Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಮಾರಧಾರಾ ನದಿ ದಾಟುತ್ತಿದ್ದ ವೇಳೆ...

ಕುಮಾರಧಾರಾ ನದಿ ದಾಟುತ್ತಿದ್ದ ವೇಳೆ ದಂಪತಿ ನೀರುಪಾಲು

ವಾರ್ತಾಭಾರತಿವಾರ್ತಾಭಾರತಿ1 Jun 2017 8:59 PM IST
share
ಕುಮಾರಧಾರಾ ನದಿ ದಾಟುತ್ತಿದ್ದ ವೇಳೆ ದಂಪತಿ ನೀರುಪಾಲು

ಪುತ್ತೂರು, ಜೂ.1  ನದಿ ದಾಟುತ್ತಿದ್ದ ವೇಳೆ ದಂಪತಿ ನೀರು ಪಾಲಾದ ಘಟನೆ ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಐರಳ ಎಂಬಲ್ಲಿ ಗುರುವಾರ ನಡೆದಿದೆ.

ಚಾರ್ವಾಕ ಗ್ರಾಮದ ಕುಂಬ್ಲಾಡಿ ಪರಮೇಶ್ವರ ಗೌಡ (56) ಹಾಗೂ ಭವಾನಿ (55) ನೀರು ಪಾಲಾದವರು ಎಂದು ಗುರುತಿಸಲಾಗಿದೆ.

ಕುಂತೂರು ಗ್ರಾಮದ ಎರ್ಮಳ್ ಎಂಬಲ್ಲಿಗೆ ಮದುವೆಗೆ ತೆರಳಿದ್ದ ಈ ದಂಪತಿ ಅಲ್ಲಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಕುಮಾರಧಾರಾ ಹೊಳೆ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಗುರುವಾರ ಮಧ್ನಾಹ  ದಂಪತಿಯ ಮೃತದೇಹಗಳು ಪತ್ತೆಯಾಗಿವೆ. ಬುಧವಾರ ಬೆಳಗ್ಗೆ ಶಾಂತಿಮೊಗರು ಮೂಲಕ ಪೆರಾಬೆಗೆ ಮದುವೆ ಕಾರ್ಯ ನಿಮಿತ್ತ ಪರಮೇಶ್ವರ ಹಾಗೂ ಭವಾನಿ ತೆರಳಿದ್ದು ಮದುವೆ ಕಾರ್ಯಕ್ರಮ ಮುಗಿಸಿ ಕುಂತೂರು, ಕುಂಬ್ಲಾಡಿ ಸಂಪರ್ಕಿಸುವ ಐರಳ ಮೂಲಕ ಕುಮಾರಾಧಾರಾ ನದಿ ದಾಟಲು ಪ್ರಯತ್ನಿಸಿದ್ದರು ಎಂದು ತಿಳಿದುಬಂದಿದೆ. 

ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಇಲ್ಲಿಂದ ನದಿ ದಾಟಲು ಸಾಧ್ಯವಾಗುತ್ತದೆಯಾದರೂ ಕಳೆದ ನಾಲ್ಕು ದಿನಗಳಿಂದ ಮಳೆ ಸುರಿದ ಕಾರಣ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದು ಮತ್ತು ಗುಂಡ್ಯದಲ್ಲಿರುವ ಗೇಟ್‌ನಿಂದ ಹೆಚ್ಚುವರಿ ನೀರನ್ನು ಹೊರಬಿಟ್ಟಿರುವುದು ಅವಘಡ ಸಂಭವಿಸಲು ಕಾರಣವಾಗಿರಬಹುದೆಂದು ಸ್ಥಳೀಯರು ತಿಳಿಸಿದ್ದಾರೆ.

ಪರಮೇಶ್ವರ್ ದಂಪತಿ ನೀರಿನಲ್ಲಿ ಮುಳುಗಿರುವ ನಿಖರ ಮಾಹಿತಿ ಯಾರಿಗೂ ಇರಲಿಲ್ಲ. ಕುಂತೂರಿನಿಂದ ನದಿ ಮಾರ್ಗವಾಗಿ ಅವರು ಸಾಗುತ್ತಿದ್ದರು ಎಂದು ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಹುಡುಗಾಟ ನಡೆದಿದೆ. ಈ ಸಂದರ್ಭ ಚಪ್ಪಲಿಯೊಂದು ನದಿ ನೀರಿನಲ್ಲಿ ತೇಳಾಡುತ್ತಿರುವುದು ಪತ್ತೆಯಾಗಿದ್ದು, ಆ ಚಪ್ಪಲಿ ಪರಮೇಶ್ವರ್‌ ರದ್ದು ಎಂದು ಅವರ ನೆರೆಮನೆಯವರು ತಿಳಿಸಿದ್ದರು. ಇದು ಪರಮೇಶ್ವರ್ ದಂಪತಿ ನೀರಲ್ಲಿ ಮುಳುಗಿರುವುದನ್ನ ಖಚಿತ ಪಡಿಸಿತ್ತು.

