Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ದಕ್ಕೆಯಲ್ಲಿ ಬೋಟ್‌ಗಳು ‘ಲಂಗರು’...

ಮಂಗಳೂರು ದಕ್ಕೆಯಲ್ಲಿ ಬೋಟ್‌ಗಳು ‘ಲಂಗರು’ ಹಾಕಲು ಸ್ಥಳಾವಕಾಶದ ಕೊರತೆ

ಮೀನುಗಾರಿಕೆಗೆ 2 ತಿಂಗಳು ರಜೆ

ವಾರ್ತಾಭಾರತಿವಾರ್ತಾಭಾರತಿ1 Jun 2017 11:30 PM IST
share
ಮಂಗಳೂರು ದಕ್ಕೆಯಲ್ಲಿ ಬೋಟ್‌ಗಳು ‘ಲಂಗರು’ ಹಾಕಲು ಸ್ಥಳಾವಕಾಶದ ಕೊರತೆ

ಮಂಗಳೂರು, ಜೂ.1: ರಾಜ್ಯ ಸರಕಾರವು ಪಶ್ಚಿಮ ಕರಾವಳಿಯ ತೀರದಲ್ಲಿ ಜೂ.1ರಿಂದ ಅನ್ವಯವಾಗುವಂತೆ ಜು. 31ರವರೆಗೆ (61 ದಿನ) ಮೀನುಗಾರಿಕೆಗೆ ನಿಷೇಧ ಹೇರಿದ ಹಿನ್ನಲೆಯಲ್ಲಿ ಮಂಗಳೂರು ದಕ್ಕೆಯಲ್ಲಿ ಸಾವಿರಾರು ಬೋಟ್‌ಗಳು ಲಂಗರು ಹಾಕಿವೆ.

ಈ ಮಧ್ಯೆ ಲಂಗರು ಹಾಕಲು ಸ್ಥಳಾವಕಾಶದ ಕೊರತೆಯಿಂದ ಬೋಟ್‌ಗಳ ಮಾಲಕರು ಕಂಗಾಲಾಗಿದ್ದಾರೆ.

ಮೊದಲೇ ಮೀನುಗಳ ಇಳಿಮುಖದಿಂದ ಕಂಗಾಲಾಗಿರುವ ಮೀನುಗಾರರು ಇದೀಗ ‘ಲಂಗರು’ ಸಮಸ್ಯೆಯಿಂದ ಮತ್ತಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಸರಕಾರವು ಆಗಸ್ಟ್ 1ರಿಂದ ಮೇ 31ರವರೆಗೆ ಮೀನುಗಾರಿಕೆಗೆ ಅವಕಾಶ ಮಾಡಿಕೊಡುತ್ತದೆ ಮತ್ತು ಜೂ.1ರಿಂದ ಜು.31ರವರೆಗೆ ಮೀನುಗಾರಿಕೆಗೆ ನಿಷೇಧ ಹೇರುತ್ತದೆ.

ಆದರೆ 9.9 ಎಚ್‌ಪಿ ಇಂಜಿನ್ ಸಾಮರ್ಥ್ಯದ ದೋಣಿ ಬಳಸಿ ಅಂದರೆ ಸಮುದ್ರ ತೀರದಿಂದ ಸುಮಾರು 12 ನಾಟಿಕಲ್ ಮೈಲ್ ವ್ಯಾಪ್ತಿಯೊಳಗೆ ಮೀನುಗಾರಿಕೆ ಮಾಡಬಹುದು.ಅದಲ್ಲದೆ ‘ಕರೆ ಫಿಶ್ಶಿಂಗ್’ (ಕಡಲ ತೀರದ ಮೀನುಗಾರಿಕೆ)ನ್ನೂ ಕೂಡ ಮಾಡಲಾಗುತ್ತದೆ. ಇದರಿಂದ ಮೀನುಗಳ ಸಂಗ್ರಹ ಹೆಚ್ಚೇನು ಇರುವುದಿಲ್ಲ. ಅಲ್ಲದೆ ಖರ್ಚು ಜಾಸ್ತಿಯಾಗುವ ಕಾರಣ ಮೀನಿನ ದರವೂ ಜಾಸ್ತಿಯಾಗಿರುತ್ತದೆ.

ಅಂದಹಾಗೆ, ಜೂನ್ ಮತ್ತು ಜುಲೈ ಮೀನುಗಳ ಸಂತಾನೋತ್ಪತ್ತಿಗೆ ಸಕಾಲವಾಗಿದೆ. ಈ ಸಾಂಪ್ರದಾಯಿಕ ಮೀನುಗಾರಿಕೆಯಿಂದ ಮೀನುಗಳ ಸಂತತಿ ನಾಶಕ್ಕೆ ಯಾವುದೇ ಅಡ್ಡಿ ಇಲ್ಲ. ಇನ್ನು ಮಳೆಗಾಲದಲ್ಲಿ ಗಾಳಿ, ಮಳೆ, ಚಂಡಮಾರುತ, ಸಮುದ್ರಗಳ ಅಬ್ಬರದಿಂದ ಮೀನುಗಾರಿಕೆಗೆ ಹಾನಿಯಾಗುವ ಸಂಭವವೂ ಇದೆ. ಪ್ರಾಣ ಮತ್ತು ಆಸ್ತಿಗಳ ಹಾನಿಯ ಹಿನ್ನಲೆಯೂ ಮೀನುಗಾರಿಕೆಗೆ ನಿಷೇಧ ಹೇರಲು ಕಾರಣವಾಗಿದೆ.

