Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹುತಾತ್ಮ ಯೋಧನ ಪತ್ನಿಯನ್ನು ಅಪಮಾನಿಸಿದ...

ಹುತಾತ್ಮ ಯೋಧನ ಪತ್ನಿಯನ್ನು ಅಪಮಾನಿಸಿದ ಹರ್ಯಾಣ ಸರಕಾರ

ವಾರ್ತಾಭಾರತಿವಾರ್ತಾಭಾರತಿ2 Jun 2017 11:10 PM IST
share

ಹೊಸದಿಲ್ಲಿ, ಜೂ.2: ಪರಿಹಾರ ರೂಪದಲ್ಲಿ ಉದ್ಯೋಗ ನೀಡಬೇಕೆಂದು ಹರ್ಯಾಣ ಸರಕಾರಕ್ಕೆ ಕೋರಿಕೆ ಸಲ್ಲಿಸಿದ್ದ ಸೇನೆಯ ಹುತಾತ್ಮ ಯೋಧನ ಪತ್ನಿಯನ್ನು ಸರಕಾರ ಅಪಮಾನಿಸಿದ ಘಟನೆ ವರದಿಯಾಗಿದೆ.

ತನ್ನ ಮೈದುನನನ್ನು ವಿವಾಹವಾಗಿಲ್ಲ ಮತ್ತು ಮುಂದಿನ ದಿನದಲ್ಲಿ ಆತನನ್ನು ವರಿಸುವುದಿಲ್ಲ ಎಂದು ಮುಚ್ಚಳಿಕೆ ನೀಡುವಂತೆ ಸರಕಾರ ಆಕೆಗೆ ತಿಳಿಸಿದೆ. ಸಿಖ್ ರೆಜಿಮೆಂಟ್‌ನ ಯೋಧ ಮಂದೀಪ್ ಸಿಂಗ್ ಎಂಬಾತ 2016ರಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಘರ್ಷಣೆಯ ಸಂದರ್ಭ ಹುತಾತ್ಮನಾಗಿದ್ದ. ಈತನ ತಲೆಯನ್ನು ಕತ್ತರಿಸಿ ಮೃತದೇಹವನ್ನು ವಿರೂಪಗೊಳಿಸಲಾಗಿತ್ತು. ಈತನ ಪತ್ನಿ ಪ್ರೇರಣಾ ಹರ್ಯಾಣ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಆಗಿದ್ದಾರೆ. ಯೋಧ ಹುತಾತ್ಮನಾದ ಸಂದರ್ಭದಲ್ಲಿ ಈಕೆಗೆ ಇನ್‌ಸ್ಪೆಕ್ಟರ್ ಹುದ್ದೆಗೆ ಭಡ್ತಿ ಮತ್ತು ಈಕೆಯ ಮೈದುನ (ಮೃತ ಯೋಧನ ಸಹೋದರ)ನಿಗೆ ಸರಕಾರಿ ಉದ್ಯೋಗವನ್ನು ನೀಡುವುದಾಗಿ ರಾಜ್ಯ ಸರಕಾರ ಘೋಷಿಸಿತ್ತು. ಆದರೆ ಭಡ್ತಿ ನೀಡುವುದು ಹಾಗಿರಲಿ, ತನ್ನನ್ನು ಸತತವಾಗಿ ಅಪಮಾನ ಮಾಡಲಾಗುತ್ತಿದೆ ಎಂದು ಪ್ರೇರಣಾ ಹೇಳಿದ್ದಾರೆ.

ಇತ್ತೀಚೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹರ್ಯಾಣಕ್ಕೆ ಭೇಟಿ ನೀಡಿದ್ದಾಗ ಅವರ ಭದ್ರತೆಗೆಂದು ನಿಯೋಜಿಸಲಾಗಿದ್ದ ತಂಡದಲ್ಲಿದ್ದ ಪ್ರೇರಣಾರನ್ನು ಬದಲಿಸಲಾಗಿತ್ತು. ಕೇಂದ್ರ ಗೃಹ ಸಚಿವರ ಭದ್ರತಾ ತಂಡದಲ್ಲಿ ಓರ್ವ ಹುತಾತ್ಮ ಯೋಧನ ಪತ್ನಿ ಇದ್ದರೆ ಸಮಸ್ಯೆ ಆದೀತು ಎಂದು ಅವರು ಭಾವಿಸಿರಬಹುದು ಎಂದು ಪ್ರೇರಣಾ ಅಳಲು ತೋಡಿಕೊಂಡಿದ್ದಾರೆ. ಆದರೆ ಪ್ರೇರಣಾಗೆ ಸರಕಾರ ಈ ರೀತಿಯ ಷರತ್ತು ವಿಧಿಸಿಲ್ಲ ಎಂದು ಸೈನಿಕ್ ಕಲ್ಯಾಣ ಮಂಡಳಿ ತಿಳಿಸಿದೆ. ಮಂದೀಪ್‌ನ ಸೋದರ ಸಂದೀಪ್‌ಗೆ ಸರಕಾರಿ ಉದ್ಯೋಗ ನೀಡಲಾಗುವುದು. ಅಲ್ಲದೆ ಹುತಾತ್ಮ ಯೋಧನ ಕುಟುಂಬಕ್ಕೆ ಈಗಾಗಲೇ 50 ಲಕ್ಷ ರೂ. ಪರಿಹಾರ ಧನ ನೀಡಲಾಗಿದೆ ಎಂದು ಸರಕಾರ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X