Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತನಿಗೂ ಸಾಮಾಜಿಕ ಜವಾಬ್ದಾರಿ ಇದೆ:...

ಪತ್ರಕರ್ತನಿಗೂ ಸಾಮಾಜಿಕ ಜವಾಬ್ದಾರಿ ಇದೆ: ಗಣೇಶ್ ರಾವ್

ವಾರ್ತಾಭಾರತಿವಾರ್ತಾಭಾರತಿ7 Jun 2017 10:14 PM IST
share
ಪತ್ರಕರ್ತನಿಗೂ ಸಾಮಾಜಿಕ ಜವಾಬ್ದಾರಿ ಇದೆ: ಗಣೇಶ್ ರಾವ್

ಮಂಗಳೂರು, ಜೂ.7: ಪ್ರಜಾಪ್ರಭುತ್ವದ ಸಮಾಜದಲ್ಲಿ ನಾಲ್ಕನೇ ಅಂಗವಾಗಿ ಇರುವ ಪತ್ರಿಕೋದ್ಯಮದ ಪರ್ತಕರ್ತರಿಗೂ ಸಾಮಾಜಿಕ ಜವಾಬ್ದಾರಿ ಇದೆ ಎಂಬುದನ್ನು ಪತ್ರಕರ್ತ ಅಶೋಕ್ ಶೆಟ್ಟಿ ಜಗತ್ತಿಗೆ ಮಾದರಿಯಾಗಿದ್ದಾರೆ.

ಬರವಣಿಗೆಯನ್ನು ಲಾಭದ ದೃಷ್ಟಿಯಿಂದ ಕಾಣದೇ ಸಮಾಜದಲ್ಲಿನ ಓರೆ ಕೋರೆಯನ್ನು ತಿದ್ದುವುದರೊಂದಿಗೆ ಎಲ್ಲಾ ವರ್ಗದ ಜನರನ್ನು ಗುರುತಿಸಿ ಆದರಿಸಿ ಅವರಿಗೆ ವೇದಿಕೆಯನ್ನು ಕಲ್ಪಿಸಿದ ಬಹಳ ಅಪರೂಪದ ಕಾರ್ಯಕ್ರಮವನ್ನು ಸಂಘಟಿಸಿ ತೋರಿಸಿದ್ದಾರೆ. ಇದು ಇನ್ನಷ್ಟು ವಿಸ್ತರಿಸಬೇಕು ಎಂದು ಮಂಗಳೂರಿನ ಕರಾವಳಿ ಕಾಲೇಜು ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಎಸ್. ಗಣೇಶ್ ರಾವ್ ಹೇಳಿದರು.

 ಅವರು ಮಂಗಳೂರಿನ ಪುರಭವನದಲ್ಲಿ ನಡೆದ ಮಂಗಳೂರಿನ ಎಂಪಿಎಂಎಲ್‌ಎ ಸುದ್ದಿ ಮಾಧ್ಯಮದ 10ನೆ ಸೌಹಾರ್ದ ಸಂಗಮದ ಪ್ರಶಸ್ತಿ ಪ್ರದಾನ ಹಾಗೂ ಸಾರ್ವಜನಿಕ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಪತ್ರಿಕೆಯು ಇಂದಿನ ಕಾಲಘಟ್ಟದಲ್ಲಿ ಹಲವು ಹೊಡೆತಗಳನ್ನು ಕಾಣುತ್ತಿದೆ. ಮಂಗಳೂರಿನ ಪತ್ರಿಕೋದ್ಯಮವು ಕರ್ನಾಟಕದಲ್ಲಿ ಮುನ್ನುಡಿ ಬರೆದಿದೆ. ಅಂತಹ ಊರಿನಲ್ಲಿ ಪತ್ರಿಕೆಯೊಂದಿಗೆ ಸಮಾಜವನ್ನು ಹೇಗೆ ಗುರುತಿಸಬಹುದು ಎಂದು ಎಂಪಿಎಂಎಲ್‌ಇ ಸುದ್ದಿ ಮಾಧ್ಯಮ ಸಂಸ್ಥೆ ತೋರಿಸಿದೆ ಎಂದು ಶುಭ ಹಾರೈಸಿದರು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ಕೆ.ಲಕ್ಷ್ಮೀ ನಾರಾಯಣ ಆಸ್ರಣ್ಣ ಅವರು ಆಶೀರ್ವಚನ ನೀಡಿದರು.
ಸಂಸದ ನಳಿನ್‌ಕುಮಾರ್ ಕಟೀಲು, ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ದೇವದಾಸ್ ಕಾಪಿಕಾಡ್, ಕರ್ನಾಟಕ ವಕೀಲರ ಪರಿಷತ್‌ನ ಮಾಜಿ ಉಪಾಧ್ಯಕ್ಷ ತೋನ್ಸೆ ನಾರಾಯಣ ಪೂಜಾರಿ, ಕೆನರಾ ಬ್ಯಾಂಕ್‌ನ ಹಿರಿಯ ಪ್ರಬಂಧಕ ಕೆ.ಎ.ನ್ಯಾಕ್, ಪಣಂಬೂರು ಬೀಚ್‌ನ ಸಿ.ಇ.ಒ. ಯತೀಶ್ ಬೈಕಂಪಾಡಿ, ವಕೀಲರಾದ ಜಯರಾಂ ರೈ ಬಿ.ಸಿ.ರೋಡ್, ಶುಭ ಹಾರೈಸಿದರು.