ಮಂಗಳೂರು ದಕ್ಕೆಯಲ್ಲಿ ಸದ್ಯ 1,370 ಗಿಲ್‌ನೆಟ್, 1,100 ಟ್ರಾಲ್ ಮತ್ತು ಪರ್ಸಿನ್ ಬೋಟ್ ಹಾಗು 530 ಸಣ್ಣ ದೋಣಿಗಳಿವೆ. ಆರಂಭದಲ್ಲಿ ಇಲ್ಲಿ ಕಡಿಮೆ ಸಂಖ್ಯೆಯಲ್ಲಿ ಬೋಟ್‌ಗಳಿತ್ತು. ಇದೀಗ ಅವುಗಳ ಸಂಖ್ಯೆ ಹೆಚ್ಚಿದ ಕಾರಣ ‘ಲಂಗರು’ ಹಾಕಲು ಜಾಗದ ಕೊರತೆಯಿದೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಬಳಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ವಿವಿಧ ಸಂಘಟನೆಗಳು ಮಾಡಿದ ಮನವಿಗಳಿಗೆ ಲೆಕ್ಕವೇ ಇಲ್ಲದಂತಾಗಿದೆ. ಎಲ್ಲರೂ ಭರವಸೆಗಳನ್ನು ನೀಡುತ್ತಾರೆಯೇ ವಿನ: ಯಾವುದೂ ಕಾರ್ಯಕತಗೊಳ್ಳುತ್ತಿಲ್ಲ ಎಂಬ ಮಾತು ಸಂಘಟನೆಗಳ ಪದಾಧಿಕಾರಿಗಳಿಂದ ಕೇಳಿ ಬರುತ್ತಿವೆ.

ಕೇಂದ್ರ ಸರಕಾರದ ನಿರ್ದೇಶನದ ಹಿನ್ನಲೆಯಲ್ಲಿ ಕರ್ನಾಟಕ ಮಾತ್ರವಲ್ಲ ಮಹಾರಾಷ್ಟ್ರ, ಗೋವಾ, ಕೇರಳದಲ್ಲೂ ಕೂಡ ಈ ಸಂದರ್ಭ ಮೀನುಗಾರಿಕೆಗೆ ನಿಷೇಧ ಹೇರಲಾಗುತ್ತದೆ. ಈ ಮಧ್ಯೆ ಆಂಧ್ರಪ್ರದೇಶ, ತಮಿಳುನಾಡಿನ ಪೂರ್ವ ಕರಾವಳಿಯಲ್ಲಿ ಎಪ್ರಿಲ್ 1ರಿಂದ ಮೇ 31ರವರೆಗೆ ಮೀನುಗಾರಿಕೆಗೆ ನಿಷೇಧವಿದ್ದು, ಜೂನ್ 1ರಂದು ಮೀನುಗಾರಿಕೆ ಆರಂಭಗೊಳ್ಳಲಿದೆ. ಹಾಗಾಗಿ ಮಂಗಳೂರು ಸಹಿತ ಪಶ್ಚಿಮ ಕರಾವಳಿ ತೀರಕ್ಕೆ ಪೂರ್ವ ಕರಾವಳಿ ತೀರದಿಂದ ಮೀನನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಸಾಗಾಟದ ವೆಚ್ಚ ದುಬಾರಿಯಾದುದರಿಂದ ಸಹಜವಾಗಿ ಮೀನುಗಳ ಬೆಲೆ ಗಗನಕ್ಕೆ ಏರುತ್ತಿವೆ.

ಮೀನುಗಾರಿಕೆಗೆ ನಿಷೇಧ ಹೇರಿದ ಹಿನ್ನಲೆಯಲ್ಲಿ ಈಗಾಗಲೆ ಬೋಟುಗಳನ್ನು ಲಂಗರು ಹಾಕಲಾಗಿದೆ. ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡ ಹಲವರು ಊರಿನತ್ತ ಪಯಣ ಬೆಳೆಸಿದರೆ ಇನ್ನು ಕೆಲವರು ದೋಣಿಗಳ ದುರಸ್ತಿ, ಬಲೆ ತಯಾರಿಕೆ ಇತ್ಯಾದಿಯಲ್ಲಿ ತೊಡಗಿಸಿಕೊಂಡಿದ್ದಾರೆ.

