Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರದ ಅರ್ಥಿಕ ನೀತಿಯಿಂದ ಕಾರ್ಮಿಕರಿಗೆ...

ಕೇಂದ್ರದ ಅರ್ಥಿಕ ನೀತಿಯಿಂದ ಕಾರ್ಮಿಕರಿಗೆ ಸಂಕಷ್ಟ:ಸೈಯದ್ ಮುಜೀಬ್

ವಾರ್ತಾಭಾರತಿವಾರ್ತಾಭಾರತಿ4 Jun 2017 9:09 PM IST
share
ಕೇಂದ್ರದ ಅರ್ಥಿಕ ನೀತಿಯಿಂದ ಕಾರ್ಮಿಕರಿಗೆ ಸಂಕಷ್ಟ:ಸೈಯದ್ ಮುಜೀಬ್
ತುಮಕೂರು.ಜೂ.4: ದೇಶದಲ್ಲಿ ನರೇಂದ್ರ ಮೋದಿ ಸರಕಾರದ ದೂರಾಲೋಚನೆಯಿಲ್ಲದ ಆರ್ಥಿಕ ನೀತಿಗಳಿಂದ ಕಾರ್ಮಿಕರು ಕಷ್ಟ ಅನುಭವಿಸುವಂತಾಗಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಿಡಬ್ಲ್ಯೂಎಫ್‌ಐ,ನ 3000 ಸಾವಿರ ಪಿಂಚಣಿಗಾಗಿ, ಮನೆ-ನಿವೇಶನಕ್ಕಾಗಿ,ಸೌಲಭ್ಯಗಳ ತ್ವರಿತ ವಿಲೇವಾರಿಗಾಗಿ ಆಗ್ರಹಿಸಿ ನಗರದ ಗಾಂಧೀನಗರದಲ್ಲಿರುವ ಚನ್ನಪ್ಪ ಭವನ ಜನ ಚಳುವಳಿಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ತುಮಕೂರು ತಾಲೂಕು ಪ್ರಥಮ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು,ನೋಟು ಅಮಾನೀಕರಣವಂತು ದುಡಿಯುವ ಜನತೆಯ ಬದುಕುವ ಹಕ್ಕನ್ನೆ ಕಿತ್ತುಕೊಂಡಿದೆ.ಬಂಡವಾಳ ಶಾಹಿಗಳ ಕೈವಶದಲ್ಲಿರುವ ಮಾಧ್ಯಮಗಳು ಈ ಬಗ್ಗೆ ಜಾಣಕುರುಡು ಪ್ರದರ್ಶಿಸುತ್ತಿವೆ ಎಂದು ಆರೋಪಿಸಿದರು. ದೇಶದಲ್ಲಿ ಅಸಮಾನತೆಗಳು ಅಪಾಯಕಾರಿ ಮಟ್ಟದಲ್ಲಿ ಬೆಳೆಯುತ್ತಿದ್ದು,ದೇಶದ 57 ಜನ ಬಾರಿ ಶ್ರೀಮಂತರ ಆಸ್ತಿಗಳು 87 ಸಾವಿರ ಜನರು ಹೊಂದಿರುವ ಸಂಪತ್ತನ್ನು ಹೊಂದಿದ್ದಾರೆ.ಶ್ರಮ ಜೀವಿಗಳ ದೀಘರ್ ಹೋರಾಟಗಳಿಂದ ಪಡೆದ ಹಕ್ಕುಗಳ ಮೇಲೆ, ಅವರ ಕೆಲಸ ಮತ್ತು ಜೀವನದ ಪರಿಸ್ಥಿತಿಗಳ ಮೇಲೆ ದಾಳಿ ಮಾಡುತ್ತಾ,ತಮ್ಮ ಲಾಭಗಳನ್ನು ರಕ್ಷಿಸಿಕೊಳ್ಳಲು ಮತ್ತು ಹೆಚ್ಚಿಸಿಕೊಳ್ಳಲು ಸ್ವದೇಶಿ ಮತ್ತು ವಿದೇಶಿ ಕಾರ್ಪೊರೇಟ್‌ಗಳಿಗೆ ರಾಷ್ಟ್ರೀಯ ಆಸ್ತಿಗಳನ್ನು ಲೂಟಿ ಮಾಡಲು ಕೇಂದ್ರ ಸರಕಾರ ಉತ್ತೇಜನ ನೀಡುತ್ತಿದೆ ಎಂದರು. ಸಿಐಟಿಯು ತಾಲೂಕು ಅಧ್ಯಕ್ಷ ಷಣ್ಮುಖಪ್ಪ ಮಾತನಾಡಿ,ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಮಿಕರಿಂದ ವಂತಿಗೆಯನ್ನು ಮಾತ್ರ ಸಂಗ್ರಹ ಮಾಡುತ್ತಿದ್ದು,ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಶೀಘ್ರವಿಲೇವಾರಿ ಮಾಡಬೇಕು ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿ ಕಾರ್ಮಿಕರಿಗೆ ನೆರವಾಗಬೇಕು ಎಂದರು. ಪೌರಕಾರ್ಮಿಕರ ಸಂಘದ ನರಸಿಂಹಮೂರ್ತಿ ಮಾತನಾಡಿ,ಕಾರ್ಮಿಕರು ತಮ್ಮ ಬೇಡಿಕೆಗಳಿಗಾಗಿ ಮಾತ್ರ ಸಂಘಕಟ್ಟದೆ ಸಮಾಜದಲ್ಲಿ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆಗಳ ವಿರುದ್ದ ಹೋರಾಟವನ್ನು ನಡೆಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಬಿ. ಉಮೇಶ್ ಮಾತನಾಡಿ,ಕಟ್ಟಡ ಕಾರ್ಮಿಕರ ಸಂಘದ ಹಲವು ಹೋರಾಟಗಳ ಫಲವಾಗಿ ಇಂದು ಕಾರ್ಮಿಕರಿಗೆ ಸ್ವಲ್ಪ ಪ್ರಮಾಣದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಿದೆ ರಾಜಕೀಯ ಪಕ್ಷಗಳು ಚುನಾವಣೆಗಳು ಹತ್ತಿರ ಬಂದಾಗ ಎಲ್ಲರೂ ನಮ್ಮವರು ಎಂದು ಬಿಂಬಿಸಿ ನಂತರ ಹತ್ತಿರಕ್ಕೂ ಸೇರಿಸಿಕೊಳ್ಳದೆ ಇರುವ ಕಾಲಘಟ್ಟದಲ್ಲಿ ನಾವುಗಳು ಇದ್ದೇವೆ.ಆ ನಿಟ್ಟಿನಲ್ಲಿ ಕಾರ್ಮಿಕರು ಜಾಗ್ರತರಾಗುವ ಮೂಲಕ ಸಂಘವನ್ನು ಬಲಿಷ್ಟವಾಗಿ ಕಟ್ಟಬೇಕು ಎಂದರು. ವೇದಿಕೆಯಲ್ಲಿ ಸಿಐಟಿಯು ಜಿಲ್ಲಾಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ,ರಾಜ್ಯ ಉಪಾಧ್ಯಕ್ಷ ಶ್ರೀಧರ್ ಪಾಪಣ್ಣ,ಸಂಘದ ದೇವಮ್ಮ, ಸರೋಜಮ್ಮ, ಉಪಸ್ಥಿತರಿದ್ದರು.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X