Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೀಘ್ರ ಯಕ್ಷಗಾನ, ಬಯಲಾಟಗಳಿಗೆ ಪ್ರತ್ಯೇಕ...

ಶೀಘ್ರ ಯಕ್ಷಗಾನ, ಬಯಲಾಟಗಳಿಗೆ ಪ್ರತ್ಯೇಕ ಅಕಾಡೆಮಿ: ಕಿಶನ್ ಹೆಗ್ಡೆ

ಕಲಾವಿದರ ಸಾಕ್ಷಚಿತ್ರ, ಯಕ್ಷಪ್ರಸಂಗ ಪುಸ್ತಕ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ1 Jun 2017 11:31 PM IST
share
ಶೀಘ್ರ ಯಕ್ಷಗಾನ, ಬಯಲಾಟಗಳಿಗೆ ಪ್ರತ್ಯೇಕ ಅಕಾಡೆಮಿ: ಕಿಶನ್ ಹೆಗ್ಡೆ

ಉಡುಪಿ, ಜೂ.1: ಕರಾವಳಿ ಮತ್ತು ಉತ್ತರ ಕರ್ನಾಟಕದ ಜನಪ್ರಿಯ ಕಲಾಪ್ರಕಾರಗಳಾದ ಯಕ್ಷಗಾನ ಮತ್ತು ಬಯಲಾಟಗಳಿಗೆ ಈವರೆಗೆ ಇದ್ದ ಒಂದೇ ಅಕಾಡೆಮಿ ಶೀಘ್ರದಲ್ಲೇ ಯಕ್ಷಗಾನ ಮತ್ತು ಬಯಲಾಟ ಎನ್ನುವ ಎರಡು ಪ್ರತ್ಯೇಕ ಅಕಾಡೆಮಿಗಳಾಗಿ ಕಾರ್ಯನಿರ್ವಹಿಸಲಿವೆ ಎಂದು ರಾಜ್ಯ ಯಕ್ಷಗಾನ ಬಯಲಾಟ ಅಕಾಡೆಮಿಯ ಸದಸ್ಯ ಹಾಗೂ ಯಕ್ಷಗಾನ ಮೇಳಗಳ ಮಾಲಕ ಪಿ.ಕಿಶನ್ ಹೆಗ್ಡೆ ಹೇಳಿದ್ದಾರೆ.

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ವತಿಯಿಂದ ಗುರುವಾರ ಇಂದ್ರಾಳಿಯಲ್ಲಿರುವ ಯಕ್ಷಗಾನ ಕೇಂದ್ರದಲ್ಲಿ ನಡೆದ ಯಕ್ಷ ಕಲಾವಿದರ ಸಾಕ್ಷಚಿತ್ರ ಬಿಡುಗಡೆ ಹಾಗೂ ಯಕ್ಷಗಾನ ಪ್ರಸಂಗ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಇದಕ್ಕೆ ಸಂಬಂಧಿಸಿದಂತೆ ಸರಕಾರದ ಮಟ್ಟದಲ್ಲಿ ಅಗತ್ಯ ಕಾರ್ಯಗಳು ನಡೆಯುತಿದ್ದು, ಪ್ರಕ್ರಿಯೆಗಳು ಅಂತಿಮ ಹಂತದಲ್ಲಿವೆ. ಯಕ್ಷಗಾನಕ್ಕೆ ಪ್ರತ್ಯೇಕವಾದ ಅಕಾಡೆಮಿ ಪ್ರಾರಂಭಗೊಂಡಾಗ ಹೆಚ್ಚಿನ ಅನುದಾನಗಳು ಯಕ್ಷಗಾನಕ್ಕೆ ಸಿಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ಅಕಾಡೆಮಿಯ ಮೂಲಕ ಸುಮಾರು 100ಕ್ಕೂ ಅಧಿಕ ತೆಂಕು, ಬಡಗುತಿಟ್ಟಿನ ಕಲಾವಿದರ ವೇಷ, ಭಾಗವತಿಕೆ, ನೃತ್ಯಗಳ ಸಾಕ್ಷಚಿತ್ರಗಳನ್ನು ತಯಾರಿಸಿ ದಾಖಲೀಕರಣ ಮಾಡಲಾಗಿದೆ. ಅನ್ಯ ಜಿಲ್ಲೆ ಹಾಗೂ ರಾಜ್ಯಗಳ ಜೊತೆಗೆ ಸಾಂಸ್ಕೃತಿಕ ವಿನಿಮಯವನ್ನೂ ಮಾಡಿಕೊಳ್ಳಲಾಗುತ್ತಿದೆ ಎಂದವರು ವಿವರಿಸಿದರು.

