Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಣ ಗಳಿಕೆಯ ಆತುರದಲ್ಲಿ ಶಾಂತಿಯನ್ನು...

ಹಣ ಗಳಿಕೆಯ ಆತುರದಲ್ಲಿ ಶಾಂತಿಯನ್ನು ಕಳೆದುಕೊಳ್ಳುತ್ತಿದ್ದೇವೆ : ಶ್ರೀಗೌತಮಾನಂದಜೀ ಮಹರಾಜ್

ವೇದಾಂತ ಸಂಘ ಶತಮಾನೋತ್ಸವ

ವಾರ್ತಾಭಾರತಿವಾರ್ತಾಭಾರತಿ8 Jun 2017 5:57 PM IST
share
ಹಣ ಗಳಿಕೆಯ ಆತುರದಲ್ಲಿ ಶಾಂತಿಯನ್ನು ಕಳೆದುಕೊಳ್ಳುತ್ತಿದ್ದೇವೆ : ಶ್ರೀಗೌತಮಾನಂದಜೀ ಮಹರಾಜ್

ಮಡಿಕೇರಿ, ಜೂ.8 :ಬದುಕಿಗೆ ಸುಖ ಶಾಂತಿ ನೆಮ್ಮದಿಯನ್ನು ಹೊಂದಲು ಬಡತನದಿಂದ ಹೊರ ಬರಬೇಕೆನ್ನುವ ಕಲ್ಪನೆ ಹಿಂದೆ ಇತ್ತು. ಪ್ರಸ್ತುತ ಬಡತನ ಸಾಕಷ್ಟು ಪ್ರಮಾಣದಲ್ಲಿ ಮರೆಯಾಗಿ ಹೆಚ್ಚಿನ ಹಣ ಗಳಿಕೆಯ ಆತುರದಲ್ಲಿ ನಮ್ಮೊಳಗಿನ ಶಾಂತಿ ಮರೆಯಾಗಿ ಅಶಾಂತಿ ನಿರ್ಮಾಣವಾಗಿದೆ ಎಂದು ಶ್ರೀ ರಾಮಕೃಷ್ಣ ಮಿಷನ್ನಿನ ಉಪಾಧ್ಯಕ್ಷರು ಹಾಗೂ ಚೆನ್ನೈ ಶ್ರೀರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀಗೌತಮಾನಂದಜೀ ಮಹರಾಜ್ ಅಭಿಪ್ರಾಯಪಟ್ಟಿದ್ದಾರೆ.

 ನಗರದಲ್ಲಿರುವ ಶ್ರೀರಾಮಕೃಷ್ಣ ಮಿಷನ್ನಿನ ವೇದಾಂತ ಸಂಘ ಶತಮಾನೋತ್ಸವದ ಸಂಭ್ರಮದಲ್ಲಿದ್ದು, ನವೀಕರಿಸಲ್ಪಟ್ಟ ಸಂಘದ ಭವನದಲ್ಲಿ ಶ್ರೀರಾಮಕೃಷ್ಣ ಪರಮಹಂಸರು-ಶಾರದಾಮಾತೆ ಹಾಗೂ ಸ್ವಾಮಿ ವಿವೇಕಾನಂದರ ಭಾವಚಿತ್ರಗಳನ್ನು ಅನಾವರಣಗೊಳಿಸಲಾಯಿತು. ನಂತರ ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀಗೌತಮಾನಂದಜೀ ಮಹರಾಜ್ ಮಾತನಾಡಿದರು.

