Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಪ್ರೇಕ್ಷಕನ ಹೃದಯ ಗೆಲ್ಲುವ ಜಾಣ್ಮೆ...

‘ಪ್ರೇಕ್ಷಕನ ಹೃದಯ ಗೆಲ್ಲುವ ಜಾಣ್ಮೆ ಕಲಾವಿದನಿಗಿರಬೇಕು’

ವಾರ್ತಾಭಾರತಿವಾರ್ತಾಭಾರತಿ9 Jun 2017 3:53 PM IST
share
‘ಪ್ರೇಕ್ಷಕನ ಹೃದಯ ಗೆಲ್ಲುವ ಜಾಣ್ಮೆ ಕಲಾವಿದನಿಗಿರಬೇಕು’

ಕಾಸರಗೋಡು, ಜೂ. 9: ಯಕ್ಷಗಾನದಲ್ಲಿ ಭಾವಾಭಿನಯಕ್ಕೆ ಪ್ರಾಧಾನ್ಯವಿಲ್ಲ ಎಂಬ ಮಾತು ಸರಿಯಲ್ಲ. ಪಾತ್ರದ ಜೀವಾಳವನ್ನರಿತು ಪರಿಪೂರ್ಣವಾಗಿ ಅಭಿನಯಿಸುವ ಕಲಾವಿದರನ್ನು ಪ್ರೇಕ್ಷಕರು ಹೃದಯದ ಹತ್ತಿರಕ್ಕೆ ತಂದುಕೊಳ್ಳುತ್ತಾರೆ. ಆದ ಕಾರಣ ಭಾವಾಭಿನಯ ಮೂಲಕ ಪ್ರೇಕ್ಷಕನ ಹೃದಯ ಗೆಲ್ಲುವ ಜಾಣ್ಮೆ ಯಕ್ಷಗಾನದ ಕಲಾವಿದನಿಗಿರಬೇಕು ಎಂದು ಹಿರಿಯ ಯಕ್ಷಗಾನ ಕಲಾವಿದ ಹಾಗೂ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ವಿಜೇತ ಗೋವಿಂದ ಭಟ್ ಸೂರಿಕುಮೇರಿ ಅಭಿಪ್ರಾಯಪಟ್ಟರು.

ಅವರು ಕಾಸರಗೋಡು ಸರಕಾರಿ ಕಾಲೇಜಿನ ಯಕ್ಷಗಾನ ಸಂಶೋಧನ ಕೇಂದ್ರದ ವತಿಯಿಂದ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನ ಅಂಗವಾಗಿ ಎಡನೀರು ಮಠದ ಪರಿಸರದಲ್ಲಿ ನಡೆಯುತ್ತಿರುವ ಒಂದು ತಿಂಗಳ ಯಕ್ಷಗಾನ ತರಬೇತಿ ಶಿಬಿರಕ್ಕೆ ಭೇಟಿಯಾಗಿ ಶಿಬಿರಾರ್ಥಿಗಳೊಂದಿಗೆ ಮಾತನಾಡಿದರು.

