೊಂಡಂತಾಗಿದೆ.

ಸಾಮಾನ್ಯ ಅಂಕಿ ಅಂಶಗಳ ಕಚೇರಿ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, 2015-16ರಲ್ಲಿ 8.7ರಷ್ಟಿದ್ದ ಒಟ್ಟಾರೆ ಮೌಲ್ಯವರ್ಧನೆ (ಜಿವಿಎ) ಪ್ರಮಾಣ ಕೊನೆಯ ತ್ರೈಮಾಸಿಕದಲ್ಲಿ ಶೇಕಡ 5.6ಕ್ಕೆ ಕುಸಿದಿದೆ. ಇಡೀ ವರ್ಷದಲ್ಲಿ ಜಿವಿಎ ಪ್ರಮಣ ಶೇಕಡ 6.6 ಆಗಿದ್ದು, ಹಿಂದಿನ ವರ್ಷ ಈ ಪ್ರಮಾಣ ಶೇಕಡ 7.9 ಆಗಿತ್ತು. 2016ರ ಮಾರ್ಚ್‌ನಿಂದ ನಿರಂತರವಾಗಿ 5 ತ್ರೈಮಾಸಿಕಗಳಲ್ಲಿ ಜಿವಿಎ ಪ್ರಮಾಣ ಕುಸಿತ ಕಂಡಿದೆ.

2016ರ ನವೆಂಬರ್ 8ರಂದು ಕೇಂದ್ರ ಸರ್ಕಾರ, ಅಂದು ಚಲಾವಣೆಯಲ್ಲಿದ್ದ ಶೇಕಡ 87ರಷ್ಟು ನೋಟುಗಳನ್ನು ರದ್ದುಪಡಿಸಿದ್ದರಿಂದ, ದೇಶದಲ್ಲಿ ನಗದು ಕೊರತೆ ತೀವ್ರವಾಗಿ, ಅರ್ಥಿಕ ಚಟುವಟಿಕೆಗಳು ಅಸ್ತವ್ಯಸ್ತವಾಗಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X