Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ಬಸ್‌ಗಳು ನಿಯಮ ಪಾಲಿಸಲಿ:...

ಸರಕಾರಿ ಬಸ್‌ಗಳು ನಿಯಮ ಪಾಲಿಸಲಿ: ಜಿಲ್ಲಾಧಿಕಾರಿ ಪ್ರಿಯಾಂಕ

ವಾರ್ತಾಭಾರತಿವಾರ್ತಾಭಾರತಿ7 Jun 2017 9:32 PM IST
share
ಸರಕಾರಿ ಬಸ್‌ಗಳು ನಿಯಮ ಪಾಲಿಸಲಿ: ಜಿಲ್ಲಾಧಿಕಾರಿ ಪ್ರಿಯಾಂಕ

ಉಡುಪಿ, ಜೂ.7: ಉಡುಪಿ ಜಿಲ್ಲೆಯ ವಿವಿಧ ಮಾರ್ಗಗಳಲ್ಲಿ ಹೊಸದಾಗಿ ಪರವಾನಿಗೆ ಪಡೆದಿರುವ ಸರಕಾರಿ ಬಸ್‌ಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ನೀಡಿದ ಸಮಯದ ಪ್ರಕಾರವೇ ಸಂಚರಿಸಬೇಕು ಎಂದು ಪ್ರಾಧಿಕಾರದ ಅಧ್ಯಕ್ಷೆ ಹಾಗೂ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ಬುಧವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಖಾಸಗಿ ಬಸ್ ಮಾಲಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅವರು ಕೆಎಸ್ ಆರ್‌ಟಿಸಿ ಅಧಿಾರಿಗಳಿಗೆ ಈ ರೀತಿ ಸೂಚನೆ ನೀಡಿದರು.

ಹೊಸದಾಗಿ ಪರವಾನಿಗೆ ಪಡೆದಿರುವ ಹೊನ್ನಾಳ- ಉಡುಪಿ ಮಾರ್ಗದ ಸರಕಾರಿ ಬಸ್‌ಗಳು ನಿಗದಿತ ಅವಧಿಯಲ್ಲಿ ಸಂಚರಿಸದ ಪರಿಣಾಮ ಖಾಸಗಿ ಬಸ್‌ಗಳು ನಷ್ಟಕ್ಕೆ ಒಳಗಾಗುತ್ತಿವೆ ಎಂದು ಬಸ್ ಮಾಲಕಿ ರಾಧದಾಸ್ ದೂರಿ ದರು. ಇದಕ್ಕೆ ಉತ್ತರಿಸಿದ ಕೆಎಸ್‌ಆರ್‌ಟಿಸಿ ಅಧಿಕಾರಿ ಜೈಶಾಂತ್, ಈ ಕುರಿತು ಚಾಲಕರಿಗೆ ಸೂಚನೆ ನೀಡಿದ್ದೇವೆ ಎಂದರು.

ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ ಮಾತನಾಡಿ, ಮಣಿಪಾಲದಲ್ಲಿ ನರ್ಮ್ ಬಸ್‌ಗಳಿಗೆ ನಿಗದಿ ಪಡಿಸಿರುವ ಬಸ್ ನಿಲ್ದಾಣಕ್ಕೆ ಬಸ್‌ಗಳು ತೆರಳದೆ ಖಾಸಗಿ ಬಸ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಎಂದು ದೂರಿದರು. ಗೋಳಿಯಂಗಡಿ ಮಾರ್ಗದ ಸರಕಾರಿ ಬಸ್‌ಗಳು ಟ್ರಿಪ್ ಕಡಿತ ಮಾಡುತ್ತದೆ ಮತ್ತು ಸಮಯ ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎಂದು ಮಾಲಕ ಸುರೇಂದ್ರ ಶೆಟ್ಟಿ ಆರೋಪಿಸಿದರು.