ಚಲನಚಿತ್ರ ನಟಿ ಅಮೃತಾ ಹೆಗ್ಡೆ ಎಂಪಿಎಂಎಲ್‌ಎ ಪತ್ರಿಕೆಯ ದಶಮಾನೋತ್ಸವ ಸಂಚಿಕೆಯನ್ನು ಅನಾವರಣಗೊಳಿಸಿ ಶುಭಹಾರೈಸಿದರು.
ವೇದಿಕೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಗೀತಾ ಬಾ, ಚಿತ್ರ ನಿರ್ಮಾಪಕಿ ಗೀತಾ ಹೆಗ್ಡೆ, ಹಿರಿಯ ಸಾಹಿತಿ ಶಿವಾನಂ ಕರ್ಕೇರಾ, ಬಂಟ್ವಾಳ ತಾಲೂಕು ಇಂಜಿನಿಯರ್ಸ್‌ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ ಆನಂದ ಬಂಜನ್, ಚಲನ ಚಿತ್ರ ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ, ಕೃಷಿಕ ದಿಲೀಪ್ ರೈ ವಳವೂರು, ತುಳುನಾಡ ಪ್ರತಿಷ್ಠಾನದ ಅಧ್ಯಕ್ಷ ರಾಜೇಶ್ ಅಮೀನ್, ಗಂಗಾಧರ ಗಾಂಧಿ, ವಿಶ್ವನಾಥ ದೊಡ್ಡಮನೆ, ಕರುಣಾಕರ ಶೆಟ್ಟಿ ಸಚ್ಚೇರಿಪೇಟೆ ಮತ್ತಿತರರು ಉಪಸ್ಥಿತರಿದ್ದರು.

ಸನ್ಮಾನ ಮತ್ತು ಪ್ರಶಸ್ತಿ ಪ್ರಧಾನ:

