Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಶುಭಾಗ್ಯ ಯೋಜನೆ: ಫಲಾನುಭವಿಗಳಿಗೆ ಸಾಯಧನ...

ಪಶುಭಾಗ್ಯ ಯೋಜನೆ: ಫಲಾನುಭವಿಗಳಿಗೆ ಸಾಯಧನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ4 Jun 2017 5:03 PM IST
share
ಪಶುಭಾಗ್ಯ ಯೋಜನೆ: ಫಲಾನುಭವಿಗಳಿಗೆ ಸಾಯಧನ ವಿತರಣೆ

ತುಮಕೂರು.ಜೂ.4: ರಾಜ್ಯ ಸರಕಾರದ ಪಶು ಭಾಗ್ಯ ಯೋಜನೆಯಡಿ ತುಮಕೂರು ನಗರದ ಆಯ್ದ ಫಲಾನುಭವಿಗಳಿಗೆ 2016-17ನೇ ಸಾಲಿನ ಸರಕಾರದ ಸಹಾಯಧನವನ್ನು ಭಾನುವಾರು ತುಮಕೂರು ನಗರ ಕ್ಷೇತ್ರದ ಶಾಸಕ ಡಾ.ರಫೀಕ್ ಅಹಮದ್ ವಿತರಿಸಿದರು.
 
ಜಿಲ್ಲಾ ಪಶು ಆಸ್ಪತ್ರೆಯ ಆವರಣದಲ್ಲಿ 2016-17ನೇ ಸಾಲಿನ ಪಶು ಭಾಗ್ಯ ಯೋಜನೆಯಡಿ 30 ಜನ ಫಲಾನುಭವಿಗಳಿಗೆ 6.45 ಲಕ್ಷ ರೂ ಸಹಾಯಧನ ಮತ್ತು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಅಡಿಯಲ್ಲಿ 30 ಜನರಿಗೆ ತಲಾ 60 ಸಾವಿರ ರೂ ಸಹಾಯಧನವನ್ನು ಒಳಗೊಂಡ 18 ಲಕ್ಷ ರೂಗಳ ಚೆಕ್ ಹಾಗೂ ಅಮೃತ ಯೋಜನೆ ಅಡಿ ಕುರಿ, ಮೇಕೆ,ಕೋಳಿ ಕೊಳ್ಳಲು ವಿಧವೆಯರಿಗೆ ತಲಾ 7500 ರೂಗಳ ಸಹಾಯಧನವನ್ನು ಶಾಸಕರು ವಿತರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಡಾ.ರಫೀಕ್ ಅಹಮದ್,ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಬಡವರ ಅಭ್ಯುದಯಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು,ಅವುಗಳಲ್ಲಿ ಪಶುಭಾಗ್ಯವೂ ಒಂದು.ಬರಗಾಲದಿಂದ ತತ್ತರಿಸಿರುವ ರೈತರಿಗೆ ಪಶುಭಾಗ್ಯ ಯೋಜನೆ ಅವರ ಅರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಂಡು, ಜೀವನ ನಡೆಸಲು ಸಹಕಾರಿಯಾಗಿದೆ. ತುಮಕೂರು ನಗರದಲ್ಲಿರುವ ರೈತರು, ಪಶು ಪಾಲಕರನ್ನು ಗುರುತಿಸಿ ಅವರಿಗೂ ಸಹ ಕುರಿ, ಕೋಳಿ, ಮೇಕೆ, ಮಿಶ್ರತಳಿ ಹಸುಗಳ ಖರೀದಿಗೆ ಸಹಾಯಧನ ನೀಡಲಾಗುತ್ತಿದೆ.ಪಶು ಪಾಲಕರು ಇದರ ಲಾಭ ಪಡೆದು ತಮ್ಮ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.


ಪಶು ಇಲಾಖೆಯ ತುಮಕೂರು ನಗರ ಸಹಾಯಕ ನಿರ್ದೇಶಕ ಡಾ.ಸಂಜೀವರಾಯ ಮಾತನಾಡಿ,ತುಮಕೂರು ನಗರದಲ್ಲಿರುವ 83 ಜನ ಪಶು ಸಾಕಾಣಿಕೆದಾರರನ್ನು ಗುರುತಿಸಿ ಸುಮಾರು 24.46 ಲಕ್ಷ ಸಹಾಯಧನವನ್ನು ನೀಡಲಾಗಿದೆ.ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ ಯೋಜನೆಯಡಿ ಪ್ರತಿ ಯೂನಿಟ್‌ಗೆ 1.20 ಲಕ್ಷ ಇದ್ದು, ಶೇ50ರ ಅಚಿದರೆ 60 ಸಾವಿರ ರೂಗಳ ಸಹಾಯ ನೀಡಿ ಎರಡು ವಿಶ್ರತಳಿ ಹಸುಗಳನ್ನು ಖರೀದಿಸಲು ಸಹಾಯಧನ ನೀಡಲಾಗಿದೆ. ಹೈನುಗಾರಿಕೆಯಿಂದ ಜೀವನ ಸಾಗಿಸಲು ಇದು ಸಹಕಾರಿಯಾಗಲಿದೆ ಎಂದರು.
ಈ ವೇಳೆ ಪಶುಭಾಗ್ಯ ಯೋಜನೆ ಫಲಾನುಭವಿ ಆಯ್ಕೆ ಸಮಿತಿಯ ಸದಸ್ಯರಾದ ಜಗದೀಶ್, ಶ್ರೀಮತಿ ಮಂಗಳಮ್ಮ, ಸೈಯದ್ ಮತ್ತು ಎಸ್.ಎಲ್.ಎನ್. ಸ್ವಾಮಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X