 ನೈಜವಾದ ಶಾಂತಿ ನಮ್ಮೊಳಗೇ ಇದ್ದು, ಅದನ್ನು ನಿರಂತರವಾದ ಪ್ರಾರ್ಥನೆ, ಧ್ಯಾನ, ಸತ್ಸಂಗಗಳ ಮೂಲಕ ಪಡೆಯಲು ಸಾಧ್ಯವಿದೆ. ನಮ್ಮೆಲ್ಲ ಕರ್ತವ್ಯಗಳ ನಡುವೆಯೂ ಆಂತರಿಕವಾದ ಶಾಂತಿಗಾಗಿ ಪ್ರಾರ್ಥನೆಗೆ ಅವಕಾಶವನ್ನು ನೀಡುವಂತೆ ಶ್ರೀ ಗೌತಮಾನಂದಜೀ ಮಹಾರಾಜ್ ಕರೆ ನೀಡಿದರು.
ಹೊರ ಪ್ರಪಂಚದ ಸತ್ಯಗಳ ಆವಿಷ್ಕಾರ ವಿಜ್ಞಾನವೆನಿಸಿಕೊಂಡರೆ, ನಮ್ಮೊಳಗಿನ ಸತ್ಯವನ್ನು ತೋರಿಸಿಕೊಡುವಂತದ್ದು ಧರ್ಮವಾಗಿದೆ. ಇಂತಹ ಆತ್ಮ ಸಾಕ್ಷಾತ್ಕಾರಕ್ಕೆ ಪಥವನ್ನು ತೋರಿಸಿಕೊಟ್ಟವರು ಶ್ರೀ ರಾಮಕೃಷ್ಣ ಪರಮಹಂಸರೆಂದು ಅವರು ತಿಳಿಸಿದರು.

ಶ್ರೀಗೌತಮಾನಂದಜೀ ಮಹರಾಜ್ ಅವರಿಗೆ ವೇದಾಂತ ಸಂಘದ ಅಧ್ಯಕ್ಷರಾದ ಕೆ.ಎಸ್. ದೇವಯ್ಯ, ಭಾರತೀಯ ವಿದ್ಯಾಭವನದ ಕೊಡಗು ಕೇಂದ್ರದ ಪ್ರಮುಖರಾದ ಕೆ.ಪಿ.ಉತ್ತಪ್ಪ, ವೇದಾಂತ ಸಂಘದ ಮಾಜಿ ಕಾರ್ಯದರ್ಶಿಗಳಾದ ಕೆ.ಪಿ.ಬಾಲಸುಬ್ರಹ್ಮಣ್ಯ ಮತ್ತು ಚಿ.ನಾ.ಸೋಮೇಶ್ ಬಿನ್ನವತ್ತಳೆ ಸಲ್ಲಿಸಿ ಗೌರವವನ್ನು ಅರ್ಪಿಸಿದರು.

ಸಭೆಯ  ಮೊದಲು ನವೀಕೃತ ವೇದಾಂತ ಸಂಘದಲ್ಲಿ ಶ್ರೀ ರಾಮಕೃಷ್ಣ, ಶಾರದಾ ಮಾತೆ, ಶ್ರೀ ಸ್ವಾಮಿ ವಿವೇಕಾನಂದರ ಭಾವಚಿತ್ರಗಳನ್ನು ಅನಾವರಣಗೊಳಿಸಿದ ಶ್ರೀ ಗೌತಮಾನಂದಜೀ ಮಹರಾಜ್ ಅವರು ವಿಶೇಷ ಪೂಜೆ ಸಲ್ಲಿಸಿದರು.

 ಸಮಾರಂಭದಲ್ಲಿ ಪೊನ್ನಂಪೇಟೆ ಶ್ರೀರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷರಾದ ಶ್ರೀ ಬೋಧ ಸ್ವರೂಪಾನಂದಜೀ ಮಹರಾಜ್ ಹಾಗೂ ಶ್ರೀ ಆತ್ಮಾನಂದಜೀ ಮಹರಾಜ್, ಶ್ರೀ ಧರ್ಮಾನಂದಜೀ ಮಹರಾಜ್, ಶ್ರೀ ನಿತ್ಯಸ್ಥಾನಾನಂದಜೀ ಮಹರಾಜ್ ಸೇರಿದಂತೆ ಭಗವದ್ ಭಕ್ತರು ಪಾಲ್ಗೊಂಡಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X