Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ:...

ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಕೃಪಾ ಆಳ್ವ

ಶಾಲೆಗಳ ಉನ್ನತೀಕರಣ ಕುರಿತು ಸಭೆ

ವಾರ್ತಾಭಾರತಿವಾರ್ತಾಭಾರತಿ9 Jun 2017 10:25 PM IST
share
ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಕೃಪಾ ಆಳ್ವ

ಕಾರವಾರ, ಜೂ.9: ಪ್ರತಿಯೊಂದು ಸರಕಾರಿ ಶಾಲೆಗಳಲ್ಲಿ ಹಳೆಯ ವಿ್ಯಾರ್ಥಿ ಸಂಘಗಳನ್ನು ಬಲಪಡಿಸುವ ಮೂಲಕ ಶಾಲೆಗಳ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಹೇಳಿದ್ದಾರೆ.


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಕಾರಿ ಶಾಲೆಗಳ ಉನ್ನತೀಕರಣ ಕುರಿತು ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬಹುತೇಕ ಶಾಲೆಗಳು ದಶಕಗಳು ಇನ್ನು ಕೆಲವು ಶಾಲೆಗಳು ಶತಮಾನೋತ್ಸವಗಳನ್ನು ಕಂಡಿವೆ. ಅಂಥ ಶಾಲೆಗಳಲ್ಲಿ ಕಲಿತವರು ಇಂದು ವಿವಿಧ ಉನ್ನತ ಹುದ್ದೆಗಳಲ್ಲಿರಬಹುದು.

ಅಂತಹ ವಿದ್ಯಾರ್ಥಿಗಳು ತಾನು ಕಲಿತ ಶಾಲೆಯನ್ನು ಮರೆಯದೆ, ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ, ತನ್ನ ಶಾಲೆಯ ಶಿಕ್ಷಣದ ಗುಣಮಟ್ಟ ಸುಧಾರಿಸಲು ನಿರಂತರ ಕೊಡುಗೆ ನೀಡಬೇಕು. ಈ ರೀತಿ ಸಮುದಾಯದ ಸಹಕಾರದಿಂದ ಸರಕಾರಿ ಶಾಲೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಸಾಧ್ಯವಿದೆ. ಈ ಸಭಾಂಗಣದಲ್ಲಿರುವ ಅಧಿಕಾರಿಗಳ ಪೈಕಿ ಸರಕಾರಿ ಶಾಲೆಯಲ್ಲಿ ಕಲಿತವರು ಕೈಎತ್ತಿ ಎಂದಾಗ ಶೇ.90ರಷ್ಟು ಮಂದಿ ಕೈ ಎತ್ತಿದ್ದು, ವಿಶೇಷವಾಗಿತ್ತು. ತಾವು ಸಹ ಕಲಿತ ಶಾಲೆಯನ್ನು ಮರೆಯದೆ ನೆರವು ನೀಡುವಂತೆ ಮನವಿ ಮಾಡಿದರು. ಜಿಲ್ಲೆಯ ಶೈಕ್ಷಣಿಕ ಸ್ಥಿತಿಗತಿಯ ಬಗ್ಗೆ ವಿವರಿಸಿದ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಅವರು, ತಾವು ಭೇಟಿ ನೀಡಿದ ಮೂರು ಶಾಲೆಗಳ ಪರಿಸ್ಥಿತಿಯನ್ನು ಉದಾಹರಣೆ ಸಮೇತ ವಿವರಿಸಿದರು.

ಕಾರವಾರ ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳಿಗೆ ಡಿಡಿಪಿಐ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎರಡು ಶಾಲೆಗಳಲ್ಲಿ ಮಕ್ಕಳ ಗ್ರಹಿಕಾ ಸಾಮರ್ಥ್ಯ, ಕಲಿಕೆ ಮಟ್ಟ ಅತ್ಯುತ್ತಮವಾಗಿತ್ತು. ಅಲ್ಲಿನ ಶಿಕ್ಷಕರು ಸಹ ಅತ್ಯುತ್ಸಾಹಿಗಳಾಗಿದ್ದು, ಮಕ್ಕಳೊಂದಿಗೆ ಬೆರೆತು ಕರ್ತವ್ಯ ನಿರ್ವಹಿಸುತ್ತಿರುವುದು ಕಂಡು ಬಂತು. ಕಲಿಕಾ ಸಾಮರ್ಥ್ಯ ಕಡಿಮೆ ಇರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಕಡೆ ವಿಶೇಷ ಗಮನ ನೀಡಿರುವುದು ಸ್ಪಷ್ಟವಾಗಿತ್ತು. ಆದರೆ ಮೂರನೆ ಶಾಲೆಯಲ್ಲಿ ಬಹುತೇಕ ಎಲ್ಲ ವಿದ್ಯಾರ್ಥಿಗಳ ಗುಣಮಟ್ಟ ಅತ್ಯಂತ ಕಳಪೆಯಾಗಿತ್ತು. ಕಲಿಕೆಯ ಸಾಮಾನ್ಯ ಹಂತ ತಲುಪಲು ಅವರಿಗೆ ಸಾಧ್ಯವಾಗಿರಲಿಲ್ಲ. ಶಿಕ್ಷಕರ ಉದಾಸೀನತೆ, ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ಈ ರೀತಿ ಶಿಕ್ಷಕರು ಮಾಡುವ ತಪ್ಪಿಗೆ ಮಕ್ಕಳ ಭವಿಷ್ಯ ಹಾಳಾಗಬಾರದು ಎಂದು ಅವರು ಎಚ್ಚರಿಕೆ ನೀಡಿದರು.