7 ವರ್ಷದಿಂದ ನನೆಗುದಿಗೆ: ಬೋಟುಗಳನ್ನು ಲಂಗರು ಹಾಕಿಸುವ ಸಲುವಾಗಿ ಮಂಗಳೂರು ದಕ್ಕೆಯಲ್ಲಿ 3ನೆ ಹಂತದ ಕಾಮಗಾರಿಗೆ 2010ರಲ್ಲಿ ಚಾಲನೆ ನೀಡಲಾಗಿತ್ತು. ಈಗಾಗಲೆ ಸುಮಾರು 57 ಕೋ.ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಇನ್ನೂ ಸುಮಾರು 30 ಕೋ.ರೂ. ವೆಚ್ಚದ ಕಾಮಗಾರಿಯಾಗಲು ಬಾಕಿ ಇದೆ. ಆದರೆ ಅನುದಾನದ ಕೊರತೆಯಿಂದ ಕಾಮಗಾರಿ ನಡೆಯುತ್ತಿಲ್ಲ. ಜನ ಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಜರಗಿಸಬೇಕಿದೆ.
ನಿತಿನ್ ಕುಮಾರ್
(ಮಾಜಿ ಅಧ್ಯಕ್ಷ, ಮೀನುಗಾರಿಕಾ ಅಭಿವೃದ್ಧಿ ನಿಗಮ)
ಅಧ್ಯಕ್ಷರು, ಮಂಗಳೂರು ಟ್ರಾಲ್‌ಬೋಟ್ ಮೀನುಗಾರರ ಸಂಘ

ಮಂಗಳೂರು ದಕ್ಕೆಯಲ್ಲಿ ಮೀನುಗಾರರು ಹಲವಾರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಒಂದೆಡೆ ಸೀಮೆಎಣ್ಣೆಯ ಕೊರತೆ, ಸಬ್ಸಿಡಿ ಸಮಸ್ಯೆಯ ಜೊತೆಗೆ ಬೋಟ್‌ಗಳನ್ನು ಲಂಗರು ಹಾಕಲು ಸ್ಥಳದ ಕೊರತೆಯಿದೆ. ಹಿಂದೆ ಹೊರಗಡೆಯ ಬೋಟ್‌ಗಳು ಲಂಗರು ಹಾಕುತ್ತಿತ್ತು. ಈಗ ಅದಕ್ಕೆ ಕಡಿವಾಣ ಹಾಕಲಾಗಿದೆ. ಆದರೆ ಮಂಗಳೂರು ದಕ್ಕೆಯಲ್ಲಿ ವರ್ಷದಿಂದ ವರ್ಷಕ್ಕೆ ಬೋಟ್‌ಗಳ ಸಂಖ್ಯೆ ಯಲ್ಲಿ ಹೆಚ್ಚಳವಾಗುತ್ತಿದೆಯೇ ವಿನ: ಅವುಗಳನ್ನು ಲಂಗರು ಹಾಕಲು ಸೂಕ್ತ ವ್ಯವಸ್ಥೆ ಇಲ್ಲ. ನಗರದ ರಸ್ತೆಗಳಲ್ಲಿ ಹೇಗೆ ಟ್ರಾಫಿಕ್ ಸಮಸ್ಯೆ ಇದೆಯೋ ಬಂದರ್ ದಕ್ಕೆಯಲ್ಲಿ ಬೋಟ್‌ಗಳನ್ನು ಲಂಗರು ಹಾಕಿಸುವುದೇ ದೊಡ್ಡ ಸಮಸ್ಯೆಯಾಗಿದೆ. ಈ ಬಗ್ಗೆ ಅಧಿಕಾರಿಗಳು ತುರ್ತು ಕ್ರಮ ಜರಗಿಸಬೇಕಿದೆ. ಬೋಟುಗಳನ್ನು ಬಲು ಹತ್ತಿರ ಲಂಗರು ಹಾಕುವುದರಿಂದ ಅವುಗಳು ಚಂಡ ಮಾರುತ, ತೂಫಾನುಗಳಿಗೆ ಪರಸ್ಪರ ಢಿಕ್ಕಿ ಹೊಡೆಯುವ ಸಾಧ್ಯತೆಯೂ ಇದೆ. ಈ ನಿಟ್ಟಿನಲ್ಲಿ ಲಂಗರು ಹಾಕಿದ ಬೋಟುಗಳಿಗೂ ರಕ್ಷಣೆ ಬೇಕಿದೆ.
ಅಲಿ ಹಸನ್,
ಅಧ್ಯಕ್ಷರು, ದ.ಕ.ಜಿಲ್ಲಾ ಗಿಲ್‌ನೆಟ್ ಮೀನುಗಾರರ ಸಂಘ

ಬೋಟ್‌ಗಳನ್ನು ಲಂಗರು ಹಾಕಲು ಜಾಗದ ಸಮಸ್ಯೆ ಇದೆ. 3ನೆ ಹಂತದ ಕಾಮಗಾರಿ ಪೂರ್ಣಗೊಂಡರೆ ಈ ಸಮಸ್ಯೆ ನೀಗಬಹುದು. ಅದಕ್ಕಾಗಿ ಸರ್ವ ಪ್ರಯತ್ನ ಮಾಡಲಾಗುತ್ತದೆ.
ಮಹೇಶ್ ಕುಮಾರ್, 
​ಉಪನಿರ್ದೇಶಕರು, ಮೀನುಗಾರಿಕಾ ಇಲಾಖೆ ದ.ಕ.ಜಿಲ್ಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X