Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಹಿತ್ಯದಿಂದ ಮಾನವೀಯತೆ ಬೆಳೆಯಲು ಸಾಧ್ಯ:...

ಸಾಹಿತ್ಯದಿಂದ ಮಾನವೀಯತೆ ಬೆಳೆಯಲು ಸಾಧ್ಯ: ದಿನೇಶ್ ಅಮೀನ್ ಮಟ್ಟು

ವಾರ್ತಾಭಾರತಿವಾರ್ತಾಭಾರತಿ7 Jun 2017 9:29 PM IST
share
ಸಾಹಿತ್ಯದಿಂದ ಮಾನವೀಯತೆ ಬೆಳೆಯಲು ಸಾಧ್ಯ: ದಿನೇಶ್ ಅಮೀನ್ ಮಟ್ಟು

ಉಡುಪಿ, ಜೂ.7: ಸಾಹಿತ್ಯ, ಕಲೆ, ಸಂಗೀತ, ಪುಸ್ತಕ ಓದುವ ಹವ್ಯಾಸ ಇರುವವರು ತಪ್ಪು ದಾರಿಗೆ ಹೋಗುವುದು ತೀರಾ ಕಡಿಮೆ. ಯಾಕೆಂದರೆ ಸಾಹಿತ್ಯವು ಮನುಷ್ಯನನ್ನು ಮಾನವೀಯಗೊಳಿಸುತ್ತದೆ. ಮಕ್ಕಳನ್ನು ಅವರ ಆಸಕ್ತಿಗೆ ಅನುಗುಣ ವಾಗಿ ಬೆಳೆಸಿದರೆ ಮಾತ್ರ ಅವರು ಸರಿಯಾದ ದಿಶೆಯಲ್ಲಿ ಬೆಳೆಯುತ್ತಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ.

ಉಡುಪಿ ಬೆಳಕು ಪ್ರಕಾಶನದ ವತಿಯಿಂದ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಬುಧವಾರ ಆಯೋಜಿಸಲಾದ ಪತ್ರಕರ್ತ ಬಾಲಕೃಷ್ಣ ಶಿಬಾರ್ಲ ಅವರ ಪುತ್ರ ಶಾಕ್ಯ ಬಿ.ಕೆ. ಅವರ ಮೊದಲ ಹುಟ್ಟುಹಬ್ಬ ಆಚರಣೆಯಲ್ಲಿ ‘ಚಾಕ್ಯಬಾಬಾ’ ಮಕ್ಕಳ ಕತೆಗಳ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.

ಮಕ್ಕಳನ್ನು ಬೆಳೆಸುವುದು ತುಂಬಾ ಕಷ್ಟ. ಅದನ್ನು ನಾವು ನಮ್ಮ ಹಿರಿಯರಿಂದ ಕಲಿಯಬೇಕೆ ಹೊರತು ಪುಸ್ತಕ ಅಥವಾ ಇಂಟರ್‌ನೆಟ್‌ನಿಂದಲ್ಲ. ಮಕ್ಕಳ ಮೇಲೆ ಅಜ್ಜಿಯಂದಿರ ಪ್ರಭಾವ ಹೆಚ್ಚಾಗಿರುತ್ತದೆ. ಮಕ್ಕಳಲ್ಲಿನ ಕಲ್ಪನಾ ಶಕ್ತಿ ಹಾಗೂ ಸೃಜನಶೀಲತೆ ಬೆಳೆಯಲು ಅಜ್ಜಿಯಂದಿರ ಕಥೆಗಳೇ ಮೂಲ ಪ್ರೇರಣೆಯಾಗಿ ರುತ್ತದೆ ಎಂದರು.

