Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೌಢ್ಯತೆಯೊಂದಿಗಿನ ಅಮಾನವೀಯ ಧಾರ್ಮಿಕ...

ಮೌಢ್ಯತೆಯೊಂದಿಗಿನ ಅಮಾನವೀಯ ಧಾರ್ಮಿಕ ಆಚರಣೆ ತೊಡದು ಹಾಕಿ: ಡಾ.ಕೇಶವ ಧರಣಿ

ವಾರ್ತಾಭಾರತಿವಾರ್ತಾಭಾರತಿ4 Jun 2017 9:19 PM IST
share
ಮೌಢ್ಯತೆಯೊಂದಿಗಿನ ಅಮಾನವೀಯ ಧಾರ್ಮಿಕ ಆಚರಣೆ ತೊಡದು ಹಾಕಿ: ಡಾ.ಕೇಶವ ಧರಣಿ
ಮಂಗಳೂರು, ಜೂ.4: ಮೌಢ್ಯತೆಯೊಂದಿಗಿನ ಅಮಾನವೀಯ ಧಾರ್ಮಿಕ ಆಚರಣೆ ತೊಡದು ಹಾಕಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಲು ಜಾಗೃತಿ ಮೂಡಿಸಬೇಕಾಗಿದೆ ಎಂದು ಕುದ್ಮುಲ್ ರಂಗರಾವ್ ಶೈಕ್ಷಣಿಕ ಸಂಸ್ಥೆಗಳ ಅಧ್ಯಕ್ಷ ಡಾ.ಕೇಶವ ಧರಣಿ ತಿಳಿಸಿದರು. ಅವರು ಇಂದು ನಗರದ ಎನ್‌ಜಿಒ ಸಭಾಂಗಣದಲ್ಲಿ ಮಾನವ ಬಂಧುತ್ವ ವೇದಿಕೆಯ ಕರ್ನಾಟಕ ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿಯ ಸಹಯೋಗದೊಂದಿಗೆ ಹಮ್ಮಿಕೊಂಡ ವಿಚಾರ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಮಾಢ್ಯತೆಯೊಂದಿಗಿನ ಧಾರ್ಮಿಕ ಆಚರಣೆ ನಿಲ್ಲದೆ ಹೋದರೆ ಸಮಾಜದಲ್ಲಿ ಸಾಕಷ್ಟು ಅಮಾಯಕರು,ಮಹಿಳೆಯರು,ದುರ್ಬಲರು ಬಲಿಯಾಗುತ್ತಾರೆ.ಜೋತಿಷ್ಯದ ಹೆಸರಿನಲ್ಲಿ ಜನರನ್ನು ಮತ್ತಷ್ಟು ಅಜ್ಞಾನದ ಕತ್ತಲೆಯ ಕೂಪಕ್ಕೆ ತಳ್ಳುವ ಕೆಲಸ ನಡೆಯುತ್ತಿದೆ.ಅದಕ್ಕಾಗಿ ಆಧುನಿಕ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ಬಳಸಿಕೊಂಡು ಮಾನಸಿಕ ಭಯೊತ್ಫಾದನೆಯನ್ನು ಸಮಾಜದಲ್ಲಿ ಬಿತ್ತುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ.ದಾಸ್ಯದ ಮನೋಭಾವವನ್ನು ಪ್ರೇರೇಪಿಸುವ ಮೂಢ ನಂಬಿಕೆ ಆಚರಣೆಗಳ ವಿರುದ್ಧ ಸಾಮಾಜಿಕ ಜಾಗೃತಿ ಆಗಬೇಕಾಗಿದೆ.