Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಎಸ್ ಇ: 90 ಶೇ. ಅಂಗವೈಕಲ್ಯದ...

ಸಿಬಿಎಸ್ ಇ: 90 ಶೇ. ಅಂಗವೈಕಲ್ಯದ ಪ್ರತಿಭೆಗೆ 88 ಶೇ. ಅಂಕ

ಬಾಯಿಯಲ್ಲೇ ಪೆನ್ ಹಿಡಿದು ಪರೀಕ್ಷೆ ಬರೆದ ತುಹಿನ್ ಡೇ

ವಾರ್ತಾಭಾರತಿವಾರ್ತಾಭಾರತಿ3 Jun 2017 10:19 PM IST
share
ಸಿಬಿಎಸ್ ಇ: 90 ಶೇ. ಅಂಗವೈಕಲ್ಯದ ಪ್ರತಿಭೆಗೆ 88 ಶೇ. ಅಂಕ

ಪಶ್ಚಿಮ ಬಂಗಾಳ, ಜೂ.3: ಹುಟ್ಟಿನಿಂದಲೇ ಮಾರಕ ಸಮಸ್ಯೆಗೆ ತುತ್ತಾಗಿ, ಕೈ-ಕಾಲುಗಳ ಶಕ್ತಿಯನ್ನು ಕಳೆದುಕೊಂಡ ವಿದ್ಯಾರ್ಥಿಯೊಬ್ಬ ಬಾಯಿಯಲ್ಲೇ ಪೆನ್ ಕಚ್ಚಿಕೊಂಡು ಪರೀಕ್ಷೆ ಬರೆದು ಸಿಬಿಎಸ್ ಇ 10 ತರಗತಿ ಪರೀಕ್ಷೆಯಲ್ಲಿ 88 ಶೇ. ಅಂಕ ಗಳಿಸುವ ಮೂಲಕ ಸಾಧನೆ ಮೆರೆದಿದ್ದಾರೆ.

17 ವರ್ಷದ ತುಹಿನ್ ಡೇ ಹುಟ್ಟುತ್ತಲೇ ಆರ್ಥ್ರೋಗ್ರಿಪೋಸಿಸ್ ಮಲ್ಟಿಪ್ಲೆಕ್ಸ್ ಕಾಂಜೆನಿಟಾ (AMC) ಎಂಬ ರೋಗಕ್ಕೆ ತುತ್ತಾಗಿದ್ದರು. ತಾಯಿಯ ಗರ್ಭಧಾರಣೆ ಸಂದರ್ಭದಲ್ಲೇ ಈ ಸಮಸ್ಯೆಗೆ ತುತ್ತಾಗುವ ಮಗು ಕೈ-ಕಾಲುಗಳ ಚಟುವಟಿಕೆಯನ್ನೇ ಕಳೆದುಕೊಳ್ಳುತ್ತದೆ,

ಖರಗ್ಪುರ ಐಐಟಿಯ ಸೆಂಟ್ರಲ್ ಸ್ಕೂಲ್ ನಿಂದ ಪರೀಕ್ಷೆ ಬರೆದಿದ್ದ ತುಹಿನ್ , ಪರೀಕ್ಷೆಯ ಸಿದ್ಧತೆಗಾಗಿ ಕೋಟಾ ಗೆ ತೆರಳಿದ್ದರು. ಫಲಿತಾಂಶದ ಬಗ್ಗೆ ಶಾಲೆಯ ಆಡಳಿತ ಮಾಹಿತಿ ನೀಡಿದ್ದು, ವಿಷಯವಾರು ಫಲಿತಾಂಶಗಳು ಲಭಿಸಿಲ್ಲ ಎಂದು ತುಹಿನ್ ಎ ತಾಯಿ ಸುಜಾತಾ ಡೇ ಹೇಳಿದ್ದಾರೆ.

“ದೈಹಿಕ ಸಮಸ್ಯೆಯಿಂದಾಗಿ ಕೆಲ ಚಟುವಟಿಕೆಗಳಲ್ಲಿ ತುಹಿನ್ ಪಾಲ್ಗೊಳ್ಳದ ಕಾರಣ ಶಾಲೆ ಬಿ2 ಗ್ರೇಡ್ ಎಂದು ಬೋರ್ಡ್ ಗೆ ಕಳುಹಿಸಿದೆ. ಆದ್ದರಿಂದ ಒಟ್ಟು ಫಲಿತಾಂಶದಲ್ಲಿ ಕುಸಿತವಾಗಿದೆ. 9 ನೆ ತರಗತಿಯವರೆಗೆ ತುಹಿನ್ 90 ಶೇ,ಕ್ಕಿಂತಲೂ ಹೆಚ್ಚು ಅಂಕ ಗಳಿಸಿದ್ದು, ಈ ಬಾರಿ 95 ಶೇ. ಅಂಕ ಗಳಿಸುವ ನಿರೀಕ್ಷೆಯಿತ್ತು ಎನ್ನುತ್ತಾರೆ ಸುಜಾತಾ.

ಶೇ.90ರಷ್ಟು ಅಂಗವೈಕಲ್ಯತೆ ಹೊಂದಿರುವ ತುಹಿನ್ ರನ್ನು 14 ಕಿ.ಮೀ. ದೂರದ ಶಾಲೆಗೆ ಅವರ ತಂದೆ ಬೈಕ್ ಮೂಲಕ ಕರೆದೊಯ್ಯುತ್ತಿದ್ದರು. ಮತ್ತೋರ್ವ ಬರೆಯುವವರ ಸಹಾಯವಿಲ್ಲದೆ ಹಾಗೂ ಅಂಗವಿಕಲ ವಿದ್ಯಾರ್ಥಿಗಳಿಗೆ ನೀಡಲಾಗುವ ಹೆಚ್ಚುವರಿ ಸಮಯಾವಕಾಶವನ್ನು ಬಳಸದೆ ತುಹಿನ್ ಪರೀಕ್ಷೆ ಬರೆದಿದ್ದಾರೆ.

ಅಸಾಧಾರಣ ಸಾಧನೆಗಾಗಿ 2012ರಲ್ಲಿ “ರಾಷ್ಟ್ರೀಯ ಮಕ್ಕಳ ಪ್ರಶಸ್ತಿ” ಹಾಗೂ 2013ರಲ್ಲಿ ಅತ್ಯುತ್ತಮ ಸೃಜನಶೀಲ ಮಕ್ಕಳ ಪ್ರಶಸ್ತಿಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ತುಹಿನ್ ಡೇಯವರಿಗೆ ಪ್ರದಾನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X