Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಾಲಾ ಪಠ್ಯದಲ್ಲಿ ಬಸವಣ್ಣನ ವಚನಗಳು...

ಶಾಲಾ ಪಠ್ಯದಲ್ಲಿ ಬಸವಣ್ಣನ ವಚನಗಳು ನಶಿಸುತ್ತಿವೆ: ಡಾ.ಶಾಂತವೀರ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ4 Jun 2017 10:20 PM IST
share
ಬೆಂಗಳೂರು, ಜೂ.4: ಶಾಲಾ ಪಠ್ಯ ಪುಸ್ತಕದಲ್ಲಿ ಕಾಂತ್ರಿಕಾರಿ ಬಸವಣ್ಣ ರಚಿಸಿದ ವಚನಗಳು ನಶಿಸಿ ಹೋಗುತ್ತಿದ್ದು, ಇದರಿಂದ ಮಕ್ಕಳು ಧರ್ಮದಿಂದ ವಿಮುಖರಾಗುತ್ತಿದ್ದಾರೆ ಎಂದು ಕೊಳದ ಮಠದ ಪೀಠಾಧೀಶ ಡಾ.ಶಾಂತವೀರ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ರವಿವಾರ ನಗರದ ಗಾಂಧಿ ಭವನದಲ್ಲಿ 515 ಭೂ ಸೇನಾ ಕಾರ್ಯಾಗಾರ ಬಸವ ಬಳಗ ಆಯೋಜಿಸಿದ್ದ ಬಸವ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾತಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕ್ರಾಂತಿಕಾರಿ ಬಸವಣ್ಣನವರು ಸಾವಿರಾರು ವಚನಗಳನ್ನು ರಚಿಸಿದರು. ಆದರೆ, ಸರಕಾರಗಳು ಬಸವಣ್ಣನವರ ವಚನ ಹಾಗೂ ಧರ್ಮವನ್ನು ಪಠ್ಯದಲ್ಲಿ ಅಳವಡಿಸದ ಹಿನ್ನೆಲೆಯಲ್ಲಿ ಮಕ್ಕಳು ಧರ್ಮದಿಂದ ವಿಮುಖರಾಗುತ್ತಿದ್ದಾರೆ ಎಂದು ಅಭಿಪ್ರಾಯಿಸಿದರು. ಬಸವಣ್ಣನವರು ರಾಜಕೀಯ ಗುರು, ಸಂಸ್ಕೃತಿ, ಸಾಹಿತ್ಯ, ಭಾಷೆ ಹಾಗೂ ವಿದ್ವಾಂಸ ಗುರುಗಳಾಗಿದ್ದರು. ಇದರಿಂದ, 12ನೆ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪನೆಯಾಗಿ ಎಲ್ಲ ಜಾತಿಯವರೂ ಅನುಭವ ಮಂಟಪದ ಸದಸ್ಯರಾಗಿ ಹೆಸರುವಾಸಿಯಾದರು ಹಾಗೂ ಜಾತಿಯನ್ನು ಹೋಗಲಾಡಿಸಲು ಎಲ್ಲ ಜಾತಿಯವರೂ ವಚನಗಳನ್ನು ರಚಿಸಿ ಜಾತಿ ಕಡಿವಾಣಕ್ಕೆ ಮುಂದಾದರು ಎಂದು ಹೇಳಿದರು. ಇತ್ತೀಚಿನ ದಶಕಗಳಲ್ಲಿ ಜಾತಿ ಕುಷ್ಠರೋಗವಾಗಿ ಬೆಳೆದು ನಿಂತಿದ್ದು, ಕೆಂಪೇಗೌಡ ಅವರ ಜಯಂತಿಗೆ ಖರ್ಚು ಮಾಡಿದಷ್ಟು ಹಣವನ್ನು ವೀರಶೈವ ಲಿಂಗಾಯತ ಕ್ರಾಂತಿಕಾರಿಗಳಿಗೆ ಖರ್ಚು ಮಾಡುತ್ತಿಲ್ಲ. ಇದರಿಂದ ಬಹಳ ನೋವಾಗಿದೆ. ಹಾಗೂ ಇನ್ನು ಮುಂದೆಯಾದರೂ ವೀರಶೈವರು ಒಂದಾಗಿ ಜಾತ್ಯಾತೀತತೆಗೆ, ಬಸವಣ್ಣನ ಜಯಂತಿಗೆ ಹಾಗೂ ವಚನಗಳಿಗೆ ಆದ್ಯತೆಯನ್ನು ನೀಡೋಣ ಎಂದು ತಿಳಿಸಿದರು. ಬಸವ ವೇದಿಕೆಯ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಮಾತನಾಡಿ, ವಿಶ್ವದಲ್ಲಿರುವ ಸಂವಿಧಾನಗಳನ್ನು ತಿದ್ದುಪಡಿ ಮಾಡಲು ಅವಕಾಶವಿದೆ. ಆದರೆ, ಬಸವಣ್ಣನವರು ವಚನಗಳಿಗೆ ಯಾವುದೇ ತಿದ್ದುಪಡಿ ಮಾಡಲು ಬರುವುದಿಲ್ಲ. ಹಾಗೂ ಎಲ್ಲ ಕಾಲಕ್ಕೂ ಅವರ ವಚನಗಳು ಅನ್ವಯಿಸುತ್ತವೆ ಎಂದು ತಿಳಿಸಿದರು. 515 ಭೂಸೇನಾ ಕಾರ್ಯಾಗಾರದ ಆಡಳಿತಾಧಿಕಾರಿ ಕೆ.ಎಸ್.ನರಸಿಂಹಮೂರ್ತಿ ಮಾತನಾಡಿ, ಬಸವಣ್ಣನವರು ಜಾತಿ ಇರಬಾರದು ಎಂದು ಹೇಳಿದ್ದರೂ ಜಾತಿ ಪ್ರಮಾಣ ಪತ್ರದಲ್ಲಿ ಜಾತಿಯನ್ನು ನಮೂದಿಸುತ್ತೇವೆ. ಇದರಿಂದ, ಮಕ್ಕಳೂ ಜಾತಿ ವ್ಯವಸ್ಥೆಯ ಪಾಲುದಾರರಾಗುತ್ತಾರೆ ಎಂದು ಹೇಳಿದರು.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X