Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ರಾಜ್ಯ ಪೊಲೀಸ್ ಇಲಾಖೆಯಲ್ಲಿ 2626...

ರಾಜ್ಯ ಪೊಲೀಸ್ ಇಲಾಖೆಯಲ್ಲಿ 2626 ಹುದ್ದೆಗಳು

ವಾರ್ತಾಭಾರತಿವಾರ್ತಾಭಾರತಿ7 Jun 2017 6:49 PM IST
share
ರಾಜ್ಯ ಪೊಲೀಸ್ ಇಲಾಖೆಯಲ್ಲಿ 2626 ಹುದ್ದೆಗಳು

ಬೆಂಗಳೂರು, ಜೂ. 7: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 2,626 ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಇದಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜೂ.12 ಕೊನೆಯ ದಿನವಾಗಿದೆ.

ಪೊಲೀಸ್ ಕಾನ್‌ಸ್ಟೇಬಲ್(ನಾಗರಿಕ ಪುರುಷ)-1980, ಮಹಿಳೆ-496, ರೈಲ್ವೇಸ್ (ಪುರುಷ) 120, ಮಹಿಳೆ- 30 ಒಟ್ಟು 2,626 ಹುದ್ದೆಗಳು.

ಅರ್ಜಿ ಸಲ್ಲಿಸಲು ವಯೋಮಿತಿ ಕನಿಷ್ಠ 19, ಗರಿಷ್ಠ 25 ವರ್ಷ ಆಗಿರಬೇಕು. ಪರಿಶಿಷ್ಟರಿಗೆ 2 ವರ್ಷ ವಯೋಮಿತಿ ಸಡಿಲಿಕೆಯಿದೆ. ಅರಣ್ಯ ಪ್ರದೇಶದ ಬುಡಕಟ್ಟು ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆಯಿದೆ. ಗ್ರಾಮೀಣ, ಕನ್ನಡ ಯೋಜನಾ ನಿರಾಶ್ರಿತ, ಮಾಜಿ ಸೈನಿಕರಿಗೆ ಮೀಸಲಾತಿಯಿದೆ. ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ದೇಹದಾರ್ಢ್ಯ ಪರೀಕ್ಷೆ
 ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ ಎತ್ತರ 168 ಸೆಂ.ಮೀ. ಎದೆ ಸುತ್ತಳತೆ 86 ಸೆಂ.ಮೀ. ಅರಣ್ಯ ಪ್ರದೇಶದ ಬುಡಕಟ್ಟು ಅಭ್ಯರ್ಥಿಗಳಿಗೆ ಕನಿಷ್ಠ ಎತ್ತರ 155 ಸೆಂ.ಮೀ,. ಎದೆ ಸುತ್ತಳತೆ-75 ಸೆಂ.ಮೀ.

ಸಾಮಾನ್ಯ ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ ಎತ್ತರ 157 ಸೆಂ.ಮೀ., ಕನಿಷ್ಠ ತೂಕ 45 ಕೆ.ಜಿ. ಅರಣ್ಯ ಪ್ರದೇಶದ ಬುಡಕಟ್ಟು ಮಹಿಳೆಯರಿಗೆ ಕನಿಷ್ಠ ಎತ್ತರ 150 ಸೆಂ.ಮೀ. ಇರಬೇಕು.

ಸಹಿಷ್ಣುತೆ ಪರೀಕ್ಷೆ

ಸಾಮಾನ್ಯ ಪುರುಷ ಅಭ್ಯರ್ಥಿಗಳು 1,600 ಮೀ. ಓಟವನ್ನು 6 ನಿಮಿಷ 30 ಸೆಕೆಂಡ್‌ಗಳಲ್ಲಿ ಪೂರೈಸಬೇಕು . ಎತ್ತರ ಜಿಗಿತ 1.20 ಮೀ. ಕಡಿಮೆ ಇಲ್ಲದಂತೆ, ಗುಂಡು ಎಸೆತ 5.60 ಮೀ. ಕಡಿಮೆ ಇಲ್ಲದಂತೆ 3-3 ಅವಕಾಶಗಳಲ್ಲಿ ಪೂರ್ಣ ಗೊಳಿಸಬೇಕು.

