Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಹತ್ಯೆಗೆ , ಗೋಮಾಂಸ ಸೇವನೆಗೆ ನಿಷೇಧ...

ಗೋಹತ್ಯೆಗೆ , ಗೋಮಾಂಸ ಸೇವನೆಗೆ ನಿಷೇಧ ಇಲ್ಲ : ಕೇರಳ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ1 Jun 2017 12:34 PM IST
share
ಗೋಹತ್ಯೆಗೆ , ಗೋಮಾಂಸ ಸೇವನೆಗೆ ನಿಷೇಧ ಇಲ್ಲ :  ಕೇರಳ ಹೈಕೋರ್ಟ್

ತಿರುವನಂತಪುರಂ,ಜೂ.1 : ಕೇಂದ್ರದ ಅಧಿಸೂಚನೆಯಂತೆ ಪ್ರಾಣಿ ಹಿಂಸೆ ತಡೆ ನಿಯಮಾವಳಿ 2017ರ ಅನ್ವಯ ಗೋವುಗಳ ಹತ್ಯೆಯ ಮೇಲೆ ಯಾವುದೇ ನಿಷೇಧವಿಲ್ಲ ಎಂದು ಅಭಿಪ್ರಾಯ ಪಟ್ಟಿರುವ ಕೇರಳ ಹೈಕೋರ್ಟಿನ ವಿಭಾಗೀಯ ಪೀಠವೊಂದು ಈ ನಿಯಮಾವಳಿಯ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯೊಂದನ್ನು ಹಿಂದಕ್ಕೆ ಪಡೆಯಲಾಗಿದೆ ಎಂದುಕೊಂಡು ಅದನ್ನು ವಜಾಗೊಳಿಸಿದೆ.

ಈ ನಿಯಮಾವಳಿಗಳು ಗೋ ಹತ್ಯೆಯನ್ನು ನಿಷೇಧಿಸಿಲ್ಲ, ಎಂದು ಈ ಅಪೀಲು ವಿಚಾರಣೆಗೆ ಬಂದಾಗ, ಮುಖ್ಯ ನ್ಯಾಯಮೂರ್ತಿ ನವನೀತಿ ಪ್ರಸಾದ್ ಸಿಂಗ್ ಅವರ ನೇತೃತ್ವದ ಪೀಠವು ಮೌಖಿಕವಾಗಿ ಅಭಿಪ್ರಾಯ ಪಟ್ಟಿತಲ್ಲದೆ ಅದು ಕೇವಲ ಜಾನುವಾರು ಮಾರುಕಟ್ಟೆಗಳಲ್ಲಿ ದನಗಳ ಮಾರಾಟವನ್ನು ನಿಷೇಧಿಸಿದೆ ಎಂದು ಹೇಳಿದೆ. ‘‘ನಿಯಮಗಳು ಅದಕ್ಕಿಂತ ಆಚೆ ಹೋಗಿಲ್ಲ’’ ಎಂದೂ ಅದು ತಿಳಿಸಿದೆ. ಮನೆಗಳಿಂದ ಅಥವಾ ಬೇರಿನ್ಯಾವ ಪ್ರದೇಶಗಳಿಂದಲೂ ದನಗಳನ್ನು ಮಾರಾಟ ಮಾಡಲು ನಿರ್ಬಂಧವಿಲ್ಲ ಎಂದು ಹೇಳಿದ ಪೀಠ ಯಾರು ಕೂಡ ದನವನ್ನು ಮಾರಾಟ ಮಾಡಬಹುದು ಯಾ ಹತ್ಯೆಗೈದು ಅದರ ಮಾಂಸವನ್ನು ಭಕ್ಷಿಸಬಹುದು ಎಂದು ಹೇಳಿದೆ.

