Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬೆಲ್ಜಿಯಂ ವಿರುದ್ಧ ಭಾರತ ತಂಡಕ್ಕೆ ರೋಚಕ...

ಬೆಲ್ಜಿಯಂ ವಿರುದ್ಧ ಭಾರತ ತಂಡಕ್ಕೆ ರೋಚಕ ಜಯ

ತ್ರಿರಾಷ್ಟ್ರ ಆಹ್ವಾನಿತ ಹಾಕಿ ಟೂರ್ನಮೆಂಟ್

ವಾರ್ತಾಭಾರತಿವಾರ್ತಾಭಾರತಿ5 Jun 2017 11:36 PM IST
share
ಬೆಲ್ಜಿಯಂ ವಿರುದ್ಧ ಭಾರತ ತಂಡಕ್ಕೆ ರೋಚಕ ಜಯ

ಡಸ್ಸಲ್‌ಡಾರ್ಫ್(ಜರ್ಮನಿ), ಜೂ.5: ಭಾರತದ ಡ್ರಾಗ್‌ಫ್ಲಿಕರ್ ಹರ್ಮನ್‌ಪ್ರೀತ್ ಸಿಂಗ್ ಬಾರಿಸಿದ ಅವಳಿ ಗೋಲುಗಳ ನೆರವಿನಿಂದ ಭಾರತ ತಂಡ ಬೆಲ್ಜಿಯಂ ವಿರುದ್ಧದ ತ್ರಿರಾಷ್ಟ್ರ ಆಹ್ವಾನಿತ ಹಾಕಿ ಟೂರ್ನಮೆಂಟ್‌ನಲ್ಲಿ 3-2 ಅಂತರದಿಂದ ಜಯ ಸಾಧಿಸಿದೆ.

ಭಾರತ ತಂಡ ಬೆಲ್ಜಿಯಂ ವಿರುದ್ಧ ಟೂರ್ನಿಯ ಮೊದಲ ಪಂದ್ಯವನ್ನು 1-2 ಅಂತರದಿಂದ ಸೋತಿತ್ತು. ಜರ್ಮನಿಯ ವಿರುದ್ಧದ ಎರಡನೆ ಪಂದ್ಯವನ್ನು 2-2ರಿಂದ ಡ್ರಾಗೊಳಿಸಿತ್ತು.

ಸೋಮವಾರ ನಡೆದ ತನ್ನ 3ನೆ ಪಂದ್ಯದಲ್ಲಿ ಹರ್ಮನ್‌ಪ್ರೀತ್(34ನೆ, 38ನೆ ನಿಮಿಷ) ಅವಳಿ ಗೋಲು ಬಾರಿಸಿದರು. ಫಾರ್ವರ್ಡ್ ಆಟಗಾರ ರಮನ್‌ದೀಪ್ ಸಿಂಗ್(49ನೆ ನಿಮಿಷ) ಒಂದು ಗೋಲು ಬಾರಿಸಿ ತಂಡಕ್ಕೆ ರೋಚಕ ಜಯ ತಂದರು.

ರವಿವಾರ ಜರ್ಮನಿ ವಿರುದ್ಧದ ಪಂದ್ಯವನ್ನು 1-2 ರಿಂದ ಸೋತಿದ್ದ ಬೆಲ್ಜಿಯಂ ತಂಡ ಸೋಮವಾರ ಉತ್ತಮ ಆರಂಭ ಪಡೆದಿತ್ತು. 13ನೆ ನಿಮಿಷದಲ್ಲಿ ಗೋಲು ಬಾರಿಸಿದ್ದ ಅವೌರಿ ಕೆಸ್ಟರ್ಸ್‌ ಬೆಲ್ಜಿಯಂಗೆ 1-0 ಮುನ್ನಡೆ ಒದಗಿಸಿಕೊಟ್ಟು ಭಾರತಕ್ಕೆ ಒತ್ತಡ ಹೇರಿದರು.

ಭಾರತ 23 ಹಾಗೂ 24ನೆ ನಿಮಿಷದಲ್ಲಿ ಸತತ ಎರಡು ಪೆನಾಲ್ಟಿ ಕಾರ್ನರ್ ಅವಕಾಶ ಪಡೆದಿದ್ದರೂ ಅದನ್ನು ಗೋಲಾಗಿ ಪರಿವರ್ತಿಸಿಕೊಳ್ಳಲಿಲ್ಲ. 34ನೆ ನಿಮಿಷದಲ್ಲಿ ಭಾರತ ತನಗೆ ಲಭಿಸಿದ 5ನೆ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿತು. 38ನೆ ನಿಮಿಷದಲ್ಲಿ ಮತ್ತೊಂದು ಗೋಲು ಬಾರಿಸಿದ ಹರ್ಮನ್‌ಪ್ರೀತ್ ಭಾರತಕ್ಕೆ 2-1 ಮುನ್ನಡೆ ಒದಗಿಸಿಕೊಟ್ಟರು. ಬೆಲ್ಜಿಯಂ 45ನೆ ನಿಮಿಷದಲ್ಲಿ ಗೋಲು ಬಾರಿಸಿ ಸ್ಕೋರನ್ನು 2-2 ರಿಂದ ಸಮಬಲಗೊಳಿಸಿತು. 49ನೆ ನಿಮಿಷದಲ್ಲಿ ಗೋಲು ಬಾರಿಸಿದ ರಮನ್‌ದೀಪ್ ಸಿಂಗ್ ಭಾರತಕ್ಕೆ 3-2 ರಿಂದ ರೋಚಕ ಜಯ ತಂದುಕೊಟ್ಟರು.

ಭಾರತ ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ಜರ್ಮನಿ ತಂಡವನ್ನು ಎದುರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X