Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವರ ಮೇಲೆ ನಂಬಿಕೆಯಿರಲಿ; ಮೂಢನಂಬಿಕೆ...

ದೇವರ ಮೇಲೆ ನಂಬಿಕೆಯಿರಲಿ; ಮೂಢನಂಬಿಕೆ ಅಲ್ಲ: ಮುರುಘಾ ಶ್ರೀ

ರಾಷ್ಟ್ರೀಯ ಏಕತಾ ಶರಣ ಮೇಳ

ವಾರ್ತಾಭಾರತಿವಾರ್ತಾಭಾರತಿ2 Jun 2017 10:29 PM IST
share
ದೇವರ ಮೇಲೆ ನಂಬಿಕೆಯಿರಲಿ; ಮೂಢನಂಬಿಕೆ ಅಲ್ಲ: ಮುರುಘಾ ಶ್ರೀ

ಚಿತ್ರದುರ್ಗ, ಜೂ.2: ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ತತ್ವವನ್ನು ಅನುಸರಿಸು ತ್ತಿದ್ದರಿಂದ ವಚನ ಚಳವಳಿಯು ಯಶಸ್ಸನ್ನು ಪಡೆಯಿತು. ಅಲ್ಲಿ ಸಂಗ್ರಹಿಸುವ ಪ್ರವೃತ್ತಿಗೆ ಅವಕಾಶ ಇರಲಿಲ್ಲ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.
ಕೇರಳ ರಾಜ್ಯದ ಗುರುವಾಯೂರಿನಲ್ಲಿ ಬಸವಕೇಂದ್ರ ಮುರುಘಾಮಠ ಮತ್ತು ಬಸವಕೇಂದ್ರ ಕೇರಳ ರಾಜ್ಯ ಇವುಗಳ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಏಕತಾ ಶರಣಮೇಳದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ದೇವರ ಸುತ್ತ ಅನೇಕ ಬಗೆಯ ಆಚರಣೆಗಳಿವೆ. ಅವುಗಳಲ್ಲಿ ಮುಖ್ಯವಾಗಿ ಮೂಢನಂಬಿಕೆಗಳು. ಬದುಕಿನಲ್ಲಿ ನಂಬಿಕೆ ಇರಲಿ. ಆದರೆ ಮೂಢನಂಬಿಕೆ ಇರಬಾರದು. ಧರ್ಮದ ಸುತ್ತಲೂ ಕೆಲವೊಂದು ಕಟ್ಟುಪಾಡುಗಳು ಅರ್ಥಾತ್ ಕಟ್ಟಳೆಗಳು. ದೇವರ ಮೇಲೆ ನಂಬಿಕೆ ಇರಲಿ; ಮೂಢನಂಬಿಕೆ ಇರಬಾರದು. ಜನರು ಅವರವರ ಧರ್ಮವನ್ನು ಆಚರಿಸಲಿ.

ಆದರೆ ಕಠಿಣತರವಾದ ಕಟ್ಟುಪಾಡುಗಳನ್ನು ಆಚರಿಸಬಾರದು. ಈ ನಿಟ್ಟಿನಲ್ಲಿ ಬಸವಣ್ಣನವರು ಮತ್ತವರ ಸಮಕಾಲೀನ ಶರಣರು ಸಮಾಜದಲ್ಲಿ ಬೇರುಬಿಟ್ಟಿದ್ದ ಹಲವಾರು ಮೂಢನಂಬಿಕೆಗಳನ್ನು ಖಂಡಿಸಿದರು.


ವಿಜ್ಞಾನಿಗಳದ್ದು ವೈಜ್ಞ್ಞಾನಿಕ ಸಾಧನೆ. ಹೊಸಹೊಸ ಅನ್ವೇಷಣೆ ಮಾಡುತ್ತಲೇ ಇರುತ್ತಾರೆ. ಅವರದು ವೈಜ್ಞಾನಿಕ ಸಾಹಸ. ತಂತ್ರಜ್ಞಾನದಲ್ಲಿ ಹೆಚ್ಚಿನ ಅನ್ವೇಷಣೆಗಳು ನಡೆಯುತ್ತಲೇ ಇರುತ್ತವೆ. ಕ್ರೀಡಾಕ್ಷೇತ್ರ, ಕೃಷಿಕ್ಷೇತ್ರ, ಶೈಕ್ಷಣಿಕ ಕ್ಷೇತ್ರ ಮುಂತಾದ ಕ್ಷೇತ್ರಗಳಲ್ಲಿ ಸಾಧನೆ ನಡೆಯುತ್ತವೆ. ಸತ್ಪುರುಷರದು ಸಾಮಾಜಿಕವಾದ ಸಾಧನೆ.