ಸಂವಿಧಾನದ 21ನೇ ವಿಧಿ (ಬದುಕುವ ಹಕ್ಕು) ನಿಯಮಾವಳಿಗಳಿಂದ ಬಾಧಿತವಾಗಿದೆ ಎಂದು ಫಿರ್ಯಾದಿದಾರರ ಪರ ವಕೀಲರು ಹೇಳಿದಾಗ ‘‘ಗೋಮಾಂಸ ಮಾರಾಟ ಮಾಡದಂತೆ ನಿಮ್ಮನ್ನು ತಡೆದವರ್ಯಾರು ? ಗೋಮಾಂಸ ಮಾರಾಟ ನಿಷೇಧಿಸುವ ಬಗ್ಗೆ ಅಧಿಸೂಚನೆಯಲ್ಲಿ ಏನೂ ಹೇಳಲಾಗಿಲ್ಲ’’ ಎಂದು ಹೇಳಿತು.

‘ನಿಯಮಗಳನ್ನು ಓದಿ’

ಜನರು ನಿಯಮಗಳನ್ನು ಸರಿಯಾಗಿ ಓದಿಲ್ಲವಾದುದರಿಂದ ಉದ್ವಿಗ್ನರಾಗುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿತಲ್ಲದೆ ಜನರು ನಿಯಮಗಳನ್ನು ಓದಬೇಕೆಂಬ ಇರಾದೆಯೂ ಫಿರ್ಯಾದಿದಾರರಿಗೆ ಇದ್ದಂತಿಲ್ಲ ಎಂದು ಅಭಿಪ್ರಾಯ ಪಟ್ಟಿತು. ‘‘ನೀವೊಬ್ಬರು ಉತ್ಸಾಹಭರಿತ ವ್ಯಕ್ತಿಯಾಗಿದ್ದರೆ, ನಿಯಮಗಳನ್ನು ಜನರ ಬಳಿಗೆ ಒಯ್ಯಿರಿ,’’ ಎಂದು ನ್ಯಾಯಾಲಯ ಹೇಳಿತು.

ಫಿರ್ಯಾದಿದಾರ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ ಜಿ ಸುನಿಲ್ ಅವರು ಈ ಅಧಿಸೂಚನೆಯು ಆಹಾರದ ಮೇಲಿನ ಹಕ್ಕಿನ ಆಕ್ರಮಣವೆಂದು ಹೇಳಿದಾಗ ಗೋವುಗಳ ಮಾರಾಟದ ಮೇಲಿನ ನಿಯಂತ್ರಣ ಆಹಾರದ ಮೇಲಿನ ಹಕ್ಕಿನ ಉಲ್ಲಂಘನೆ ಹೇಗಾಗುವುದೆಂದು ನ್ಯಾಯಾಲಯ ಪ್ರಶ್ನಿಸಿತು. 

ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಅಚ್ಚರಿ

ಕೇಂದ್ರದ ಅಧಿಸೂಚನೆಗೆ ತಡೆಯಾಜ್ಞೆ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಕೇರಳ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ತರುವಾಯ ಕೇರಳ ಹೈಕೋರ್ಟಿನ ಮೌಖಿಕ ಅಭಿಪ್ರಾಯಗಳನ್ನು ಮನ್ನಿಸಿ ಫಿರ್ಯಾದಿದಾರರ ವಕೀಲರು ಅಪೀಲನ್ನು ನ್ಯಾಯಾಲಯದ ಅನುಮತಿ ಪಡೆದು ಹಿಂಪಡೆದುಕೊಂಡರು.

ಪ್ರಾಣಿಗಳ ರಕ್ಷಣೆ, ಸಂರಕ್ಷಣೆ, ಪ್ರಾಣಿಗಳ ರೋಗಗಳ ನಿಯಂತ್ರಣ, ಪಶುವೈದ್ಯಕೀಯ ತರಬೇತಿ ಮತ್ತು ಪಾಲನೆ ಇವುಗಳು ರಾಜ್ಯಗಳ ಅಧೀನದಲ್ಲಿ ಬರುವುದರಿಂದ ಕೇವಲ ರಾಜ್ಯಕ್ಕೆ ಮಾತ್ರ ಗೋವುಗಳ ಬಗೆಗೆ ಯಾವುದೇ ನಿಯಮಾವಳಿಗಳನ್ನು ರಚಿಸಲು ಅಧಿಕಾರವಿದೆ ಎಂದು ಫಿರ್ಯಾದಿದಾರರು ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X