Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಪಂ ಕಚೇರಿ ಆವರಣದಲ್ಲಿ ನಿಷೇಧಾಜ್ಞೆ...

ಜಿಪಂ ಕಚೇರಿ ಆವರಣದಲ್ಲಿ ನಿಷೇಧಾಜ್ಞೆ ಪ್ರಸ್ತಾವ

ಪೊಲೀಸ್ ಇಲಾಖೆಯಿಂದ ಸಹಮತ

ವಾರ್ತಾಭಾರತಿವಾರ್ತಾಭಾರತಿ7 Jun 2017 10:41 PM IST
share
ಜಿಪಂ ಕಚೇರಿ ಆವರಣದಲ್ಲಿ ನಿಷೇಧಾಜ್ಞೆ ಪ್ರಸ್ತಾವ

 ಶಿವಮೊಗ್ಗ, ಜೂ. 7: ಶಿವಮೊಗ್ಗ ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಕ್ರಿಮಿನಲ್ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) 144ನೆ ಕಲಂ ಅನ್ವಯ ನಿರಂತರ ನಿಷೇಧಾಜ್ಞೆ ವಿಧಿಸುವ ಪ್ರಸ್ತಾವಕ್ಕೆ ಪೊಲೀಸ್ ಇಲಾಖೆ ಕೂಡ ಸಹಮತ ವ್ಯಕ್ತಪಡಿಸಲು ನಿರ್ಧರಿಸಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ಖಚಿತ ಪಡಿಸಿದ್ದಾರೆ.


  ನಿಷೇಧಾಜ್ಞೆಗೆ ಸಹಮತ ವ್ಯಕ್ತಪಡಿಸುವ ನಿರ್ಧಾರದ ಬಗ್ಗೆ ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕೃತ ಪತ್ರ ಇನ್ನೂ ಜಿಲ್ಲಾಡಳಿತದ ಕೈ ಸೇರಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಅಧಿಕೃತ ಪತ್ರ ಕೈ ಸೇರಿದ ನಂತರವಷ್ಟೆ ಜಿಲ್ಲಾಡಳಿತದ ನಿರ್ಧಾರ ವೆನೆಂಬುವುದು ಪ್ರಕಟಿಸುವುದಾಗಿ ಜಿಲ್ಲಾಡಳಿತದ ಉನ್ನತ ಮೂಲಗಳು ಮಾಹಿತಿ ನೀಡಿವೆ.

ಅಭಿಪ್ರಾಯ ಕೇಳಲಾಗಿತ್ತು: ಇತ್ತೀಚೆಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಡಾ. ಕೆ. ರಾಕೇಶ್‌ಕುಮಾರ್ ಜಿಪಂ ಕಚೇರಿ ಆವರಣದಲ್ಲಿ 144 ನೇ ಕಲಂ ಅನ್ವಯ ನಿರಂತರ ನಿಷೇಧಾಜ್ಞೆ ವಿಧಿಸುವಂತೆ ಕೋರಿ ಜಿಲ್ಲಾಧಿಕಾರಿಗೆ ಪ್ರಸ್ತಾವ ಕಳುಹಿಸಿದ್ದರು. ಈ ಕೋರಿಕೆಯ ಪರೀಶಿಲನೆ ನಡೆಸಿದ ಡಿ.ಸಿ. ಡಾ. ಎಂ. ಲೋಕೇಶ್, ಪೊಲೀಸ್ ಇಲಾಖೆಯ ಅಭಿಪ್ರಾಯ ಕೋರಿದ್ದರು. ಜಿಪಂ ಕಚೇರಿ ಆವರಣದಲ್ಲಿ ನಿರಂತರ ನಿಷೇಧಾಜ್ಞೆ ವಿಧಿಸುವಂತಹ ಪರಿಸ್ಥಿತಿಯಿದೆಯೇ? ಎಂಬುವುದನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು.ಈ ನಡುವೆ ಪೊಲೀಸ್ ಇಲಾಖೆಯು, ಜಿಪಂ ಕಚೇರಿ ಆವರಣದಲ್ಲಿ 144 ನೇ ಕಲಂ ಅನ್ವಯ ನಿಷೇಧಾಜ್ಞೆ ಹೇರಲು ಸಹಮತ ವ್ಯಕ್ತಪಡಿಸಿದೆ. ಇದನ್ನು ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆಯವರು ಖಚಿತ ಪಡಿಸಿದ್ದಾರೆ.