ಸಮಾಜದಲ್ಲಿ ಅಡಗಿರುವ ಉಚ್ಛ-ನೀಚ ಭಾವನೆಗಳನ್ನು ಕಿತ್ತೊಗೆಯಲು ಸದಾ ಶ್ರಮಿಸುತ್ತಾರೆ. ಲಿಂಗ ತಾರತಮ್ಯ ಮತ್ತು ಅಲಕ್ಷಿತರಿಗೆ ಸಮಾನತೆ ಕೊಡಮಾಡದ ಶಾಸ್ತ್ರಗಳನ್ನು ಪ್ರಶ್ನಿಸುತ್ತಾರೆ ಮತ್ತು ಟೀಕಿಸುತ್ತಾರೆ. ಇಂಥ ಪ್ರಶ್ನೆಗಳನ್ನು ಎತ್ತುವುದರ ಮೂಲಕ ಬಸವಣ್ಣನವರು ಮುಕ್ತ ವಿಚಾರವಾದಿ ಎನಿಸಿಕೊಂಡಿದ್ದಾರೆ ಎಂದರು.


ಅನೇಕರು ದೇವರನ್ನು ಬಹಿರಂಗದಲ್ಲಿ ಹುಡುಕುತ್ತಾರೆ. ಆದರೆ ಪ್ರಾಜ್ಞರು ತತ್ವವೇತ್ತರು ಮತ್ತು ಸಮಾಜ ಸುಧಾರಕರು ದೇವರನ್ನು ತಮ್ಮಾಳಗೆ ಹುಡುಕುತ್ತಾರೆ. ಉಳ್ಳವರು ದೊಡ್ಡದೊಡ್ಡ ದೇವಸ್ಥಾನವನ್ನು ಕಟ್ಟುತ್ತಾರೆ.

ದೇವಸ್ಥಾನಗಳಲ್ಲಿ ಕೆಳವರ್ಗದವರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಅಂಥ ಸಂದರ್ಭದಲ್ಲಿ ಶರಣ ಚಳವಳಿಯು ಅಂಗದ ಮೇಲೆ ಇಷ್ಟಲಿಂಗವನ್ನು ಧರಿಸುವ ಪದ್ಧತಿಗೆ ಮಹತ್ವ ನೀಡಿತು ಎಂದರು.
ಗುರುವಾಯೂರು ಮಾಜಿ ಶಾಸಕ ಟಿ.ವಿ. ಚಂದ್ರಮೋಹನ್, ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಕೆ.ವಿ. ಪ್ರಭಾಕರ್, ಕೇರಳ ಬಸವಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಕೆ. ವಿಜಯನ್ ಮತ್ತು ಕೇರಳ ಬಸವಕೇಂದ್ರ ಅಧ್ಯಕ್ಷ ಪ್ರಸನ್ನಕುಮಾರ್ ವೇದಿಕೆಯಲ್ಲಿದ್ದರು.


  ರಾವಂದೂರು ಮುರುಘಾಮಠದ ಮೋಕ್ಷಪತಿ ಮಹಾಸ್ವಾಮೀಜಿ, ಶಿವಮೊಗ್ಗ ಬಸವಕೇಂದ್ರದ ಮರುಳಸಿದ್ಧ ಸ್ವಾಮೀಜಿ, ಕವಲೆತ್ತು ಬಸವಕೇಂದ್ರದ ಶರಣೆ ಮುಕ್ತಾಯಕ್ಕ, ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಹಾವೇರಿ ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ ಮುಂತಾದವರು ಉಪಸ್ಥಿತರಿದ್ದರು.
ಪ್ರಸನ್ನಕುಮಾರ್ ಸ್ವಾಗತಿಸಿದರು. ಕೊಪ್ಪಳದ ಸಿದ್ಧ ಲಿಂಗ ದೇವರು ನಿರೂಪಿಸಿದರು. ಪ್ರಿಯದರ್ಶಿನಿ ಸಾಣಿಕೊಪ್ಪವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X