ಸರಕಾರಿ ಬಸ್‌ಗಳು ಖಾಸಗಿ ಜೊತೆ ಪೈಪೋಟಿಗೆ ಇಳಿಯುತ್ತಿವೆ. ಖಾಸಗಿ ಬಸ್‌ಗಳ ಮುಂದೆಯೇ ಸರಕಾರಿ ಬಸ್ ಹೋಗುತ್ತದೆ. ತೆರಿಗೆ, ವಿಮೆ ಪಾವತಿಸುವ ನಮಗೆ ಬಸ್ ನಡೆಸುವುದು ಕಷ್ಟ ವಾಗುತ್ತಿದೆ ಎಂದು ಸುಧಾಕರ್ ಶೆಟ್ಟಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಪರವಾನಿಗೆ ನೀಡಿದ ಬಳಿಕ ಸರಕಾರಿ ಬಸ್‌ಗಳಿಗೆ ವಿಶೇಷ ರಿಯಾಯಿತಿ ಏನೂ ಇಲ್ಲ. ಪ್ರಾಧಿಕಾರ ನಿಗದಿ ಪಡಿಸಿದ ಸಮಯವನ್ನು ಸರಿಯಾಗಿ ಪಾಲನೆ ಮಾಡಬೇಕು. ಖಾಸಗಿಯವರಿಂದ ತುಂಬಾ ದೂರುಗಳು ಬರುತ್ತಿವೆ. ಸರಕಾರಿ ಬಸ್‌ಗಳು ಸೂಚಿಸಿದ ಮಾರ್ಗದಲ್ಲಿ ಮಾತ್ರ ಸಂಚರಿಸಬೇಕು. ನಿಯಮಗಳ ಉಲ್ಲಂಘನೆ ಮಾಡಬಾರದು. ಈ ಕುರಿತು ಸರಕಾರಿ ಬಸ್‌ಗಳ ಚಾಲಕ ನಿರ್ವಾಹಕರಿಗೆ ಸರಿಯಾದ ಸೂಚನೆಯನ್ನು ನೀಡ ಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಸರಕಾರಿ ಬಸ್‌ಗಳು ಸಮಯ ಪಾಲನೆ ಮತ್ತು ನಿಗದಿತ ಮಾರ್ಗದಲ್ಲಿ ಸಂಚರಿಸದ ಕುರಿತು ಸಾರ್ವಜನಿಕರಿಂದ ಯಾವುದೇ ದೂರುಗಳು ಬಂದಿಲ್ಲ. ನಿಯಮಗಳನ್ನು ಪಾಲನೆ ಮಾಡುವಂತೆ ಘಟಕದ ಎಲ್ಲಾ ಚಾಲಕ ನಿರ್ವಾಹಕ ರಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಹೊಸದಾಗಿ ಸರಕಾರಿ ಬಸ್ ಸಂಚಾರ ಆರಂಭಗೊಂಡಿರುವುದರಿಂದ ಕೆಲವು ಕಡೆ ಗೊಂದಲಗಳು ಆಗಿವೆ. ವಾರ ದೊಳಗೆ ಎಲ್ಲವನ್ನು ಸರಿಪಡಿಸಲಾಗುವುದು ಎಂದು ಅಧಿಕಾರಿ ಜೈಶಾಂತ್ ತಿಳಿಸಿದರು.

ಆಗುಂಬೆ ಘಾಟ್‌ನಲ್ಲಿ ಸರಕಾರಿ ಬಸ್ ಮತ್ತು ಖಾಸಗಿ ಬಸ್‌ಗಳು ಪೈಪೋಟಿ ಯಿಂದ ಚಲಿಸುತ್ತಿವೆ. ಅಪಾಯಕಾರಿ ತಿರುವುಗಳಲ್ಲಿ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳು ವಂತೆ ಶೃಂಗೇರಿಯ ಲಕ್ಷ್ಮಿನಾರಾಯಣ ಭಟ್ ಮನವಿ ಮಾಡಿದರು.

ರಾತ್ರಿ ವೇಳೆಯಲ್ಲಿ ಖಾಸಗಿ ಬಸ್‌ಗಳನ್ನು ನಗರದ ಮುಖ್ಯ ರಸ್ತೆಗಳ ಬದಿಯಲ್ಲಿ ನಿಲ್ಲಿಸಬಾರದು. ಇದಕ್ಕೆ ಸಾರ್ವಜನಕರಿಂದ ತುಂಬಾ ದೂರುಗಳು ಬರುತ್ತಿವೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಗುರುಮೂರ್ತಿ ಕುಲಕರ್ಣಿ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X