Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಪಾಕೀಝಾ’ ನಟಿ ಗೀತಾ ಕಪೂರ್...

‘ಪಾಕೀಝಾ’ ನಟಿ ಗೀತಾ ಕಪೂರ್ ವೃದ್ಧಾಶ್ರಮಕ್ಕೆ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ2 Jun 2017 11:16 PM IST
share

ಮುಂಬೈ, ಜೂ.2: ‘ಪಾಕೀಝಾ’ ಮತ್ತು ‘ರಝಿಯಾ ಸುಲ್ತಾನ’ ಚಿತ್ರಗಳಲ್ಲಿನ ತನ್ನ ಪಾತ್ರಗಳಿಂದಾಗಿ ಜನಪ್ರಿಯರಾಗಿದ್ದ ಬಾಲಿವುಡ್‌ನ ಹಿರಿಯ ನಟಿ ಗೀತಾ ಕಪೂರ್ ಅವರನ್ನು ಇಲ್ಲಿಯ ‘ಜೀವನ್ ಆಶಾ’ ವೃ ಮನೆಯನ್ನು ್ಧಾಶ್ರಮಕ್ಕೆ ಸ್ಥಳಾಂತರಿಸಲಾಗಿದೆ. ಸುಮಾರು ಒಂದು ತಿಂಗಳ ಹಿಂದೆ ಗೀತಾರ ಪುತ್ರ ಆಕೆಯನ್ನು ಇಲ್ಲಿಯ ಆಸ್ಪತ್ರೆಯೊಂದರಲ್ಲಿ ತೊರೆದು ಹೋಗಿದ್ದ.

ಚಿತ್ರ ನಿರ್ಮಾಪಕರಾದ ಅಶೋಕ ಪಂಡಿತ್ ಮತ್ತು ರಮೇಶ ತೌರಾನಿ ಅವರು ಗುರುವಾರ ಗೀತಾರ ಆಸ್ಪತ್ರೆ ವೆಚ್ಚ 1.5 ಲ.ರೂ.ಗಳನ್ನು ಪಾವತಿಸದ್ದಲ್ಲದೆ, ಆಕೆಯನ್ನು ಅಂಧೇರಿಯಲ್ಲಿನ ವೃದ್ಧಾಶ್ರಮಕ್ಕೆ ಸೇರಿಸುವಲ್ಲಿ ನೆರವಾಗಿದ್ದಾರೆ.
ಎ.21ರಂದು ರಕ್ತದೊತ್ತಡದ ಏರಿಳಿತದಿಂದ ಬಳಲುತ್ತಿದ್ದ ಗೀತಾ(58)ರನ್ನು ಪ್ರಜ್ಞಾಶೂನ್ಯ ಸ್ಥಿತಿಯಲ್ಲಿ ಆಕೆಯ ಪುತ್ರ, ವೃತ್ತಿಯಿಂದ ಕೋರಿಯೊಗ್ರಾಫರ್ ಆಗಿರುವ ರಾಜಾ ಕಪೂರ್ ಚಿಕಿತ್ಸೆಗಾಗಿ ಗೋರೆಗಾಂವ್‌ನ ಎಸ್‌ಆರ್‌ವಿ ಆಸ್ಪತ್ರೆಗೆ ಕರೆತಂದಿದ್ದ. ಆಕೆಯನ್ನು ದಾಖಲಿಸಿ ಕೊಂಡ ವೈದ್ಯರು ಅಗತ್ಯ ಠೇವಣಿಯನ್ನು ಪಾವತಿಸುವಂತೆ ಸೂಚಿಸಿದ್ದರು. ಎಟಿಎಂನಿಂದ ಹಣ ತರುವ ನೆಪದಲ್ಲಿ ಅಲ್ಲಿಂದ ಹೊರಬಿದ್ದಿದ್ದ ಮಗರಾಯ ಮತ್ತೆ ವಾಪಸಾಗಿರಲಿಲ್ಲ. ಗೀತಾ ಗುಣಮುಖರಾದ ಬಳಿಕ ಆಸ್ಪತ್ರೆಯ ಅಧಿಕಾರಿಗಳು ತಮ್ಮಲ್ಲಿ ಲಭ್ಯವಿದ್ದ ವಿಳಾಸಕ್ಕೆ ತೆರಳಿ ವಿಚಾರಿಸಿದಾಗ ರಾಜಾ ಕಪೂರ್ ಖಾಲಿ ಮಾಡಿದ್ದ ವಿಷಯ ಗೊತ್ತಾಗಿತ್ತು.
ಹಲವಾರು ಮಾಧ್ಯಮ ಪ್ರತಿನಿಧಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇದರಿಂದ ಗೀತಾ ಕೊಂಚ ಹೆದರಿಕೊಂಡಿದ್ದರು. ಆಕೆ ಅಳತೊಡಗುವಾಗ ವಾರ್ಡ್‌ನಲ್ಲಿಯ ಇತರ ರೋಗಿಗಳಿಗೆ ತೊಂದರೆಯಾಗುತ್ತಿತ್ತು. ಜನರು ತನ್ನ ಭೇಟಿಗೆ ಬರುತ್ತಾರೆ, ಆದರೆ ಯಾರೂ ತನ್ನನ್ನು ತನ್ನ ಮನೆಗೆ ಕರೆದೊಯ್ಯುತ್ತಿಲ್ಲ ಎಂದು ಆಕೆ ದುಃಖಿಸುತ್ತಿದ್ದರು ಎಂದು ಚಿಕಿತ್ಸೆಯ ಹೊಣೆ ಹೊತ್ತಿದ್ದ ಡಾ.ದಿಪೇಂದ್ರ ತ್ರಿಪಾಠಿ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.
ಮಗ ಮರಳಿ ಬಂದು ತನ್ನನ್ನು ಮನೆಗೆ ಕರೆದೊಯ್ಯುತ್ತಾನೆ ಎಂದು ಆಕೆ ಈಗಲೂ ವಿಶ್ವಾಸ ಹೊಂದಿದ್ದಾರೆ ಎಂದರು.
ಗೀತಾರನ್ನು ಮಗ ಆಸ್ಪತ್ರೆಯಲ್ಲಿ ತೊರೆದು ಹೋಗಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದರೂ ಯಾವುದೇ ಬಂಧುಗಳು ಆಕೆಯನ್ನು ನೋಡಲು ಬಂದಿರಲಿಲ್ಲ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X