Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚರಂಡಿ ಬ್ಲಾಕ್: ರಸ್ತೆಯಲ್ಲಿ...

ಚರಂಡಿ ಬ್ಲಾಕ್: ರಸ್ತೆಯಲ್ಲಿ ಹರಿಯುತ್ತಿರುವ ನೀರು

ಮುಂಗಾರಿಗೆ ಬಸವಳಿದ ಬಂಟ್ವಾಳ

ವಾರ್ತಾಭಾರತಿವಾರ್ತಾಭಾರತಿ10 Jun 2017 2:57 PM IST
share
ಚರಂಡಿ ಬ್ಲಾಕ್: ರಸ್ತೆಯಲ್ಲಿ ಹರಿಯುತ್ತಿರುವ ನೀರು

 ಬಂಟ್ವಾಳ, ಜೂ.10: ವಿವಿಧ ಕಾಮಗಾರಿಗಳಿಂದ ಚರಂಡಿಗಳು ಮುಚ್ಚಿರುವುದು ಹಾಗೂ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಶುಕ್ರವಾರ ರಾತ್ರಿಯಿಂದ ಸುರಿದ ಭಾರೀ ಮಳೆಗೆ ಬಿ.ಸಿ.ರೋಡ್ ಪರಿಸರ ಸಂಪೂರ್ಣವಾಗಿ ಬಸವಳಿದಿದೆ.

ಬಂಟ್ವಾಳ ತಾಲೂಕಿನಾದ್ಯಂತ ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗ್ಗಿನವರೆಗೆ ಭಾರೀ ಮಳೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್, ಕೈಕಂಬ, ಪಾಣೆಮಂಗಳೂರು ಪ್ರದೇಶದಲ್ಲಿ ಚರಂಡಿಯಲ್ಲಿ ಮಳೆ ನೀರು ಹರಿಯದೆ ಪಾದಾಚಾರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ತೀವ್ರ ಅಡಚನೆಯಾಗಿದೆ.

ಕೈಕಂಬ: ಕೆಲವು ತಿಂಗಳ ಹಿಂದೆ ಬಸ್‌ಬೇ ನಿರ್ಮಾಣಕ್ಕೆಂದು ಕೈಕಂಬ ರಸ್ತೆ ಬದಿಯಲ್ಲಿ ಅಗೆದಿರುವ ಮಣ್ಣನ್ನು ಇಲ್ಲಿನ ಚರಂಡಿಯ ಮೇಲೆ ರಾಶಿ ಹಾಕಲಾಗಿತ್ತು. ಅಲ್ಲದೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೈಪ್‌ಲೈನ್ ಅಳವಡಿಕೆಯ ಸಂದರ್ಭದಲ್ಲಿ ಅಗೆದು ಸಡಿಲಗೊಂಡಿರುವ ಮಣ್ಣು ಕರಗಿ ಚರಂಡಿಗಳಲ್ಲಿ ತುಂಬಿಕೊಂಡಿದೆ. ಕೆಲವು ದಿನಗಳಲ್ಲಿ ಸಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದರೂ ನೀರು ಇಂಗುತ್ತಿರುವುದರಿಂದ ಯಾವುದೇ ಸಮಸ್ಯೆ ಸೃಷ್ಟಿಯಾಗಿರಲಿಲ್ಲ. ಶುಕ್ರವಾರ ರಾತ್ರಿಯಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ಕೈಕಂಬ ಪ್ರದೇಶದಲ್ಲಿ ಮಳೆ ನೀರು ಹರಿಯಲಾಗದೆ ರಸ್ತೆಯಲ್ಲೇ ಕೊಳದ ಮಾದರಿಯಲ್ಲಿ ತುಂಬಿದ್ದು, ಕೃತಕ ನೆರೆ ಉಂಟಾಗಿದೆ.

