Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ-ಪಾಕ್ ಪಂದ್ಯದ ಬಳಿಕ ಜೆಎನ್‌ಯುದಲ್ಲಿ...

ಭಾರತ-ಪಾಕ್ ಪಂದ್ಯದ ಬಳಿಕ ಜೆಎನ್‌ಯುದಲ್ಲಿ ಇರಾನಿ ವಿದ್ಯಾರ್ಥಿಗೆ ಥಳಿತ

ದೂರಿನ ಬಗ್ಗೆ ಪೊಲೀಸರಿಂದ ತನಿಖೆ

ವಾರ್ತಾಭಾರತಿವಾರ್ತಾಭಾರತಿ5 Jun 2017 4:35 PM IST
share
ಭಾರತ-ಪಾಕ್ ಪಂದ್ಯದ ಬಳಿಕ ಜೆಎನ್‌ಯುದಲ್ಲಿ ಇರಾನಿ ವಿದ್ಯಾರ್ಥಿಗೆ ಥಳಿತ

ಹೊಸದಿಲ್ಲಿ,ಜೂ.5: ರವಿವಾರ ರಾತ್ರಿ ವಿದ್ಯಾರ್ಥಿಗಳ ಗುಂಪೊಂದರಿಂದ ಥಳಿತಕ್ಕೊಳಗಾಗಿದ್ದಾನೆ ಎನ್ನಲಾಗಿರುವ ಇರಾನಿ ವಿದ್ಯಾರ್ಥಿಯೋರ್ವನ ದೂರಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜೆಎನ್‌ಯು ಮುಖ್ಯಸ್ಥರಿಗೆ ಈ ವಿದ್ಯಾರ್ಥಿ ಸಲ್ಲಿಸಿರುವ ದೂರಿನ ಪ್ರತಿಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆಯಾದರೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಆತ ನಿರಾಕರಿಸಿದ್ದಾನೆ. ತಾವು ಜೆಎನ್‌ಯು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇರಾನಿ ವಿದ್ಯಾರ್ಥಿ ತನ್ನ ಜೀವಕ್ಕೆ ಹೆದರಿಕೊಂಡಿರುವುದರಿಂದ ಪ್ರಕರಣವನ್ನು ಮುಂದುವರಿಸಲು ಬಯಸುತ್ತಿಲ್ಲ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹಿತ್ ಪಾಂಡೆ ತಿಳಿಸಿದರು.

ರವಿವಾರ ರಾತ್ರಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಗೆದ್ದ ಬಳಿಕ ಈ ಘಟನೆ ನಡೆದಿತ್ತೆನ್ನಲಾಗಿದೆ. ಇರಾನಿ ವಿದ್ಯಾರ್ಥಿಯಿಂದ ಆರೋಪಕ್ಕೊಳಗಾಗಿರುವ ಎಬಿವಿಪಿ ವಿದ್ಯಾರ್ಥಿ ನಾಯಕ ಸೌರಭ್ ಶರ್ಮಾ, ವಾಗ್ವಾದ ನಡೆದಿದ್ದನ್ನು ದೃಢಪಡಿಸಿದ್ದಾರೆ. ಆದರೆ ಇರಾನಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿಲ್ಲ ಎಂದು ಹೇಳಿದ್ದಾರೆ.

 ಸಣ್ಣ ವಿಷಯವನ್ನೇ ದೊಡ್ಡದು ಮಾಡಲಾಗುತ್ತಿದೆ. ಭಾರತದ ಗೆಲುವನ್ನು ನಾವು ಆಚರಿಸುತ್ತಿದ್ದಾಗ ತನ್ನಿಬ್ಬರು ಸ್ನೇಹಿತರೊಂದಿಗೆ ಬಂದಿದ್ದ ಇರಾನಿ ವಿದ್ಯಾರ್ಥಿ ನಮ್ಮ ಸಂಭ್ರಮಾಚರಣೆಯನ್ನು ಪ್ರಶ್ನಿಸಿದ್ದ, ಅಲ್ಲದೆ ಅನುಚಿತ ಶಬ್ದಗಳನ್ನೂ ಬಳಸಿದ್ದ. ನಿನಗೇನಾದರೂ ಸಮಸ್ಯೆಯಿದ್ದರೆ ನಿನ್ನ ಕೋಣೆಗೆ ವಾಪಸಾಗು ಎಂದಷ್ಟೇ ನಾವು ಹೇಳಿದ್ದೆವು. ಆತನ ವಿರುದ್ಧ ಬೆರಳನ್ನೂ ಎತ್ತಿರಲಿಲ್ಲ ಎಂದು ಶರ್ಮಾ ಹೇಳಿಕೊಂಡರು.

ತಾನು ಹಾಸ್ಟೆಲ್ ಎದುರಿನಿಂದ ನಡೆದುಕೊಂಡು ಹೋಗುತ್ತಿದ್ದಾಗ ಕಾರಿಡಾರ್‌ನ ಹೊರಗೆ ಕೆಲವು ವಿದ್ಯಾರ್ಥಿಗಳು ಪಟಾಕಿ ಸಿಡಿಸುತ್ತಿದ್ದರು. ಭದ್ರತಾ ಸಿಬ್ಬಂದಿಯೋರ್ವ ಅದನ್ನು ಆಕ್ಷೇಪಿಸಿದಾಗ ಅವರು ಆತನೊಂದಿಗೇ ಜಗಳಕ್ಕೆ ಇಳಿದಿದ್ದರು. ಸುಮ್ಮನೆ ನಿಂತಿದ್ದ ತನ್ನೊಂದಿಗೂ ಅವರು ವಾಗ್ವಾದಕ್ಕೆ ಇಳಿದಿದ್ದು, ತನ್ನ ಮೇಲೆ ಹಲ್ಲೆ ನಡೆಸಿದ್ದರು. ಆ ಗುಂಪಿನಲ್ಲಿ ಹತ್ತು ಜನರಿದ್ದರು ಎಂದು ಇರಾನಿ ವಿದ್ಯಾರ್ಥಿ ತನ್ನ ದೂರಿನಲ್ಲಿ ತಿಳಿಸಿದ್ದಾನೆ.

ಘಟನೆ ನಡೆದಿದ್ದು ಹೌದು, ಆದರೆ ಪ್ರಕರಣವನ್ನು ಮುಂದುವರಿಸಲು ಇರಾನಿ ವಿದ್ಯಾರ್ಥಿ ಸಿದ್ಧನಿಲ್ಲ. ಆತ ಹೆದರಿಕೊಂಡಿದ್ದಾನೆ ಎಂದು ಪಾಂಡೆ ಸುದ್ದಿಸಂಸ್ಥೆಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X