Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಾಂಗ್ಲಾದೇಶಕ್ಕೆ ರೋಚಕ ಗೆಲುವು

ಬಾಂಗ್ಲಾದೇಶಕ್ಕೆ ರೋಚಕ ಗೆಲುವು

ಹಸನ್-ಮಹಮ್ಮದುಲ್ಲಾ ದಾಖಲೆ ಜೊತೆಯಾಟ

ವಾರ್ತಾಭಾರತಿವಾರ್ತಾಭಾರತಿ9 Jun 2017 11:54 PM IST
share
ಬಾಂಗ್ಲಾದೇಶಕ್ಕೆ ರೋಚಕ ಗೆಲುವು

 ಕಾರ್ಡಿಫ್, ಜೂ.9: ಸ್ಟಾರ್ ಆಲ್‌ರೌಂಡರ್ ಶಾಕಿಬ್ ಅಲ್ ಹಸನ್ ಹಾಗೂ ಮಹಮ್ಮದುಲ್ಲಾ ದಾಖಲೆ ಜೊತೆಯಾಟದ ನೆರವಿನಿಂದ ಬಾಂಗ್ಲಾದೇಶ ತಂಡ ನ್ಯೂಝಿಲೆಂಡ್ ವಿರುದ್ಧದ ಚಾಂಪಿಯನ್ಸ್ ಟ್ರೋಫಿಯ ‘ಎ’ ಗುಂಪಿನ ಪಂದ್ಯದಲ್ಲಿ 5 ವಿಕೆಟ್‌ಗಳ ಅಂತರದಿಂದ ರೋಚಕ ಗೆಲುವು ಸಾಧಿಸಿದೆ.

ಶುಕ್ರವಾರ ಇಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 266 ರನ್ ಗುರಿ ಪಡೆದ ಬಾಂಗ್ಲಾದೇಶ ತಂಡ ಶಾಕಿಬ್ ಹಾಗೂ ಮಹಮ್ಮದುಲ್ಲಾ ಶತಕದ ನೆರವಿನಿಂದ 47.2 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 268 ರನ್ ಗಳಿಸಿತು.

 ಮಹಮ್ಮದುಲ್ಲಾ ಅಜೇಯ ಶತಕ(102, 107 ಎಸೆತ, 8 ಬೌಂಡರಿ, 2 ಸಿಕ್ಸರ್) ಸಿಡಿಸಿದರು. ಕಿವೀಸ್ ವೇಗದ ಬೌಲರ್ ಟಿಮ್ ಸೌಥಿ(3-45) ದಾಳಿಗೆ ಸಿಲುಕಿದ ಬಾಂಗ್ಲಾ ತಂಡ ಒಂದು ಹಂತದಲ್ಲಿ 33 ರನ್‌ಗೆ 4 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ತಂಡದ ರಕ್ಷಣೆಗೆ ನಿಂತ ಹಸನ್ ಹಾಗೂ ಮಹಮ್ಮದುಲ್ಲಾ ಕಿವೀಸ್ ಬೌಲರ್‌ಗಳನ್ನು ಚೆನ್ನಾಗಿ ದಂಡಿಸಿದರು. 5ನೆ ವಿಕೆಟ್ ಜೊತೆಯಾಟದಲ್ಲಿ 224 ರನ್ ಸೇರಿಸಿ ಬಾಂಗ್ಲಾವನ್ನು ಗೆಲುವಿನತ್ತ ಮುನ್ನಡೆಸಿದರು. ಹಸನ್ ಹಾಗೂ ಮಹಮ್ಮದುಲ್ಲಾ ಬಾಂಗ್ಲಾದೇಶದ ಪರ ಎಲ್ಲ ವಿಕೆಟ್‌ನಲ್ಲಿ ಗರಿಷ್ಠ ಜೊತೆಯಾಟ ನಡೆಸಿ ಹೊಸ ದಾಖಲೆ ನಿರ್ಮಿಸಿದರು.

115 ಎಸೆತಗಳಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್‌ಗಳ ಸಹಿತ 114 ರನ್ ಗಳಿಸಿದ ಹಸನ್ ಬೌಲ್ಟ್‌ಗೆ ಕ್ಲೀನ್ ಬೌಲ್ಡಾದರು. ಹಸನ್ ಔಟಾದಾಗ ಬಾಂಗ್ಲಾದ ಗೆಲುವಿನ ಹೊಸ್ತಿಲಲ್ಲಿತ್ತು. ಮಹಮ್ಮದುಲ್ಲಾ ಹಾಗೂ ಮೊಸಾಡೆಕ್ 16 ಎಸೆತಗಳು ಬಾಕಿ ಇರುವಾಗಲೇ ತಂಡಕ್ಕೆ ಗೆಲುವು ತಂದರು.

