Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚಾಂಪಿಯನ್ಸ್ ಟ್ರೋಫಿ: ಆಸ್ಟ್ರೇಲಿಯಕ್ಕೆ...

ಚಾಂಪಿಯನ್ಸ್ ಟ್ರೋಫಿ: ಆಸ್ಟ್ರೇಲಿಯಕ್ಕೆ ಇಂದು ಮಾಡು-ಮಡಿ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ9 Jun 2017 11:41 PM IST
share
ಚಾಂಪಿಯನ್ಸ್ ಟ್ರೋಫಿ: ಆಸ್ಟ್ರೇಲಿಯಕ್ಕೆ ಇಂದು ಮಾಡು-ಮಡಿ ಪಂದ್ಯ

ಬರ್ಮಿಂಗ್‌ಹ್ಯಾಮ್, ಜೂ.9: ಚಾಂಪಿಯನ್ಸ್ ಟ್ರೋಫಿಯಲ್ಲಿ ಶನಿವಾರ ವಿಶ್ವ ಚಾಂಪಿಯನ್ ಆಸ್ಟ್ರೇಲಿಯ ತಂಡ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ನ ವಿರುದ್ಧ ಗೆಲ್ಲಲೇಬೇಕಾದ ಪಂದ್ಯವನ್ನು ಆಡಲಿದ್ದು, ಈ ಪಂದ್ಯಕ್ಕೆ ಮಳೆ ಅಡ್ಡಿಯಾಗದೆಂಬ ವಿಶ್ವಾಸದಲ್ಲಿದೆ.

ಆತಿಥೇಯ ಇಂಗ್ಲೆಂಡ್ ಸತತ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿ ಈಗಾಗಲೇ ಸೆಮಿ ಫೈನಲ್‌ಗೆ ತಲುಪಿದೆ. ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ ವಿರುದ್ಧದ ಪಂದ್ಯ ಮಳೆಗಾಹುತಿಯಾಗಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯದ ಸೆಮಿ ಫೈನಲ್ ಅವಕಾಶಕ್ಕೆ ತೀವ್ರ ಹಿನ್ನಡೆಯಾಗಿದೆ.

ಆಸ್ಟ್ರೇಲಿಯ ಕಳೆದೆರಡು ಪಂದ್ಯಗಳಲ್ಲಿ ಪೂರ್ಣ ಪಂದ್ಯವನ್ನಾಡಲು ಸಾಧ್ಯಗಾಗದೇ ಎದುರಾಳಿ ತಂಡದೊಂದಿಗೆ ಅಂಕ ಹಂಚಿಕೊಂಡಿದೆ. 2 ಪಂದ್ಯಗಳಲ್ಲಿ 2 ಅಂಕ ಗಳಿಸಿರುವ ಆಸೀಸ್ ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿದೆ.

ಎಡ್ಜ್‌ಬ್ಯಾಸ್ಟನ್‌ನಲ್ಲಿ ಈತನಕ ನಡೆದಿರುವ ಎಲ್ಲ ಮೂರು ಪಂದ್ಯಗಳಿಗೆ ಮಳೆ ಅಡ್ಡಿಯಾಗಿದೆ. ಇದೇ ಮೈದಾನದಲ್ಲಿ ಆಸ್ಟ್ರೇಲಿಯ-ನ್ಯೂಝಿಲೆಂಡ್ ಪಂದ್ಯ ಮಳೆಗಾಹುತಿಯಾದರೆ, ಭಾರತ ಹಾಗೂ ಪಾಕಿಸ್ತಾನ, ದಕ್ಷಿಣ ಆಫ್ರಿಕ-ಪಾಕಿಸ್ತಾನ ಪಂದ್ಯಗಳಿಗೆ ಮಳೆ ಅಡ್ಡಿಯಾದ ಕಾರಣ ಡಿಎಲ್ ನಿಯಮದಂತೆ ಫಲಿತಾಂಶ ನಿರ್ಧಾರವಾಗಿತ್ತು.