ಯುವ ಜನರಲ್ಲಿ ಈ ಜಾಗೃತಿ ಹೆಚ್ಚಾಗಬೇಕಾಗಿದೆ ಎಂದು ಕೇಶವ ಧರಣಿ ತಿಳಿಸಿದರು. ಮೂಲ ನಕ್ಷತ್ರದಲ್ಲಿ ಹುಟ್ಟಿದ ಮಗುವನ್ನು ಕೊಂದಿರುವ ಅಮಾನುಷ ಘಟನೆ, ಚಂದ್ರಗುತ್ತಿಯಲ್ಲಿ ದೇವರ ಹೆಸರಿನಲ್ಲಿ ದಲಿತ ಹೆಣ್ಣು ಮಕ್ಕಳ ಬೆತ್ತಲೆ ಸೇವೆ ಇಂತಹ ಕೃತ್ಯಗಳಿಗೆ ಕೆಲವು ಉದಾಹರಣೆಗಳಾಗಿವೆ. ಚಂದ್ರಗುತ್ತಿ ಯಲ್ಲಿ ಬೆತ್ತಲ ಸೇವೆ ಮಾಡಿದರೆ ಒಳ್ಳೆಯದಾಗುತ್ತದೆ ಎನ್ನುತ್ತಿದ್ದ ಅಲ್ಲಿನ ಅರ್ಚನೆ ಮಾಡುವ ಪೂಜಾರಿಗಳಾಗಲಿ ,ಅವರ ಮನೆಯವರಾಗಲಿ ಈ ಸೇವೆ ಮಾಡುತ್ತಿರಲಿಲ್ಲ ಎಂದರು. ಕುವೆಂಪು ಅವರು ಮೂಲ ನಕ್ಷತ್ರದಲ್ಲಿ ಹುಟ್ಟಿದವರು. ವೈಜ್ಞಾನಿಕ ತಳಹದಿಯಲ್ಲಿ ನಿಂತಿರುವ ಇಸ್ರೋ ಕೇಂದ್ರದಲ್ಲಿ ರಾಕೆಟ್ ಉಡ್ಡಯನ ಮಾಡುವಾಗಲು ರಾಹು ಕಾಲ ಎಂದು ಕಾಲ ನೋಡುವ ವಿಜ್ಞಾನಿಗಳ ಮನೋಭಾವವೂ ಬದಲಾಗಬೇಕಾಗಿದೆ. ಮಾನವೀಯತೆಯೊಂದಿಗಿನ ಧಾರ್ಮಿಕ ಆಚರಣೆ ,ಜನರಲ್ಲಿ ಪ್ರಶ್ನೆ ಮಾಡುವ ಮನೋಭಾವ ಬೆಳೆಸುವ ಅಗತ್ಯವಿದೆ ಎಂದು ಕೇಶವ ಧರಣಿ ತಿಳಿಸಿದರು. ಸಮಾರಂಭದಲ್ಲಿ ಉಪನ್ಯಾಸಕಿ ಡಾ.ಆಶಾಲತಾ ಮಾತನಾಡುತ್ತಾ ಭಾರತದ ಪ್ರಜಾಪ್ರಭುತ್ವದಲ್ಲಿ ಜಾತೀಯ ಅಸಮಾನತೆ, ಆರ್ಥಿಕ ಅಸಮಾನತೆ ಪ್ರಮುಖ ಸವಾಲಾಗಿದೆ. ಸಂವಿಧಾನದ ಆಶಯಗಳು ನೆಲೆಗೊಳ್ಳಬೇಕಾದರೆ ತಮ್ಮ ಮೇಲಿನ ಶೋಷಣೆಯನ್ನು ತಡೆಯಬೇಕಾದರೆ ದಲಿತ ಸಂಘಟನೆಗಳು ಒಂದಾಗ ಬೇಕು ಎಂದು ತಿಳಿಸಿದರು. ಸಮಾರಂಭದಲ್ಲಿ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ವಿಲ್ಫ್ರೆಡ್ ಡಿ ಸೋಜ,ಪ್ರೊ.ಎಂ.ಎಸ್.ಕೊಟ್ಯಾನ್, ದಲಿತ ಸಂಘರ್ಷ ಸಮಿತಿಯ ಮುಖಂಡ ಎಂ.ಎಸ್.ದೇವದಾಸ್, ಪಡಿ ಸಂಸ್ಥೆಯ ಸಂಚಾಲಕ ರೆನ್ನಿ ಡಿ ಸೋಜ, ಸಮುದಾಯ ಸಂಘಟನೆಯ ಅಧ್ಯಕ್ಷ ವಾಸುದೇವ ಉಚ್ಚಿಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಕೆ.ಎಸ್. ಸತೀಶ್‌ಕುಮಾರ್ ವೇದಿಕೆಯ ಉದ್ದೇಶದ ಬಗ್ಗೆ ವಿವರಿಸಿದರು.ಜಿಲ್ಲಾ ಸಂಚಾಲಕ ನಾರಾಯಣ ಕಿಲಂಗೋಡಿ ಸ್ವಾಗತಿಸಿದರು.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X