ಮಹಿಳಾ ಮತ್ತು ಸೈನಿಕ ಅಭ್ಯರ್ಥಿಗಳಿಗೆ 400 ಮೀ. ಓಟವನ್ನು 2 ನಿಮಿಷಗಳಲ್ಲಿ ಪೂರೈಸಬೇಕು. ಎತ್ತರ ಜಿಗಿತ 0.09 ಮೀ. ಕಡಿಮೆ ಇಲ್ಲದಂತೆ ಉದ್ದ ಜಿಗಿತ 2.50 ಮೀ. ಕಡಿಮೆ ಇಲ್ಲದಂತೆ 3 ಅವಕಾಶಗಳಲ್ಲಿ ಸಮಾಪ್ತಿಗೊಳಿಸಬೇಕು. ಅರ್ಜಿ ಶುಲ್ಕ ಸಾಮಾನ್ಯರಿಗೆ 250 ರೂ. ಪರಿಶಿಷ್ಟರಿಗೆ 100 ರೂ. ಆಯ್ಕೆಯಾದ ಅಭ್ಯರ್ಥಿಗಳಿಗೆ 11,600 ರೂ. ರಿಂದ 21,000 ರೂ ವೇತನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ನೇಮಕಾತಿ ಸಮಿತಿ, ಕಾರ್ಲಟನ್ ಭವನ. ಅರಮನೆ ಮೈದಾನ ಬೆಂಗಳೂರು, ದೂ22942261,22207044 ಅನ್ನು ಸಂಪರ್ಕಿಸಬಹುದು . ಅರ್ಜಿಗಳನ್ನು ಇಲಾಖೆಯ ವೆಬ್‌ಸೈಟ್ www. ksp.gov.in ಮೂಲಕವೇ ಸಲ್ಲಿಸಬೇಕು ಬೇರೆ ಅವಕಾಶವಿಲ್ಲ.
 

ಅರ್ಜಿ ಸಲ್ಲಿಕೆ ಹೇಗೆ ?
pcnhk17.ksp-online. in/index.aspx ಲಾಗ್ ಆನ್ ಆಗಬೇಕು. ಪರದೆಯಲ್ಲಿಯೇ ನ್ಯೂ ಅಪ್ಲಿಕೇಶನ್ ಎಂದು ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ ಮತ್ತೊಂದು ಪರದೆ ತೆರೆದುಕೊಳ್ಳುತ್ತದೆ. ಅದನ್ನು ಓದಿ ಅನಂತರ ಒಪ್ಪಿಗೆ ಸೂಚಿಸಿ, ಬಳಿಕ ಮತ್ತೊಂದು ಪರದೆಯಲ್ಲಿ ನೇರ ಅಭ್ಯರ್ಥಿಯೇ ಅಲ್ಲವೇ ಎಂಬುದನ್ನು ನಮೂದಿಸಿ, ಅನಂತರ ಹೆಸರು, ವಿಳಾಸ, ಎತ್ತರ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ , ವಿದ್ಯಾರ್ಹತೆ, ಮೀಸಲಾತಿಗಳನ್ನು ನಮೂದಿಸಿ, ಜತೆಗೆ ನಿಮ್ಮ ಪೋಟೋ, ಸಹಿ ಮಾಡಿದ ಚಿತ್ರ, ಗುರುತಿನ ಚೀಟಿ (ಬ್ಯಾಂಕ್ ಪಾಸ್ ಬುಕ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್ ಇತ್ಯಾದಿ) ಯನ್ನು ಅಪ್ಲೋಡ್ ಮಾಡಿ ಒಪ್ಪಿಗೆ ಸೂಚಿಸಿ.

ಅರ್ಜಿ ಸಲ್ಲಿಕೆ ಯಶಸ್ವಿಯಾದರೆ ಅರ್ಜಿಯಲ್ಲಿ ಉಲ್ಲೇಖಿಸಿರುವ ಮೊಬೈಲ್ ನಂಬರ್, ಇ-ಮೇಲ್ ವಿಳಾಸಕ್ಕೆ ಸಂದೇಶ ಬರುತ್ತದೆ. ಅದರಲ್ಲಿ ಅಪ್ಲಿಕೇಶನ್ ನಂಬರ್ ಇತ್ಯಾದಿ ಮಾಹಿತಿ ಇರುತ್ತದೆ. ಅನಂತರ ಬ್ಯಾಂಕ್ ಚಲನ್ ರಸೀದಿ ಸೃಷ್ಟಿಯಾಗುತ್ತದೆ. ಅದನ್ನು ಪಡೆದು ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಹಣ ಪಾವತಿಸಿ. ಅಲ್ಲಿ ಹಣ ಪಾವತಿ ಮಾಡಿರುವುದಕ್ಕೆ ಒಂದು ನಂಬರ್ ನೀಡುತ್ತಾರೆ. ಎರಡು ದಿನಗಳ ಬಳಿಕ pcnhk17.ksp-online. in/index.aspx  ಜಾಲತಾಣಕ್ಕೆ ಹೋಗಿ ಮೈ ಅಪ್ಲಿಕೇಶನ್ ಆಯ್ಕೆ ಮಾಡಿ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ ಬ್ಯಾಂಕ್‌ನವರು ನೀಡಿರುವ ಖಾತ್ರಿ ನಂಬರ್ ಅನ್ನು ಲಗತ್ತಿಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X