ಖ್ಯಾತ ಕಲಾ ವಿಮರ್ಶಕ ಹಾಗೂ ಹಿರಿಯ ಪತ್ರಕರ್ತ ಎ.ಈಶ್ವರಯ್ಯ ಮಾತನಾಡಿ, ಕಲೆಯಲ್ಲಿ ಪ್ರಯೋಗಾತ್ಮಕ ಹೆಜ್ಜೆ ಇಡಬೇಕಾದರೆ ದಾಖಲೀಕರಣ ಅಗತ್ಯವಾಗಿ ಆಗಬೇಕಾಗಿದೆ. ಹಿಂದಿನ ಕಾಲದಲ್ಲಿ ಸಮಕಾಲೀನರು ಸಾಧಕರ ಬಗ್ಗೆ ದಾಖಲೀಕರಣ ಮಾಡಿಕೊಳ್ಳದ ಕಾರಣ ಪರಿಣಾಮಕಾರಿ ಹೆಜ್ಜೆ ತಪ್ಪಿ ಹೋಗಿದೆ. ಕಲೆಯ ವಿಕಾಸವನ್ನು ಸಮಗ್ರವಾಗಿ ಕಲೆ ಹಾಕಲು, ಮುಂದಿನ ಪೀಳಿಗೆಗೆ ಅರ್ಥೈಸಲು ಸಾಕ್ಷಚಿತ್ರಗಳ ದಾಖಲೀಕರಣದಿಂದ ಮಾತ್ರ ಸಾಧ್ಯ ಎಂದರು.

ಖ್ಯಾತ ಕಲಾ ವಿಮರ್ಶಕ ಹಾಗೂ ಹಿರಿಯ ಪತ್ರಕರ್ತ ಎ.ಈಶ್ವರಯ್ಯ ಮಾತನಾಡಿ, ಕಲೆಯಲ್ಲಿ ಪ್ರಯೋಗಾತ್ಮಕ ಹೆಜ್ಜೆ ಇಡಬೇಕಾದರೆ ದಾಖಲೀಕರಣ ಅಗತ್ಯವಾಗಿ ಆಗಬೇಕಾಗಿದೆ. ಹಿಂದಿನ ಕಾಲದಲ್ಲಿ ಸಮಕಾಲೀನರು ಸಾಕರ ಬಗ್ಗೆ ದಾಖಲೀಕರಣ ಮಾಡಿಕೊಳ್ಳದ ಕಾರಣ ಪರಿಣಾಮಕಾರಿ ಹೆಜ್ಜೆ ತಪ್ಪಿಹೋಗಿದೆ. ಕಲೆಯ ವಿಕಾಸವನ್ನು ಸಮಗ್ರವಾಗಿ ಕಲೆ ಹಾಕಲು, ಮುಂದಿನ ಪೀಳಿಗೆಗೆ ಅರ್ಥೈಸಲು ಸಾಕ್ಷಚಿತ್ರಗಳ ದಾಖಲೀಕರಣದಿಂದ ಮಾತ್ರ ಸಾಧ್ಯ ಎಂದರು.

ಯಕ್ಷಗಾನದ ಹಿರಿಯ ಕಲಾವಿದರಾದ ಹಿರಿಯಡ್ಕ ಗೋಪಾಲ ರಾವ್, ಕೊಳ್ಯೂರು ರಾಮಚಂದ್ರ ರಾವ್, ಕೆ.ಗೋವಿಂದ ಭಟ್, ಪೇತ್ರಿ ಮಾಧವ ನಾಯ್ಕಿ, ಲೀಲಾವತಿ ಬೈಪಡಿತ್ತಾಯ ಅವರ ಕುರಿತ ಸಾಕ್ಷಚಿತ್ರಗಳ ಧ್ವನಿಮುದ್ರಿಕೆಗಳನ್ನು ಈ ಕಲಾವಿದರ ಉಪಸ್ಥಿತಿಯಲ್ಲೇ ಕಲಾವಿಮರ್ಶಕ ಎ. ಈಶ್ವರಯ್ಯ ಬಿಡುಗಡೆ ಮಾಡಿದರು.

ದಿ. ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿ ರಚಿಸಿದ ‘ವರ್ಣ ವೈಷಮ್ಯ’ ಕೃತಿಯನ್ನು ಖ್ಯಾತ ವೈದ್ಯ ಹಾಗೂ ತುಳುಕೂಟ ಉಡುಪಿ ಅಧ್ಯಕ್ಷ ಡಾ. ಭಾಸ್ಕರಾನಂದ ಕುಮಾರ್ ಬಿಡುಗಡೆಗೊಳಿಸಿದರು.

ಇದೇ ಸಂದರ್ಭದಲ್ಲಿ ಈ ಬಾರಿಯ ಕೇಂದ್ರ ಅಕಾಡೆಮಿ ಪ್ರಶಸ್ತಿ ಪಡೆದ ತೆಂಕುತಿಟ್ಟಿನ ಹಿರಿಯ ಕಲಾವಿದ ಕೆ. ಗೋವಿಂದ ಭಟ್ ಅವರನ್ನು ಆತ್ಮೀಯ ವಾಗಿ ಸನ್ಮಾನಿಸಲಾಯಿತು. ಕಲಾವಿದ ಸದಾಶಿವ ಶೆಟ್ಟಿ, ರಾಮಮೂರ್ತಿ, ಹೆರಂಜೆ ಕೃಷ್ಣ ಭಟ್ ಉಪಸ್ಥಿತರಿದ್ದರು.

ಅಕಾಡೆಮಿ ರಿಜಿಸ್ಟ್ರಾರ್ ಎಸ್.ಎಚ್. ಶಿವರುದ್ರಪ್ಪ ಸ್ವಾಗತಿಸಿದರೆ, ಯಕ್ಷ ಕಲಾವಿದ, ಪ್ರಸಂಗಕರ್ತ ಹಾಗೂ ಸಾಹಿತಿ ಅಂಬಾತನಯ ಮುದ್ರಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X