Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ 21.01 ಲಕ್ಷ ಮಂದಿಗೆ...

ದ.ಕ. ಜಿಲ್ಲೆಯಲ್ಲಿ 21.01 ಲಕ್ಷ ಮಂದಿಗೆ ಆಧಾರ್‌

ವಾರ್ತಾಭಾರತಿವಾರ್ತಾಭಾರತಿ7 Jun 2017 9:04 PM IST
share
ದ.ಕ. ಜಿಲ್ಲೆಯಲ್ಲಿ 21.01 ಲಕ್ಷ ಮಂದಿಗೆ ಆಧಾರ್‌

ಮಂಗಳೂರು, ಜೂ.7: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 21,01,494 ಮಂದಿಗೆ ಆಧಾರ್ ಸಂಖ್ಯೆ ನೋಂದಣಿ ಮಾಡಲಾಗಿದ್ದು, ಶೇಕಡಾ 91.66 ರಷ್ಟು ಗುರಿ ಸಾಧಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಅಂಗನವಾಡಿ ಮೇಲ್ವಿಚಾರಕರಿಗೆ ಆಧಾರ್ ಸೀಡಿಂಗ್ ಮತ್ತು ಆಧಾರ್‌ಗೆ ಸಂಬಂಧಿಸಿದ ಸೇವೆಗಳ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಈ ಮಾಹಿತಿ ನೀಡಲಾಯಿತು.

ದ.ಕ. ಜಿಲ್ಲೆಯಲ್ಲಿ 22,84,222 ನಾಗರಿಕರಿಗೆ ಆಧಾರ್ ಸಂಖ್ಯೆ ನೋಂದಣಿಗೆ ಗುರಿ ಇಡಲಾಗಿದೆ. ಕರ್ನಾಟಕದಲ್ಲಿ ಇದುವರೆಗೆ 6.1 ಕೋಟಿ ಜನರು ಆಧಾರ್ ನೋಂದಾಯಿಸಿದ್ದು, ಇನ್ನೂ 37 ಲಕ್ಷ ಮಂದಿಗೆ ಬಾಕಿ ಇದೆ ಎಂದು ಮಾಹಿತಿ ನೀಡಿದರು. ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಉದ್ಘಾಟಿಸಿದರು.

ಆಧಾರ್ ಜಾರಿಯಾದ ಬಳಿಕ ದೇಶದಲ್ಲಿ ಗುರುತಿನ ಚೀಟಿಗೆ ಸಂಬಂಧಪಟ್ಟ ಎಲ್ಲಾ ಗೊಂದಲಗಳು ಪರಿಹಾರವಾಗಿವೆ. ದೇಶದ ಯಾವುದೇ ಜಾಗದಲ್ಲಿದ್ದರೂ ವ್ಯಕ್ತಿಯ ಗುರುತಿಗೆ ಆಧಾರ್ ಸಂಖ್ಯೆ ಪ್ರಬಲ ದಾಖಲೆಯಾಗಿ ಪರಿಗಣಿಸಲ್ಪಟ್ಟಿದೆ ಎಂದರು.

ದ.ಕ. ಜಿಲ್ಲೆಯಲ್ಲಿ ಎಲ್ಲರನ್ನೂ ಆಧಾರ್ ನೋಂದಾಯಿಸಲು ಇನ್ನಷ್ಟು ಚುರುಕುಗೊಳಿಸಲಾಗುವುದು. ಗ್ರಾಮ ಪಂಚಾಯತ್‌ಗಳ ಮೂಲಕ ಬಾಕಿ ಉಳಿದವರನ್ನು ಆಧಾರ್‌ಗೆ ನೋಂದಾಯಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇ-ಆಡಳಿತ ಕೇಂದ್ರದ ಯೋಜನಾ ವ್ಯವಸ್ಥಾಪಕ ರವಿಕುಮಾರ್ ಮಾತನಾಡಿ, ಬಹುತೇಕ ಸರಕಾರಿ ಸೇವೆಗಳಿಗೆ ಆಧಾರ್ ಕಡ್ಡಾಯಗೊಳಿಸಲಾಗಿದೆ. ವಿವಿಧ ಯೋಜನೆಗಳಿಗೆ ಆಧಾರ್ ಸೀಡಿಂಗ್‌ಗೆ ಸಂಬಂಧಪಟ್ಟ ಗೊಂದಲಗಳನ್ನು ನಿವಾರಿಸಲು ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಆಧಾರ್ ದೃಢೀಕರಣ, ಇ ಸಹಿ ಮತ್ತು ಡಿಜಿ ಲಾಕರ್‌ಗೆ ಸಂಬಂಧಪಟ್ಟಂತೆ ಜಾಗೃತಿಯನ್ನು ಮೂಡಿಸಲಾಗುವುದು. ಆಧಾರ್ ಕಾರ್ಡ್ ಕಳೆದುಕೊಂಡಲ್ಲಿ WWW.UIDAI.GOV.IN ವೆಬ್‌ಸೈಟ್ ಮೂಲಕ ಬೇರೆ ಪ್ರತಿ ಪಡೆಯಬಹುದಾಗಿದೆ. ಆಧಾರ್ ನೋಂದಾಯಿಸಿದ ಬಳಿಕ ಕಾರ್ಡ್ ಬರಲು ವಿಳಂಭವಾದರೆ ಚಿಂತಿಸುವ ಅಗತ್ಯವಿಲ್ಲ. ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಬಹುದು. ಆಧಾರ್ ಕಾರ್ಡ್ ದಾಖಲೆ ಪ್ರತಿಗಿಂತಲೂ ಆಧಾರ್ ಸಂಖ್ಯೆ ಅತಿ ಮುಖ್ಯವಾಗಿದೆ. ಸಾರ್ವಜನಿಕರು ಆಧಾರ್‌ಗೆ ಸಂಬಂಧಪಟ್ಟ ಯಾವುದೇ ಮಾಹಿತಿಗಳಿಗೆ ಟೋಲ್ ಫ್ರೀ ಸಂಖ್ಯೆ 1947 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ ಮಾತನಾಡಿ, ಜಿಲ್ಲೆಯಲ್ಲಿ 5 ವರ್ಷದವರೆಗಿನ ಮಕ್ಕಳನ್ನು ಆಧಾರ್‌ಗೆ ನೋಂದಾಯಿಸಲು ಅಂಗನವಾಡಿ ಮೇಲ್ವಿಚಾರಕರಿಗೆ ಟ್ಯಾಬ್ ನೀಡಲಾಗಿದೆ. ಈಗಾಗಲೇ ಇದರಲ್ಲಿ ಶೇಕಡಾ 89ರಷ್ಟು ಗುರಿ ಸಾಧಿಸಲಾಗಿದೆ. ಮುಂದಿನ 1 ತಿಂಗಳಲ್ಲಿ ಬಾಕಿ ಉಳಿದ ಮಕ್ಕಳನ್ನು ಆಧಾರ್‌ಗೆ ನೋಂದಾಯಿಸಲಾಗುವುದು ಎಂದರು.

ಬೆಂಗಳೂರು ಇ ಆಡಳಿತ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೇಯಸ್, ರಘು, ನಾಗರಾಜ್ ಮಾಹಿತಿ ನೀಡಿದರು. ಚುನಾವಣಾ ತಹಶೀಲ್ದಾರ್ ಮಾಣಿಕ್ಯ ಕಾರ್ಯಕ್ರಮ ನಿರೂಪಿಸಿದರು.     

share
ವಾರ್ತಾಭಾರತಿ
ವಾರ್ತಾಭಾರತಿ
Next Story
X