Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಹಾರಕ್ಕಾಗಿ ಇರಾನ್ ಟರ್ಕಿ ಜೊತೆ ಕತರ್...

ಆಹಾರಕ್ಕಾಗಿ ಇರಾನ್ ಟರ್ಕಿ ಜೊತೆ ಕತರ್ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ7 Jun 2017 8:03 PM IST
share
ಆಹಾರಕ್ಕಾಗಿ ಇರಾನ್ ಟರ್ಕಿ ಜೊತೆ ಕತರ್ ಮಾತುಕತೆ

ದೋಹಾ, ಜೂ. 7: ತನ್ನ ಆಹಾರ ಮತ್ತು ನೀರಿನ ಪೂರೈಕೆಗಳನ್ನು ಖಾತರಿಪಡಿಸಲು ಇರಾನ್ ಮತ್ತು ಟರ್ಕಿಗಳೊಂದಿಗೆ ಕತರ್ ಮಾತುಕತೆಯಲ್ಲಿ ತೊಡಗಿದೆ. ಅದರ ಈ ಪ್ರಾಥಮಿಕ ಅವಶ್ಯಕತೆಗಳ ಅತಿ ದೊಡ್ಡ ಪೂರೈಕೆದಾರರಾದ ಯುಎಇ ಮತ್ತು ಸೌದಿ ಅರೇಬಿಯಗಳು ಸೋಮವಾರ ಅದರೊಂದಿಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿದ್ದವು.

‘‘ನಾವು ಟರ್ಕಿ, ಇರಾನ್ ಮತ್ತು ಇತರ ದೇಶಗಳೊಂದಿಗೆ ಮಾತುಕತೆಯಲ್ಲಿ ತೊಡಗಿದ್ದೇವೆ’’ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಆಹಾರ ಪೂರೈಕೆಗಳನ್ನು ಕತರ್ ಏರ್‌ವೇಸ್‌ನ ಸರಕು ವಿಮಾನಗಳ ಮೂಲಕ ತರಲಾಗುವುದು’’ ಎಂದು ಅವರು ಹೇಳಿದರು.

ಕತರ್‌ನ ಮಾರುಕಟ್ಟೆಯಲ್ಲಿ ನಾಲ್ಕು ವಾರಗಳಿಗೆ ಸಾಕಾಗುವಷ್ಟು ಆಹಾರ ಧಾನ್ಯಗಳಿವೆ ಎಂದರು.

ಕತರ್ ಜನಜೀವನದ ಮೇಲೆ ಭಾರೀ ಪರಿಣಾಮ

ಅರಬ್ ಜಗತ್ತಿನಲ್ಲಿ ಎದ್ದಿರುವ ಈ ಅಭೂತಪೂರ್ವ ಬಿಕ್ಕಟ್ಟು ಕತರ್‌ನ ಸಾಮಾನ್ಯ ಜನಜೀವನದ ಮೇಲೆ ಭಾರೀ ಪರಿಣಾಮ ಬೀರುತ್ತಿದೆ.

ಕತರ್ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಸೌದಿ ಅರೇಬಿಯ, ಯುಎಇ, ಈಜಿಪ್ಟ್, ಬಹರೈನ್, ಯಮನ್ ಮತ್ತು ಇತರ ಹಲವು ಅರಬ್ ದೇಶಗಳು ಕಡಿದುಕೊಂಡಿರುವುದು ಈಗಾಗಲೇ ಲಕ್ಷಾಂತರ ಕತರ್ ನಿವಾಸಿಗಳ ಮೇಲೆ ಪರಿಣಾಮ ಬೀರಿದೆ.

ಈ ದೇಶಗಳು ಕತರ್‌ನೊಂದಿಗಿನ ನೆಲ, ಸಮುದ್ರ ಮತ್ತು ವಾಯು ಸಂಪರ್ಕಗಳನ್ನು ಕಡಿದುಕೊಂಡಿವೆ.

‘‘ಇಲ್ಲಿನ ಪರಿಸ್ಥಿತಿ ತುಂಬಾ ಕಠಿಣವಾಗಿದೆ. ನನಗೆ ಇಲ್ಲಿ ಜವಾಬ್ದಾರಿಗಳಿವೆ ಹಾಗೂ ಅಂತಿಮ ಪರೀಕ್ಷೆಗಳು ನಡೆಯುತ್ತಿವೆ’’ ಎಂದು ಕತರ್ ವಿಶ್ವವಿದ್ಯಾನಿಲಯದಲ್ಲಿ ಕೊಲ್ಲಿ ವ್ಯವಹಾರಗಳು ಮತ್ತು ಮಹಿಳಾ ಅಧ್ಯಯನಗಳ ಶಿಕ್ಷಕಿ ಪ್ರೊಫೆಸರ್ ಅಲ್-ಫಸಿ ಹೇಳುತ್ತಾರೆ.

ಸೌದಿ ದೊರೆ ಜೊತೆ ಕುವೈತ್ ಆಮಿರ್ ಮಾತುಕತೆ

ಅರಬ್ ಜಗತ್ತಿನಲ್ಲಿ ಎದ್ದಿರುವ ಅಭೂತಪೂರ್ವ ಬಿಕ್ಕಟ್ಟನ್ನು ಶಮನಗೊಳಿಸಲು ಕುವೈತ್ ಪ್ರಯತ್ನಗಳನ್ನು ನಡೆಸುತ್ತಿದೆ.

ಕುವೈತ್ ಆಡಳಿತಗಾರ ಶೇಖ್ ಸಬಾ ಅಲ್ ಅಹ್ಮದ್ ಅಲ್ ಸಬಾ ಮಂಗಳವಾರ ರಾತ್ರಿ ಸೌದಿ ಅರೇಬಿಯಕ್ಕೆ ಪ್ರಯಾಣಿಸಿದರು. ಅಲ್ಲಿ ಅವರು ದೊರೆ ಸಲ್ಮಾನ್ ಜೊತೆ ಮಾತುಕತೆಗಳನ್ನು ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X