ಎಲ್ಲ ಸರಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸಮರ್ಪಕ ನೀರಿನ ಸೌಲಭ್ಯ ಇರುವ ಶೌಚಾಲಯ, ಪ್ರತಿಯೊಬ್ಬ ವಿದ್ಯಾರ್ಥಿಗೆ ಬೆಂಚು ಮತ್ತು ಡೆಸ್ಕ್, ಶಾಲೆಗೆ ಸುತ್ತ ಕಂಪೌಂಡ್, ಸಣ್ಣ ಗಾರ್ಡನ್, ಆಟಿಕೆ ಸಾಮಗ್ರಿಗಳು ಇರುವಂತೆ ನೋಡಿಕೊಳ್ಳಬೇಕು. ಅಂಗನವಾಡಿಗಳನ್ನು ಆದಷ್ಟು ಶಾಲಾ ಆವರಣದಲ್ಲಿ ನಿರ್ಮಿಸಲು ಆದ್ಯತೆ ನೀಡಬೇಕು. ಈ ಮೂಲಕ ಪ್ರಥಮ ತರಗತಿಗೆ ವಿದ್ಯಾರ್ಥಿಗಳನ್ನು ಸೆಳೆಯಲು ಸುಲಭವಾಗುತ್ತದೆ. ಅಂಗನವಾಡಿಗಳಲ್ಲಿ ಕಲಿಕಾ ವಾತಾವರಣ ಉತ್ತಮಪಡಿಸಬೇಕು. ಪ್ರಥಮ ತರಗತಿಯಿಂದ ಕಡ್ಡಾಯವಾಗಿ ಇಂಗ್ಲಿಷ್, ಮ್ಯೂಸಿಕ್ ಮತ್ತು ದೈಹಿಕ ಶಿಕ್ಷಣ ತರಗತಿ ಆರಂಭಿಸಬೇಕು ಎಂದು ಅಧ್ಯಕ್ಷರು ಹೇಳಿದರು.ಸಭೆಯಲ್ಲಿ ಆಯೋಗದ ಸದಸ್ಯ ಕೆ.ಬಿ.ರೂಪಾನಾಯ್ಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದ್ದರು.

ಜಿಲ್ಲೆಯ ಬಹುತೇಕ ಅಂಗನವಾಡಿಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಆಟಿಕೆ ಸಾಮಗ್ರಿಗಳನ್ನು ಒದಗಿಸಲಾಗಿದೆ. ಪ್ರತೀ ಅಂಗನವಾಡಿಗಳಲ್ಲಿ ಬ್ರಿಟಾನಿಯಾ ಕಂಪೆನಿ ವತಿಯಿಂದ ಬಿಸ್ಕಿಟ್ ನೀಡಲಾಗುತ್ತಿದ್ದು, ರಾಜ್ಯದಲ್ಲಿಯೇ ನಮ್ಮ ಜಿಲ್ಲೆಯಲ್ಲಿ ಮಾತ್ರ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜೇಂದ್ರ ಬೇಕಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶ


ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ನಿರಂತರ ತಪಾಸಣೆಗೆ ಹೋಗಬೇಕು. ಈ ರೀತಿ ತಪಾಸಣೆಗೆ ಹೋದಾಗ ಕೇವಲ ಹಾಜರಾತಿ ಇತ್ಯಾದಿ ಆಡಳಿತಾತ್ಮಕ ಅಂಶಗಳ ಕಡೆಗೆ ಮಾತ್ರ ಗಮನ ಹರಿಸಿದರೆ ಸಾಲದು. ಗುಣಮಟ್ಟದ ಶಿಕ್ಷಣ ನೀಡಲು ಕೈಗೊಂಡಿರುವ ಕ್ರಮಗಳು, ಈ ಕುರಿತಾದ ಮಾನದಂಡವನ್ನು ಅನುಸರಿಸುತ್ತಿದ್ದಾರೆಯೇ ಎಂದು ಪರಿಶೀಲಿಸಿ ಮಾರ್ಗದರ್ಶನ ನೀಡಬೇಕು. ನಮ್ಮ ಮಕ್ಕಳ ಶಿಕ್ಷಣಕ್ಕೆ ನೀಡುವಷ್ಟೇ ಮಹತ್ವವನ್ನು ಇತರ ಮಕ್ಕಳ ಶಿಕ್ಷಣಕ್ಕೂ ನೀಡಬೇಕು. ಕೃಪಾ ಆಳ್ವ, ಅಧ್ಯಕ್ಷೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X