ಕೈಕಂಬ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊಣಕಾಲಿನವರೆಗೆ ನೀರು ನಿಂತಿರುವ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ಅಡಚನೆ ಉಂಟಾಗಿದೆ. ಇತರ ವಾಹನಗಳು ನಿಧಾನವಾಗಿ ಸಂಚಾರಿಸಿದರೆ ದ್ವಿಚಕ್ರ ವಾಹನ ಸವಾರರು ನೀರು ದಾಟಲು ಸಂಕಷ್ಟಪಡುತ್ತಿರುವ ದೃಶ್ಯ ಬೆಳಗ್ಗೆಯಿಂದ ಕಂಡುಬರುತ್ತಿದೆ. ಹಾಗೆಯೇ ರಸ್ತೆ ತುಂಬಾ ನೀರು ನಿಂತಿರುವುದರಿಂದ ಪಾದಚಾರಿಗಳಿಗೆ ನಡೆದಾಡಲು ಜಾಗವೇ ಇಲ್ಲವಾಗಿದ್ದು, ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬಿ.ಸಿ.ರೋಡ್: ಬಿ.ಸಿ.ರೋಡ್ ಬಿಎಸ್ಸೆನ್ನೆಲ್ ಕಚೇರಿಯ ಎದುರು ಯಾವುದೋ ಕಾಮಗಾರಿಗಾಗಿ ಅಗೆದಿರುವ ಬೃಹತ್ ಹೊಂಡವನ್ನು ಮುಚ್ಚದೆ ಹಾಗೆಯೇ ಬಿಡಲಾಗಿದೆ. ಹೊಂಡದಲ್ಲಿ ಮಳೆ ನೀರು ತುಂಬಿದ್ದು, ಇದೇ ಜಾಗದಲ್ಲಿ ಪಾದಾಚಾರಿಗಳು ನಡೆದಾಡುತ್ತಿದ್ದಾರೆ. ಅಲ್ಲದೆ ಹೊಂಡದ ಪಕ್ಕದಲ್ಲೇ ಬಸ್‌ಗಳು ಪ್ರಯಾಣಿಕರನ್ನು ಹತ್ತಿಸುವುದು, ಇಳಿಸುವುದರಿಂದ ಸಾರ್ವಜನಿಕರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ಬಿ.ಸಿ.ರೋಡ್ ಸರ್ವೀಸ್ ರಸ್ತೆಯಲ್ಲಿ ಚರಂಡಿ ನಿರ್ಮಾಣದ ಕಾಮಗಾರಿ ಆರಂಭಿಸಿ ಹಲವು ತಿಂಗಳು ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರ ನಡುವೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಕುಡಿಯುವ ನೀರು ಯೋಜನೆಯ ಪೈಪ್ ಅಳವಡಿಕೆ, ಬಿಎಸ್ಸೆನ್ನೆಲ್ ಸಂಸ್ಥೆಯ ಕೇಬಲ್ ಅಳವಡಿಕೆ ಕಾಮಗಾರಿಯಿಂದ ಮೊದಲೇ ಹದೆಗೆಟ್ಟಿದ್ದ ಬಿ.ಸಿ.ರೋಡ್ ಸರ್ವೀಸ್ ರಸ್ತೆ ಇದೀಗ ಸಂಪೂರ್ಣವಾಗಿ ಹದೆಗೆಟ್ಟಿದೆ. ಸರ್ವೀಸ್ ರಸ್ತೆಯಲ್ಲಿ ಬೃಹತ್ ಹೊಂಡಗಳಾಗಿದ್ದು, ಕೆಸರು ನೀರು ತುಂಬಿಕೊಂಡಿದೆ. ವಾಹನಗಳ ಸುಗಮ ಸಂಚಾರಕ್ಕೆ ತೊಡಕುಂಟಾಗಿದ್ದು ಆಗಾಗ ಟ್ರಾಫಿಕ್ ಜಾಮ್ ಸಂಭವಿಸುತ್ತಿದೆ.

ಸರ್ವೀಸ್ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ರಾಜ ರಸ್ತೆ ಸೇರಿ ಇಡೀ ಬಿ.ಸಿ.ರೋಡ್ ಪಾದಾಚಾರಿಗಳಿಗೆ ನಡೆದಾಡಲು ಅಯೋಗ್ಯವಾಗಿದೆ. ಒಂದೆಡೆ ವಾಹನಗಳ ದಟ್ಟನೆ, ಇನ್ನೊಂದೆಡೆ ಕೆಸರಿನ ಸಿಂಚನ ಸಾರ್ವಜನಿಕರನ್ನು ಕಂಗೆಡಿಸಿದೆ. ಮಗದೊಂದೆಡೆ ಮೇಲ್ಸೇತುವೆಯಲ್ಲಿ ತುಂಬಿರುವ ಮಳೆ ನೀರು ವಾಹನಗಳ ಸಂಚಾರದ ವೇಳೆ ಸೇತುವೆಯ ಕೆಳಗೆ ನಡೆದುಕೊಂಡು ಹೋಗುವವರ ಮೇಲೆ ಸಿಂಚನಗೊಂಡು ಒದ್ದೆ ಮಾಡುತ್ತಿದೆ. ಹಲವು ವರ್ಷದ ಮಳೆಗಾಲವನ್ನು ಸಮಸ್ಯೆಗಳ ನಡುವೆಯೇ ಕಳೆದ ಬಿ.ಸಿ.ರೋಡಿನ ಪರಿಸ್ಥಿತಿ ಈ ವರ್ಷ ಭಿನ್ನವಾಗಿದೆ.

ಪಾಣೆಮಂಗಳೂರು: ಪಾಣೆಮಂಗಳೂರು ಕಲ್ಲುರ್ಟಿ ದೇವಸ್ಥಾನದ ಎದುರು ಬಸ್‌ಬೇ ಮತ್ತು ರಸ್ತೆ ಅಗಲೀಕರಣಕ್ಕಾಗಿ ಅಗೆದು ಹಾಕಲಾಗಿದೆಯಾದರೂ ಈವರೆಗೆ ಚರಂಡಿ ನಿರ್ಮಾಣವಾಗಿಲ್ಲ. ಹೀಗಾಗಿ ಇಲ್ಲಿಯೂ ರಾಷ್ಟ್ರೀಯ ಹೆದ್ದಾರಿಯಲ್ಲಿಯೆ ಮಳೆ ನೀರು ಹರಿಯುವುದರಿಂದ ಸಂಚಾರಕ್ಕೆ ತೊಡಕಾಗಿದ್ದು ಸಾರ್ವಜನಿಕರಿಗೂ ತೊಂದರೆಯಾಗಿ ಪರಿಣಮಿಸಿದೆ.

ಕಾಮಾಜೆ: ಸಮಗ್ರ ಕುಡಿಯುವ ನೀರಿನ ಯೋಜನೆಯ ಪೈಪ್‌ಲೈನ್ ಅಳವಡಿಕೆ ಕಾಮಗಾರಿಯಿಂದ ಕಾಮಾಜೆ ರಸ್ತೆಯ ವಿವಿಧೆಡೆ ಸಂಪೂರ್ಣ ಕೆಸರುಮಯವಾಗಿದೆ. ಕೆಲವು ಕಡೆಗಳಲ್ಲಿ ಡಾಂಬರು ಸಂಪೂರ್ಣ ಕಿತ್ತುಹೋಗಿದ್ದು, ವಾಹನ ಸಂಚಾರದೊಂದಿಗೆ ನಡೆದಾಡುವುದು ದುಸ್ಥರವಾಗಿ ಮಾರ್ಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X