ತಣ್ಣೀರುಬಾವಿ ತಂಡದಿಂದ ಕಾರ್ಯಾಚರಣೆ

ಗುರುವಾರ ಬೆಳಗ್ಗೆಯೇ ಮಂಗಳೂರು ತಣ್ಣೀರು ಬಾವಿ ಮುಳುಗು ತಜ್ಙರ ತಂಡ ಸ್ಥಳಕ್ಕಾಗಮಿಸಿ ನೀರಿನಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯ ನಡೆಸಿತ್ತು. ತೀವ್ರ ಕಾರ್ಯಾಚರಣೆ ನಡೆಸಿದ ತಣ್ಣೀರುಬಾವಿ ತಂಡ ಮಧ್ಯಾಹ್ನದ ವೇಳೆಗೆ ಪರಮೇಶ್ವರ್ ಹಾಗೂ ಭವಾನಿಯವರ ಮೃತದೇಹವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು.

ಅಗ್ನಿಶಾಮಕ ದಳ ಸಿಬ್ಬಂದಿಯೂ ಇವರಿಗೆ ಸಾಥ್ ನೀಡಿದ್ದರು. ಘಟನಾ ಸ್ಥಳಕ್ಕೆ ಕಡಬ ಠಾಣಾ ಎಎಸ್‌ಐ ರವಿ ಎಂ.ಕೆ., ಕಡಬ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಕಾಣಿಯೂರು ಗ್ರಾಪಂ ಅಧ್ಯಕ್ಷೆ ಸೀತಮ್ಮ ಖಂಡಿಗ, ರಾಮಕುಂಜ ಗ್ರಾಪಂ ಅಧ್ಯಕ್ಷ ಪ್ರಶಾಂತ್ ಆರ್.ಕೆ., ಗ್ರಾಮಕರಣಿಕ ಪುಷ್ಪರಾಜ್, ಗಣೇಶ್ ಉದನಡ್ಕ, ಎ.ಪಿ. ಮೋಹನ್ ಮೊದಲಾದವರು ಆಗಮಿಸಿ, ಮೃತ ದೇಹ ಪತ್ತೆ ಹಚ್ಚುವಲ್ಲಿ ಸಹಕರಿಸಿದ್ದರು.

ಹಲವು ಮಂದಿ ಮೃತ್ಯು
ಚಾರ್ವಾಕ ಗ್ರಾಮದ ಸಮೀಪ ಕುಮಾರಧಾರಾ ನದಿ ನೀರಿನಲ್ಲಿ ಮುಳುಗಿ ಹಲವು ಮಂದಿ ಮೃತಪಟ್ಟಿದ್ದು, ಕಳೆದ ನಾಲ್ಕು ತಿಂಗಳ ಹಿಂದೆ ಇದೇ ಪರಿಸರದಲ್ಲಿ ತೆಪ್ಪ ಮುಳುಗಿ ಕುಂಞಣ್ಣ ಹಾಗೂ ಗಣೇಶ್ ಎಂಬವರು ಮೃತಪಟ್ಟಿದ್ದರು. ಹಲವು ವರ್ಷಗಳ ಹಿಂದೆ ಕಾಂಗ್ರೆಸ್ ಮುಖಂಡ ಸಿ.ಪಿ. ಜಯರಾಮ ಗೌಡರ ಪುತ್ರ ವಿಶ್ವಾಸ್ ಅರುವ ಹಾಗೂ ಅವರ ಸಂಬಂಧಿಕರೊಬ್ಬರು ಇದೇ ಸ್ಥಳದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಸ್ಥಳೀಯರಾದ ರಾಮಣ್ಣ ಗೌಡ ಹಾಗೂ ಮಹಿಳೆಯರಿಬ್ಬರೂ ಮುಳುಗಿ ಅಸುನೀಗಿದ್ದಾರೆ ಸ್ಥಳೀಯರಾದ ಸಂಕಪ್ಪ ಗೌಡ ಇಲ್ಲಿ ನದಿ ದಾಟುತ್ತಿದ್ದ ವೇಳೆಯೇ ನೀರಿನ ಸೆಳೆತಕ್ಕೆ ಸಿಲುಕಿ ಕಣ್ಮರೆಯಾಗಿದ್ದರು.

ಫೋಟೋ: 1ಪಿಟಿಆರ್-ಪರಮೇಶ್ವರ್, 1ಪಿಟಿಆರ್- ಭವಾನಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X