   ಯಕ್ಷಗಾನ ಕ್ಷೇತ್ರದಲ್ಲಿ ಅರುವತ್ತಾರು ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿರುವ ಗೋವಿಂದ ಭಟ್ ಅವರು ಕಾಲೇಜು ವಿದ್ಯಾರ್ಥಿಗಳೊಂದಿಗೆ ತಮ್ಮ ಅನುಭವ ರಸಾಯನವನ್ನು ಹಂಚಿಕೊಂಡರು. ಶಿಬಿರಾರ್ಥಿಗಳ ಹಲವು ಸಂಶಯಗಳಿಗೆ ಅವರು ಉತ್ತರಿಸಿದ್ದರು. ಎಳೆಯರ ಅಪೇಕ್ಷೆಯನ್ನು ಮನ್ನಿಸಿ ವೀರ, ಕರುಣ, ಶೃಂಗಾರ, ಹಾಸ್ಯ ಮುಂತಾದ ರಸಭಾವಗಳನ್ನು ಅಭಿನಯದ ಮೂಲಕ ತೋರಿಸಿಕೊಟ್ಟರು.
    ಸೂರಿಕುಮೇರಿಯವರ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆಯಲ್ಲಿ ಶಿಬಿರಾರ್ಥಿಗಳಲ್ಲದೆ ರೋಹಿಣಿ, ಗಣೇಸ, ಸ್ಕಂದ, ಯತೀಶ್ ಜೆ. ಪಿ., ಧನರಾಜ್, ಸಂದೇಶ್ ಕುಮಾರ್, ಬಾಲಕೃಷ್ಣ ಮಣಿಯಾಣಿ, ಪುತ್ತೂರು ಗಂಗಾಧರ, ಡಾ. ಯು. ಮಹೇಶ್ವರಿ, ಡಾ. ಶಂಕರನಾರಾಯಣ ಭಟ್, ರಮೇಶ್ ಭಟ್ ಪುತ್ತೂರು, ಬಿ. ವಾಮನ ಆಚಾರ್ಯ, ಬಳ್ಳಮೂಲೆ ಗೋವಿಂದ ಭಟ್, ನಾಟ್ಯಗುರುಗಳಾದ ದಿವಾಣ ಶಿವಶಂಕರ ಭಟ್, ಸಬ್ಬಣಕೋಡಿ ರಾಮ ಭಟ್, ಸಂಯೋಜನಾಧಿಕಾರಿ ಡಾ. ರತ್ನಾಕರ ಮಲ್ಲಮೂಲೆ ಪಾಲ್ಗೊಂಡರು.
    ಯಕ್ಷಗಾನದಲ್ಲಿ ಭಾವಾಭಿನಯ ಎಂಬ ವಿಷಯದಲ್ಲಿ ನಡೆದ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಸಂಚಾಲಕ ಡಾ. ರತ್ನಾಕರ ಮಲ್ಲಮೂಲೆ ಸ್ವಾಗತಿಸಿ, ಶಿಬಿರಾರ್ಥಿ ಸುಪ್ರಿಯ ವಂದಿಸಿದರು.
  ಜು. 2ರಂದು ಶಿಬಿರ ಸಮಾಪನಗೊಳ್ಳಲಿದೆ. ಪ್ರತಿದಿನ ಅಪರಾಹ್ನ ಉಪನ್ಯಾಸ ಪ್ರಾತ್ಯಕ್ಷಿಕೆ ನಡೆಯುತ್ತಿದೆ. ಯಕ್ಷಗಾನದಲ್ಲಿ ಸ್ತ್ರೀವೇಷ ಎಂಬ ವಿಷಯದಲ್ಲಿ ಕುಂಬಳೆ ಶ್ರೀಧರ ರಾವ್ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನೀಡಿದರು.

ಜೂ. 9ರಂದು ಯಕ್ಷಗಾನದಲ್ಲಿ ಹಾಸ್ಯ ಎಂಬ ವಿಷಯದಲ್ಲಿ ಬಾಲಕೃಷ್ಣ ಮಣಿಯಾನಿ ಮವ್ವಾರು, 10ರಂದು ಯಕ್ಷಗಾನ ಸಾಹಿತ್ಯದ ಕುರಿತು ತಾರಾನಾಥ ವರ್ಕಾಡಿ, 12ರಂದು ಯಕ್ಷಗಾನದಲ್ಲಿ ಪುಂಡುವೇಷ ಎಂಬ ವಿಷಯದಲ್ಲಿ ಡಾ. ಬಳ್ಳಂಬೆಟ್ಟು ಶ್ರೀಧರ ಭಂಡಾರಿ, ಯಕ್ಷಗಾನ ಮತ್ತು ಆಧುನೀಕತೆ ಎಂಬ ವಿಷಯದಲ್ಲಿ ಶಂಕರ ರೈ ಮಾಸ್ತರ್, 13ರಂದು ಯಕ್ಷಗಾನದಲ್ಲಿ ರಾಜವೇಷಗಳು ಎಂಬ ವಿಷಯದಲ್ಲಿ ಸುಬ್ರಾಯ ಹೊಳ್ಳ ಕಾಸರಗೋಡು, 14ರಂದು ಯಕ್ಷಗಾನದಲ್ಲಿ ತುಳುಪ್ರಸಂಗಗಳು ಎಂಬ ವಿಷಯದಲ್ಲಿ ರಾಧಾಕೃಷ್ಣ ನಾವಡ ಮಧೂರು, 15ರಂದು ಯಕ್ಷಗಾನ ಪರಂಪರೆ ಮತ್ತು ಅನುಭವ ಎಂಬ ವಿಷಯದ ಕುರಿತು ಕೋಳ್ಯೂರು ರಾಮಚಂದ್ರ ರಾವ್, ಕುರಿಯ ಗಣಪತಿ ಶಾಸ್ತ್ರಿ, ಕೋಟೆ ರಾಮ ಭಟ್, ವಿದ್ವಾನ್ ಬಾಬು ರೈ ಮೊದಲಾದವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X