ಕಿವೀಸ್ 265/8:ಟೇಲರ್-ವಿಲಿಯಮ್ಸನ್ ಅರ್ಧಶತಕ

 ರಾಸ್ ಟೇಲರ್(63) ಹಾಗೂ ನಾಯಕ ಕೇನ್ ವಿಲಿಯಮ್ಸನ್(57) ಆಕರ್ಷಕ ಅರ್ಧಶತಕದ ನೆರವಿನಿಂದ ನ್ಯೂಝಿಲೆಂಡ್ ತಂಡ ಬಾಂಗ್ಲಾದೇಶ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 265 ರನ್ ಕಲೆ ಹಾಕಿದೆ.

ಇಲ್ಲಿನ ಸೋಫಿಯಾ ಗಾರ್ಡನ್ಸ್‌ನಲ್ಲಿ ಶುಕ್ರವಾರ ಚಾಂಪಿಯನ್ಸ್ ಟ್ರೋಫಿಯ ಎ ಗುಂಪಿನ ಪಂದ್ಯದಲ್ಲಿ ಟಾಸ್ ಜಯಿಸಿದ ನ್ಯೂಝಿಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.

ಮೊದಲ ವಿಕೆಟ್‌ನಲ್ಲಿ 46 ರನ್ ಸೇರಿಸಿದ ಮಾರ್ಟಿನ್ ಗಪ್ಟಿಲ್(33) ಹಾಗೂ ಲೂಕ್ ರಾಂಚಿ(16) ಸಾಧಾರಣ ಆರಂಭ ನೀಡಿದರು.

ಆರಂಭಿಕ ಆಟಗಾರರಾದ ರಾಂಚಿ ಹಾಗೂ ಗಪ್ಟಿಲ್ ಔಟಾದ ಬಳಿಕ ಜೊತೆಯಾದ ನಾಯಕ ಕೇನ್ ವಿಲಿಯಮ್ಸನ್(57 ರನ್, 69 ಎಸೆತ, 5 ಬೌಂಡರಿ) ಹಾಗೂ ರಾಸ್ ಟೇಲರ್(63, 82 ಎಸೆತ, 6 ಬೌಂಡರಿ) 3ನೆ ವಿಕೆಟ್‌ಗೆ 83 ರನ್ ಜೊತೆಯಾಟ ನಡೆಸಿ ತಂಡಕ್ಕೆ ಆಸರೆಯಾದರು.

57 ರನ್ ಗಳಿಸಿದ್ದಾಗ ವಿಲಿಯಮ್ಸನ್ ರನೌಟಾಗುವುದರೊಂದಿಗೆ ಈ ಜೋಡಿ ಬೇರ್ಪಟ್ಟಿತು. ವಿಲಿಯಮ್ಸನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಸತತ ನಾಲ್ಕನೆ ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡರು. ವಿಲಿಯಮ್ಸನ್ ಕಳೆದ 3 ಇನಿಂಗ್ಸ್‌ಗಳಲ್ಲಿ 67, 100 ಹಾಗೂ 87 ರನ್ ಗಳಿಸಿದ್ದರು. ವಿಲಿಯಮ್ಸನ್ ರನೌಟಾದ ಬಳಿಕ ಟೇಲರ್ ಹಾಗೂ ಬ್ರೂಮ್(36) ನಾಲ್ಕನೆ ವಿಕೆಟ್‌ಗೆ 49 ರನ್ ಜೊತೆಯಾಟ ನಡೆಸಿ ತಂಡದ ಸ್ಕೋರನ್ನು 228ಕ್ಕೆ ತಲುಪಿಸಿದರು. ತಂಡದ ಪರ ಸರ್ವಾಧಿಕ ರನ್ ಗಳಿಸಿದ ಟೇಲರ್ ತಸ್ಕಿನ್ ಅಹ್ಮದ್‌ಗೆ ವಿಕೆಟ್ ಒಪ್ಪಿಸಿದರು.

ನ್ಯೂಝಿಲೆಂಡ್ ಕೊನೆಯ 10 ಓವರ್‌ಗಳಲ್ಲಿ ಕೇವಲ 62 ರನ್ ಗಳಿಸಿತು. ಸ್ಯಾಂಟ್ನರ್(14) ಹಾಗೂ ಸೌಥಿ(10) ಔಟಾಗದೆ ಉಳಿದರು.

ಬಾಂಗ್ಲಾದೇಶದ ಪರ ಮೊಸಾಡೆಕ್ ಹುಸೈನ್(3-13)ಯಶಸ್ವಿ ಬೌಲರ್ ಎನಿಸಿಕೊಂಡರು. ತಸ್ಕಿನ್ ಅಹ್ಮದ್(2-43) 2 ವಿಕೆಟ್ ಪಡೆದರು.

ಸಂಕ್ಷಿಪ್ತ ಸ್ಕೋರ್

ನ್ಯೂಝಿಲೆಂಡ್: 50 ಓವರ್‌ಗಳಲ್ಲಿ 265/8

(ರಾಸ್ ಟೇಲರ್ 63, ವಿಲಿಯಮ್ಸನ್ 57, ಬ್ರೂಮ್ 36, ಗಪ್ಟಿಲ್ 33, ಹುಸೈನ್ 3-13)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X