ಧರ್ಮದರ್ಶಿ ಹರಿಕೃಷ್ಣ ಪುನರೂರು (ವರ್ಷದ ವ್ಯಕ್ತಿ), ಸಂಸದ ನಳಿನ್‌ಕುಮಾರ್ ಕಟೀಲು (ಸೌಹಾರ್ದ ಪ್ರಶಸ್ತಿ), ಮನಪಾ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು (ಸೌಹಾರ್ದ ಪುರಸ್ಕಾರ), ಬೆಸ್ಟ್ ಡಾಕ್ಟರ್ಸ್‌ ಪ್ರಶಸ್ತಿಯನ್ನು ವೈದ್ಯಕೀಯ ತಜ್ಞ ಡಾ. ಎನ್.ಆರ್.ರಾವ್, ಇಎನ್‌ಟಿ ತಜ್ಞ ಡಾ.ಸತೀಶ್ ಭಂಡಾರಿ, ಹೃದಯ ತಜ್ಞ ಡಾ.ಡಿ.ನರಸಿಂಹ ಪೈ, ಶಸ್ತ್ರ ಚಕಿತ್ಸಾ ತಜ್ಞ ಡಾ.ಅಮರ್ ಡಿ.ಎನ್., ಮಕ್ಕಳ ತಜ್ಞ ಡಾ.ಸಂತೋಷ್ ಟಿ.ಸೋನ್ಸ್, ವೆನ್ಲಾಕ್ ಆಸ್ಪತ್ರೆಯ ಡಾ.ಜೂಲಿಯಟ್ ಎ.ಎಫ್.ಸಲ್ಡಾನ, ಮಂಗಳೂರು ಪ್ರೆಸ್ ಕ್ಲಬ್‌ನ ಮಾಜಿ ಅಧ್ಯಕ್ಷ ರಾಮಕೃಷ್ಣ ಆರ್ (ಮೀಡಿಯಾ), ಚಲನಚಿತ್ರ ನಿರ್ಮಾಪಕ ಕಿಶೋರ್ ಡಿ. ಶೆಟ್ಟಿ (ಫಿಲ್ಮ್ ಅವಾರ್ಡ್) ಕಿನ್ನಿಗೋಳಿಯ ವಿಜಯಾ ಕಲಾವಿದರ ತಂಡದ ನರೇಂದ್ರ ಕೆರೆಕಾಡು (ರಂಗಭೂಮಿ), ಕೆಂಚನಕೆರೆಯ ಶ್ರೀನಾಥ್ (ಉದ್ಯೋಗ ರತ್ನ), ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ (ಯಕ್ಷಗಾನ), ಅಂಕಣಕಾರ ಎಸ್.ಜಗದೀಶ್ಚಂದ್ರ ಸೂಟರ್‌ಪೇಟೆ (ಕ್ರೀಡಾ ವರದಿಗಾರಿಕೆ), ಉಳ್ಳಿಪಾಡಿ ಜಗನ್ನಾಥ ರೈ (ಕೃಷಿಕ), ದಿನೇಶ್ ಅತ್ತಾವರ (ನಾಟಕರಂಗ), ರೂಪಾ ಆರ್. ಶೆಟ್ಟಿ (ಯೋಗಪಟು), ವಿದ್ಯಾಧರ್ ಶೆಟ್ಟಿ (ದೃಶ್ಯಮಾಧ್ಯಮ) ಹಾಗೂ ಸಾರ್ವಜನಿಕ ಸೇವೆಯಲ್ಲಿ ನಿವೃತ್ತ ಉಪ ತಹಶೀಲ್ದಾರ್ ಚಂದ್ರಕುಮಾರ್, ಪ.ಜಾತಿ ಮತ್ತು ಪ.ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿಯವರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಎಂಪಿಎಂಎಲ್‌ಎ ಸುದ್ದಿ ಮಾಧ್ಯಮದ ಮುಖ್ಯಸ್ಥ ಅಶೋಕ್ ಶೆಟ್ಟಿ ಬಿ.ಎನ್. ಸ್ವಾಗತಿಸಿ ಪ್ರಸ್ತಾವನೆಗೈದರು, ಸಿದ್ದಕಟ್ಟೆ ಮಲ್ಲಿಕಾ ಶೆಟ್ಟಿ ಮತ್ತು ನರೇಶ್‌ಕುಮಾರ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯೋಜನೆಯಲ್ಲಿ ಸಾಂಸ್ಕೃತಿಕ ಸಂಭ್ರಮವನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಉದ್ಘಾಟಿಸಿದರು.

ಹಿರಿಯ ಸಾಹಿತಿ ಶಿವಾನಂದ ಕರ್ಕೇರ ಅಧ್ಯಕ್ಷತೆಯನ್ನು ವಹಿಸಿದ್ದರು. ಗಾಯಕರಾದ ಗಂಗಾಧರ್ ಗಾಂಧಿ, ಛಾಯಾ, ಮಂಜು ಕಾರ್ಕಳ, ರಹ್ಮಾನ್ ಕೋಣಾಜೆ ಹಾಗೂ ದಿನೇಶ್ ಅತ್ತಾವರ ಅವರ ನೃತ್ಯ ಜೊತೆಗೆ ಫ್ರೇಂಡ್ಸ್ ಮಂಗಳೂರು ತಂಡದಿಂದ ಹಾಸ್ಯ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X