ಇಂದು ಮಕ್ಕಳನ್ನು ಬೆಳೆಸುವ ವಿಧಾನ ಬದಲಾಗಿದೆ. ತಂದೆ ತಾಯಂದಿರಿಗೆ ಪುರುಸೊತ್ತಿಲ್ಲ. ಅಳುವ ಮಕ್ಕಳಿಗೆ ಕಥೆ ಹೇಳಲು ಅಜ್ಜಿಯಂದಿರಿಲ್ಲ. ಹಾಗಾಗಿ ಪೋಷಕರು ಮಕ್ಕಳಿಗೆ ಟಿವಿ ಮತ್ತು ಮೊಬೈಲ್‌ಗಳನ್ನು ತೋರಿಸುತ್ತಿದ್ದಾರೆ. ಇಲ್ಲಿಂದ ಮಕ್ಕಳ ವ್ಯಕ್ತಿತ್ವದ ಅವಸಾನ ಆರಂಭವಾಗುತ್ತದೆ. ಅದರ ಆಚೆಗೆ ಇರುವ ಮಕ್ಕಳ ಬೌದ್ಧಿಕ ಲೋಕ ವಿಸ್ತಾರ ಆಗುವುದೇ ಇಲ್ಲ. ಈ ದೋಷದಿಂದಾಗಿ ಮುಂದಿನ ಜನಾಂಗ ನಾವು ನಿರೀಕ್ಷಿಸುವ ರೀತಿಯಲ್ಲಿ ಪರಿಪೂರ್ಣ ಆಗಿರಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಸಂದರ್ಭದಲ್ಲಿ ಎಲ್ಲ ಕಲೆಗಳಲ್ಲಿಯೂ ತೊಡಗಿಸಿಕೊಳ್ಳುವ ಮಕ್ಕಳು ಎಸೆಸೆಲ್ಸಿ ಮುಗಿದ ಕೂಡಲೇ ಅವುಗಳನ್ನು ನಿಲ್ಲಿಸಿ ಕೇವಲ ಸಿಇಟಿಗೆ ತಯಾರಿ ನಡೆಸುತ್ತವೆ. ಇದರಿಂದಾಗಿ ಅಂತಹ ಮಕ್ಕಳಲ್ಲಿ ನಮ್ಮ ಸಂಸ್ಕೃತಿ, ಪರಂಪರೆ, ಇತಿಹಾಸದ ಅರಿವು ಇರುವುದಿಲ್ಲ. ಈ ಬಗ್ಗೆ ಮೂಲಭೂತ ಅರಿವು ಇಲ್ಲದಿದ್ದರೆ ಮಕ್ಕಳ ವ್ಯಕ್ತಿತ್ವ ದುರ್ಬಲಗೊಳ್ಳುತ್ತದೆ. ಪ್ರಸ್ತುತ ಇದು ನಮ್ಮ ಮುಂದೆ ಇರುವ ದೊಡ್ಡ ಸವಾಲಾಗಿದೆ ಎಂದರು.

ಅಧ್ಯಕ್ಷತೆಯನ್ನು ಪ್ರಗತಿಪರ ಚಿಂತಕ, ಕೃಷಿಕ ಪೌಲ್ ಡಿಸೋಜ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಂಗಳೂರು ವಿವಿ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಬಿತಾ ಗುಂಡ್ಮಿ ಮಾತನಾಡಿದರು. ಶುಭಾ ಕೈಪುಂಜಾಲ್ ಉಪಸ್ಥಿ ತರಿದ್ದರು. ಈ ಸಂದರ್ಭದಲ್ಲಿ ಪ್ರವೀಣ್ ಜಿ.ಕೊಡವೂರು ಅವರ ‘ಬಲೆಯೊಳ ಗಿನ ಬದುಕು’ ಛಾಯಾಚಿತ್ರ ಪ್ರದರ್ಶನಕ್ಕೆ ದಿನೇಶ್ ಅಮೀನ್ ಮಟ್ಟು ಚಾಲನೆ ನೀಡಿದರು.

ಬಾಲಕೃಷ್ಣ ಶಿಬಾರ್ಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರವೀಣ್ ಜಿ.ಕೊಡವೂರು ವಂದಿಸಿದರು. ಸುಮನಸಾದ ದಾನಂದ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X