ಪೊಲೀಸ್ ಇಲಾಖೆಯ ಈ ಪ್ರಸ್ತಾವವನ್ನು ಜಿಲ್ಲಾಧಿಕಾರಿ ಅಂಗೀಕರಿಸಿ ನಿಷೇಧಾಜ್ಞೆ ಜಾರಿಗೊಳಿಸಲಿದ್ದಾರಾ? ಅಥವಾ ನಿಷೇಧಾಜ್ಞೆ ವಿಧಿಸದಿರುವ ತೀರ್ಮಾನ ಕೈಗೊಳ್ಳಲಿದ್ದಾರಾ? ಎಂಬುವುದು ಇನ್ನಷ್ಟೆ ಗೊತ್ತಾಗಬೇಕಾಗಿದೆ. ‘ನಿಷೇಧಾಜ್ಞೆಗೆ ಶಿಫಾರಸು ಮಾಡಲಾಗುತ್ತಿದೆ’

ಜಿಪಂ ಕಚೇರಿ ಆವರಣದಲ್ಲಿ ಸಿಆರ್‌ಪಿಸಿ ಕಲಂ 144 ರ ಅನ್ವಯ ನಿರಂತರ ನಿಷೇಧಾಜ್ಞೆ ವಿಧಿಸುವ ಪ್ರಸ್ತಾವದ ಕುರಿತಂತೆ ಜಿಲ್ಲಾಡಳಿತ ಪೊಲೀಸ್ ಇಲಾಖೆಯ ಅಭಿಪ್ರಾಯ ಕೋರಿದ್ದರ ಬಗ್ಗೆ ಬುಧವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆಯವರು ಮಾತನಾಡಿದರು.

’ಜಿ.ಪಂ. ಕಚೇರಿ ಆವರಣದಲ್ಲಿ ನಿಷೇಧಾಜ್ಞೆ ವಿಧಿಸುವುದಕ್ಕೆ ಶಿಫಾರಸು ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನಿಷೇಧಾಜ್ಞೆ ವಿಧಿಸುವುದರಿಂದ ಕಚೇರಿ ಕೆಲಸ ಕಾರ್ಯಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಪತ್ರಿಕ್ರಿಯೆ ನೀಡಿದ್ದಾರೆ.
ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಜಿಲ್ಲಾಧಿಕಾರಿ?
ಜಿಪಂ ಕಚೇರಿ ಆವರಣದಲ್ಲಿ ನಿಷೇಧಾಜ್ಞೆ ವಿಧಿಸುವಂತೆ ಕುರಿತಂತೆ ಜಿಲ್ಲಾಧಿಕಾರಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸುವಂತೆ ಮಾಡಿದೆ. ನಿಷೇಧಾಜ್ಞೆ ವಿಧಿಸುವ ಸಿಇಓ ಡಾ. ಕೆ. ರಾಕೇಶ್‌ಕುಮಾರ್‌ರ ಅಭಿಪ್ರಾಯಕ್ಕೆ ಜಿಲ್ಲಾ ರಕ್ಷಣಾಧಿಕಾರಿಯೂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಅಂತಿಮ ನಿರ್ಧಾರ ಜಿಲ್ಲಾಧಿಕಾರಿಗಳೇ ಕೈಗೊಳ್ಳಬೆಕಾಗಿದೆ.

ಪೊಲೀಸ್ ಇಲಾಖೆಯ ಅಭಿಪ್ರಾಯದ ಪತ್ರ ಅಧಿಕೃತವಾಗಿ ಕೈ ಸೇರಿದ ನಂತರ ಡಿ.ಸಿ. ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X