ಸ್ವಚ್ಛತಾ ಜಾಗೃತಿ ಮಾಸಾಚರಣೆ
ಉಡುಪಿ, ಜೂ.3: ಜಿಲ್ಲೆಯಾದ್ಯಂತ ವಿಶ್ವ ಪರಿಸರ ದಿನ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಚತೆ ಹಾಗೂ ಶುಚಿತ್ವ ಕಾಪಾಡುವ ಸಲುವಾಗಿ ಹಾಗೂ ಶಾಲಾ ಮಕ್ಕಳಲ್ಲಿ ನೈರ್ಮಲ್ಯ ಹಾಗೂ ಸ್ವಚ್ಛತೆಯನ್ನು ಜಾಗೃತಗೊಳಿಸಲು ಅಲ್ಲದೇ ಗ್ರಾಪಂಗಳಲ್ಲಿ ಪ್ಲಾಸ್ಟಿಕ್ ನಿಷೇಧದ ಕುರಿತು ಜಾಗೃತಿ ಮೂಡಿಸಲು ಜೂ.30ರವರೆಗೆ ಪ್ಲಾಸ್ಟಿಕ್ ನಿಷೇಧ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಸ್ವಚ್ಛತಾ ಜಾಗೃತಿ ಮಾಸಾಚರಣೆ ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ಹಮ್ಮಿಕೊಳ್ಳ ಲಾಗುವುದು ಎಂದು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆೆಯಲ್ಲಿ ತಿಳಿಸಿದ್ದಾರೆ.
Next Story