Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವರ್ಷದೊಳಗೆ ಹೂಳೆತ್ತುವ ಕಾರ್ಯಕ್ಕೆ...

ವರ್ಷದೊಳಗೆ ಹೂಳೆತ್ತುವ ಕಾರ್ಯಕ್ಕೆ ಯೋಜನೆ: ಸಚಿವ ಪ್ರಮೋದ್

​ಬಜೆಯಲ್ಲಿ ನೀರಿನ ಮಟ್ಟ 7ಮೀಟರ್ ಏರಿಕೆ

ವಾರ್ತಾಭಾರತಿವಾರ್ತಾಭಾರತಿ11 Jun 2017 6:33 PM IST
share

ಉಡುಪಿ, ಜೂ.11: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಡುಪಿ ನಗರಕ್ಕೆ ನೀರು ಉಣಿಸುವ ಹಿರಿಯಡ್ಕ ಬಜೆ ಅಣೆ ಕಟ್ಟಿನಲ್ಲಿ ನೀರಿನ ಮಟ್ಟ 7 ಮೀಟರ್‌ಗೆ ಏರಿಕೆಯಾಗಿದೆ. ಒಂದು ವರ್ಷದೊಳಗೆ ಸ್ವರ್ಣ ನದಿಯ ಹೂಳೆತ್ತುವ ಕಾರ್ಯಕ್ಕೆ ಯೋಜನೆ ರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಆರ್ ಝೆಡ್ ಹಾಗೂ ನಾನ್ ಸಿಆರ್‌ಝೆಡ್‌ನಲ್ಲಿ ಮರಳುಗಾರಿಕೆ ನಡೆಸುವುದಕ್ಕೆ ಸಂಬಂಧಿಸಿದ ಕಾನೂನುಗಳಿಂದಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸ್ವರ್ಣ ನದಿಯಲ್ಲಿ ಹೂಳೆತ್ತುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಆದುದರಿಂದ ಹೂಳು ತೆಗೆಯುವ ಕಾರ್ಯಕ್ಕೆ ತೊಂದರೆಯಾಗಿದೆ ಎಂದರು.

ಈ ಬಾರಿ ಮಳೆಗಾಲದಲ್ಲಿ ಎಲ್ಲ ವ್ಯವಸ್ಥೆ ಮಾಡಿ ನೀರಿನ ಮಟ್ಟ ಕಡಿಮೆ ಇರುವಾಗ ಡ್ರಜ್ಜಿಂಗ್ ಯಂತ್ರದ ಮೂಲಕ ಹೂಳೆತ್ತುವ ಬಗ್ಗೆ ಪರಿಶೀಲಿಸ ಲಾಗುವುದು. ಈ ಸಂಬಂಧ ಮೀನುಗಾರಿಕೆ ಇಲಾಖೆಯ ಹಾಗೂ ಮಲ್ಪೆ ಡೆಬ್ಮಾ ಕಂಪೆನಿಯ ಪರಿಣತರ ತಂಡವನ್ನು ಕರೆಸಿ ಒಂದು ವರ್ಷದೊಳಗೆ ಹೂಳು ತೆಗೆಯುವ ಯೋಜನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಇಲ್ಲಿ ಮುಖ್ಯವಾಗಿರುವ ಸಮಸ್ಯೆ ತೆಗೆದ ಹೂಳನ್ನು ವಿಲೇವಾರಿ ಮಾಡು ವುದು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪಾರದರ್ಶಕವಾಗಿ ಏಲಂ ಮಾಡುವಂತೆ ನಿರ್ದೇಶನ ನೀಡಲಾಗಿದೆ. ಆದರೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಇದಕ್ಕೆ ಅಡ್ಡಗಾಲು ಇಡುತ್ತಿದ್ದಾರೆ. ಆದುದರಿಂದ ಜಿಲ್ಲಾಧಿಕಾರಿಗಳು ಈ ಕಾರ್ಯಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

ರಘುಪತಿ ಭಟ್ ದ್ವಿಮುಖ ನೀತಿ: ಬಾರ್‌ಗಳ ರಕ್ಷಣೆಗಾಗಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ನಗರ ರಸ್ತೆಗಳನ್ನಾಗಿ ಮಾರ್ಪಡಿಸುವ ಕುರಿತ ಸಚಿವ ಸಂಪುಟದ ತೀರ್ಮಾನದಿಂದ ನಗರಸಭೆಗಳ ಅಭಿವೃದ್ಧಿಗೆ ಹೊಡೆತ ಬೀಳಲಿದೆ ಎಂಬ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಹೇಳಿಕೆಗೆ ಪ್ರತಿ ಕ್ರಿಯಿಸಿದ ಸಚಿವರು, ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನಕ್ಕೆ ನಾನು ವಿರೋಧ ಮಾಡಲು ಆಗುವುದಿಲ್ಲ. ಹಾಗಾಗಿ ರಘುಪತಿ ಭಟ್ ಅವರು ತಮ್ಮದೇ ಸರಕಾರ ಇರುವ ಕೇಂದ್ರಕ್ಕೆ ಈ ಪ್ರಸ್ತಾವನೆಯನ್ನು ತಿರಸ್ಕರಿಸುವಂತೆ ಹೇಳುವುದು ಉತ್ತಮ ಎಂದರು.

ಈ ಹಿಂದೆ ಮಲ್ಪೆ- ತೀರ್ಥಹಳ್ಳಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಮಾಡು ವಾಗಲೂ ವಿರೋಧ ವ್ಯಕ್ತಪಡಿಸಿದ್ದ ರಘುಪತಿ ಭಟ್, ಈಗ ಅದನ್ನು ಕೈಬಿಡು ವಾಗಲೂ ವಿರೋಧ ಮಾಡುತ್ತಿದ್ದಾರೆ. ಇದು ಅವರ ದ್ವಿಮುಖ ನೀತಿಯನ್ನು ತೋರಿಸುತ್ತದೆ ಎಂದು ಅವರು ಕಟುವಾಗಿ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X