ಮಳೆಬಾಧಿತ ಪಂದ್ಯಗಳಲ್ಲಿ ಆಸೀಸ್‌ನ ಬ್ಯಾಟ್ಸ್‌ಮನ್‌ಗಳಿಗೆ ಕ್ರೀಸ್‌ನಲ್ಲಿ ಹೆಚ್ಚು ಸಮಯ ಕಳೆಯಲು ಸಾಧ್ಯವಾಗಿಲ್ಲ. ಇದೀಗ ಸಮತೋಲಿತ ಇಂಗ್ಲೆಂಡ್ ಬೌಲಿಂಗ್ ದಾಳಿಯನ್ನು ಎದುರಿಸಬೇಕಾಗಿದೆ. ಆಸೀಸ್‌ನ ಅಗ್ರ ಕ್ರಮಾಂಕದಲ್ಲಿ ಡೇವಿಡ್ ವಾರ್ನರ್, ಆ್ಯರೊನ್ ಫಿಂಚ್ ಹಾಗೂ ಸ್ಟೀವನ್ ಸ್ಮಿತ್ ಅವರಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಮ್ಯಾಚ್ ಪ್ರಾಕ್ಟೀಸ್‌ನ ಕೊರತೆ ಎದುರಿಸುತ್ತಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಕಳೆದ ಪಂದ್ಯದಲ್ಲಿ ಆಸೀಸ್‌ನ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದ್ದು, ಬಾಂಗ್ಲಾವನ್ನು 182 ರನ್‌ಗೆ ನಿಯಂತ್ರಿಸಿದ್ದರು. ಆದರೆ, ಭಾರೀ ಮಳೆಯಿಂದಾಗಿ ಈ ಪಂದ್ಯದಲ್ಲಿ ಫಲಿತಾಂಶ ಬರಲಿಲ್ಲ.

ಆಸೀಸ್‌ನ ಪ್ರಮುಖ ಬೌಲರ್ ಮಿಚೆಲ್ ಸ್ಟಾರ್ಕ್ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದರೆ, ಜೋಶ್ ಹೇಝಲ್‌ವುಡ್ ಹಾಗೂ ಪ್ಯಾಟ್ ಕಮಿನ್ಸ್ ಅವರು ಸ್ಟಾರ್ಕ್‌ಗೆ ಉತ್ತಮ ಸಾಥ್ ನೀಡಿದ್ದರು. 4 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಪಡೆದ ಲೆಗ್-ಸ್ಪಿನ್ನರ್ ಆಡಮ್ ಝಾಂಪ ಗಮನಾರ್ಹ ಪ್ರದರ್ಶನ ನೀಡಿದ್ದರು.

 ಮತ್ತೊಂದೆಡೆ ಇಂಗ್ಲೆಂಡ್ ತಂಡ ಕಳೆದೆರಡು ಪಂದ್ಯಗಳಲ್ಲಿ 300ಕ್ಕೂ ಅಧಿಕ ರನ್ ಗಳಿಸಿತ್ತು. ಕಿವೀಸ್ ವಿರುದ್ಧ ಆರಂಭಿಕ ಆಟಗಾರ ಅಲೆಕ್ಸ್ ಹೇಲ್ಸ್ ಅರ್ಧಶತಕ ಬಾರಿಸಿದ್ದರು. ಬಾಂಗ್ಲಾ ವಿರುದ್ಧ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಜೇಯ 133 ರನ್ ಗಳಿಸಿದ್ದ ಜೋ ರೂಟ್ ಕಿವೀಸ್ ವಿರುದ್ಧ ಅರ್ಧಶತಕ ಬಾರಿಸಿದ್ದರು.

ಪಂದ್ಯದ ಸಮಯ: ಮಧ್ಯಾಹ್ನ 3:00

share
ವಾರ್ತಾಭಾರತಿ
ವಾರ್ತಾಭಾರತಿ
Next Story
X