Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣಾ ಆಯೋಗದ ‘ಹ್ಯಾಕಥಾನ್’ಗೆ...

ಚುನಾವಣಾ ಆಯೋಗದ ‘ಹ್ಯಾಕಥಾನ್’ಗೆ ಹೈಕೋರ್ಟ್ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ2 Jun 2017 11:13 PM IST
share

ಹೊಸದಿಲ್ಲಿ, ಜೂ.2: ಶನಿವಾರ ನಡೆಸಲು ಉದ್ದೇಶಿಸಿರುವ ಹ್ಯಾಕಥಾನ್‌ಗೆ 14 ಇಎಂವಿ(ವಿದ್ಯುನ್ಮಾನ ಮತಯಂತ್ರ)ಗಳನ್ನು ಚುನಾವಣಾ ಆಯೋಗ ಅಣಿಗೊಳಿಸಿದ್ದು ಈ ಯಂತ್ರಗಳನ್ನು ತಿರುಚಲು ಸಾಧ್ಯ ಎಂಬ ಆರೋಪವನ್ನು ಸಾಬೀತುಪಡಿಸಲು ರಾಜಕೀಯ ಪಕ್ಷಗಳಿಗೆ ಅವಕಾಶ ಮಾಡಿಕೊಟ್ಟಿದೆ. ಈ ಮತಯಂತ್ರಗಳನ್ನು ಇತ್ತೀಚೆಗೆ ನಡೆದಿದ್ದ ಉ.ಪ್ರದೇಶ ಮತ್ತು ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಬಳಸಲಾಗಿತ್ತು. ಈ ಮಧ್ಯೆ, ಹ್ಯಾಕಥಾನ್ ಕಾರ್ಯಕ್ರಮ ಅಸಾಂವಿಧಾನಿಕ ಎಂದು ತಿಳಿಸಿರುವ ಉತ್ತರಾಖಂಡ ಹೈಕೋರ್ಟ್, ತಾನು ಇದನ್ನು ರದ್ದುಪಡಿಸಬಹುದು ಎಂದು ತಿಳಿಸಿದೆ. ಹ್ಯಾಕಥಾನ್ ನಡೆಸಲು ಚುನಾವಣಾ ಆಯೋಗಕ್ಕೆ ಅಧಿಕಾರವಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತ ಡಾ. ರಮೇಶ್ ರೆಡ್ಡಿ ಎಂಬವರು ಸಲ್ಲಿಸಿರುವ ಅರ್ಜಿಯ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಹೇಳಿಕೆ ನೀಡಿದೆ. ಚುನಾವಣಾ ಆಯೋಗ ವ್ಯವಸ್ಥೆಗೊಳಿಸಿರುವ ಹ್ಯಾಕಥಾನ್ ಜೂ.3ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ. 14 ಇಎಂವಿಗಳನ್ನು ಸಿದ್ಧವಾಗಿಡಲಾಗಿದೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಎಡಪಕ್ಷಗಳು ಹ್ಯಾಕಥಾನ್ ಸವಾಲು ಸ್ವೀಕರಿಸುವುದಾಗಿ ತಿಳಿಸಿರುವ ಕಾರಣ ಈ ಪಕ್ಷಗಳ ಪ್ರತಿನಿಧಿಗಳಿಗೆ ತಲಾ ನಾಲ್ಕು ಯಂತ್ರಗಳನ್ನು ‘ತಿರುಚಿ ತೋರಿಸಲು’ ನೀಡಲಾಗುವುದು. ಈ ಪ್ರಕ್ರಿಯೆ ಎರಡು ಹಂತದಲ್ಲಿ ನಡೆಯುತ್ತದೆ. ಪ್ರಥಮ ಹಂತದಲ್ಲಿ- ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಳಸಲಾಗಿದ್ದ ಈ ಯಂತ್ರಗಳಲ್ಲಿ ಸಂಗ್ರಹವಾದ ಮತಗಳನ್ನು ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷದ ಪರ ದಾಖಲಾಗುವಂತೆ ತಿರುಚಲಾಗಿದೆ ಎಂಬುದನ್ನು ಹ್ಯಾಕರ್‌ಗಳು ಸಾಬೀತುಪಡಿಸಬೇಕು. ಎರಡನೆ ಹಂತದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಳಸಲಾದ ಮತ ಯಂತ್ರಗಳನ್ನು ಮತದಾನಕ್ಕಿಂತ ಮೊದಲು ಅಥವಾ ಬಳಿಕ ತಿರುಚಲಾಗಿದೆ ಎಂದು ಹ್ಯಾಕರ್‌ಗಳು ಸಾಬೀತು ಪಡಿಸಬೇಕಿದೆ. ‘ತಿರುಚುವ ಯತ್ನ’ ನಡೆಸುವಾಗ ಮತಯಂತ್ರ ಕಾರ್ಯಾಚರಣೆ ಸ್ಥಗಿತಗೊಳಿಸಿದರೆ ಆಗ ಹ್ಯಾಕರ್‌ಗಳು ವಿಫಲರಾದರು ಎಂದರ್ಥ. ಒಂದು ಪಕ್ಷದ ಮೂವರು ಸದಸ್ಯರು ಪಾಲ್ಗೊಳ್ಳಬಹುದಾಗಿದ್ದು ಇವರು ಇವಿಎಂಗಳ ಒಳಗಿರುವ ಸರ್ಕ್ಯೂಟ್‌ಗಳು, ಚಿಪ್ಸ್, ಮದರ್‌ಬೋರ್ಡ್ ಇವುಗಳನ್ನು ಭೌತಿಕವಾಗಿ ಪರೀಕ್ಷಿಸಬಹುದು. ಆದರೆ ಯಾವುದೇ ಭಾಗಗಳನ್ನು ಬದಲಿಸುವಂತಿಲ್ಲ ಎಂಬ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧಗಳಿಗೆ ಅರವಿಂದ್ ಕೇಜ್ರೀವಾಲ್ ನೇತೃತ್ವದ ‘ಆಪ್’ ಪಕ್ಷ ವಿರೋಧ ಸೂಚಿಸಿತ್ತು. ಇದೇ ವೇಳೆ, ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಸೇರಿಕೊಂಡು ಒಳಸಂಚು ನಡೆಸಿ ಚುನಾವಣೆಯಲ್ಲಿ ಯಶಸ್ಸು ಸಾಧಿಸಿದೆ ಎಂದು ಆರೋಪಿಸಿದ್ದ ಆಪ್ ಪಕ್ಷ, ತಾನು ಜೂ.3ರಂದು ಸಮಾನಾಂತರ ಹ್ಯಾಕಥಾನ್ ಆಯೋಜಿಸುವುದಾಗಿ ತಿಳಿಸಿದೆ. ಇಎಂವಿಗಳನ್ನು ತಿರುಚಬಹುದು ಎಂದು ಕಳೆದ ತಿಂಗಳು ತಾನು ದಿಲ್ಲಿ ವಿಧಾನಸಭೆಯಲ್ಲಿ ಸಾಬೀತುಪಡಿಸಲು ಬಳಸಿರುವ ಮತಯಂತ್ರಗಳನ್ನೇ ಹ್ಯಾಕಥಾನ್‌ಗೆ ಬಳಸಲಾಗುವುದು ಎಂದು ‘ಆಪ್’ ತಿಳಿಸಿದೆ. ಆದರೆ ಈ ಮತಯಂತ್ರಗಳು ನೈಜ ವಿದ್ಯುನ್ಮಾನ ಮತಯಂತ್ರಗಳಿಗಿಂತ ಬಹಳಷ್ಟು ಭಿನ್ನವಾಗಿರುವ ಕಾರಣ ಫಲಿತಾಂಶವನ್ನು ಒಪ್ಪಲಾಗದು ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X