Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿರುವ ನಕಲಿ ಪಾನ್ ಕಾರ್ಡ್ ಗಳು...

ದೇಶದಲ್ಲಿರುವ ನಕಲಿ ಪಾನ್ ಕಾರ್ಡ್ ಗಳು ಎಷ್ಟು ಗೊತ್ತೇ?

ಆರ್ಥಿಕತೆಯ ಹಾನಿಯಲ್ಲಿ ಸಣ್ಣಪ್ರಮಾಣ ಎಂದು ಪರಿಗಣಿಸಲಾಗದು: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ11 Jun 2017 7:39 PM IST
share
ದೇಶದಲ್ಲಿರುವ ನಕಲಿ ಪಾನ್ ಕಾರ್ಡ್ ಗಳು ಎಷ್ಟು ಗೊತ್ತೇ?

ನವದೆಹಲಿ: ಆದಾಯ ತೆರಿಗೆ ದಾಖಲೆಗಳ ಪೈಕಿ ಶೇ. 0.4ರಷ್ಟಿರುವ ಸುಮಾರು 10.52 ಲಕ್ಷ ವೈಯಕ್ತಿಕ ತೆರಿಗೆದಾರರ ನಕಲಿ ಪಾನ್ ಕಾರ್ಡ್‌ಗಳನ್ನು ದೇಶದ ಆರ್ಥಿಕತೆಯ ಹಾನಿಯಲ್ಲಿ ಸಣ್ಣ ಪ್ರಮಾಣ ಎಂದು ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದಾಖಲೆಗಳ ಪೈಕಿ 11.35 ಲಕ್ಷ ನಕಲಿ ಅಥವಾ ವಂಚಕ ಶಾಶ್ವತ ಖಾತೆ ಸಂಖ್ಯೆಗಳು ಕಂಡು ಬಂದಿದ್ದು, ಅವುಗಳಲ್ಲಿ 10.52 ಲಕ್ಷ ಶಾಶ್ವತ ಖಾತೆ ಸಂಖ್ಯೆಗಳು ವೈಯಕ್ತಿಕ ತೆರಿಗೆದಾರರಿಗೆ ಸಂಬಂಧಿಸಿವೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.

ಪಾನ್ ಕಾರ್ಡ್ ಪಡೆಯಲು ಹಾಗೂ ಆದಾಯ ತೆರಿಗೆ ಪಾವತಿಯನ್ನು ಮಾಡಲು ಆಧಾರ್ ಕಾರ್ಡ್ ಕಡ್ಡಾಯ ಮಾಡಿರುವ 139AA ವಿಧಿಯನ್ನು ಎತ್ತಿಹಿಡಿಯುವ ಮುನ್ನ ಮೇಲಿನ ಅಂಶವನ್ನು ಸುಪ್ರೀಂ ಕೋರ್ಟ್ ಪರಿಗಣನೆಗೆ ತೆಗೆದುಕೊಂಡಿದೆ.

ಆ ಮೂಲಕ, ಶಾಶ್ವತ ಖಾತೆಗಳ ಸಂಖ್ಯೆಯ ಪೈಕಿ ಶೇ. 0.4ರಷ್ಟು ಮಂದಿ ಮಾತ್ರ ನಕಲಿ ಪಾನ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಹೀಗಾಗಿ ಇಂತಹ ವಿಧಿಯ ಅವಶ್ಯತೆಯಿಲ್ಲಎಂಬ ಅರ್ಜಿದಾರರ ವಾದವನ್ನು ನ್ಯಾ. ಎ.ಕೆ.ಸಿಕ್ರಿ ನೇತೃತ್ವದ ನ್ಯಾಯಪೀಠ ಶುಕ್ರವಾರ ತಳ್ಳಿ ಹಾಕಿದೆ.

ನಾವು ಶೇಕಡಾವಾರು ಅಂಕಿ-ಅಂಶಗಳ ಮೇಲೆ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ನಕಲಿ ಪಾನ್ ಕಾರ್ಡ್‌ಗಳ ಸಂಖ್ಯೆ ಒಟ್ಟಾರೆಯಾಗಿ 10.52 ಲಕ್ಷವಿದ್ದು, ಯಾವುದೇ ಕಾರಣಕ್ಕೂ ಅವನ್ನೂ ದೇಶದ ಆರ್ಥಿಕತೆಗೆ ಹಾನಿ ಮಾಡದ ಹಾಗೂ ಪ್ರತಿಕೂಲ ಪರಿಣಾಮ ಬೀರದ ಸಂಖ್ಯೆ ಎಂದು ಪರಿಗಣಿಸಲಾಗದು ಎಂದು ನ್ಯಾಯಪೀಠದ ಮತ್ತೊಬ್ಬ ನ್ಯಾ. ಅಶೋಕ್ ಭೂಷಣ್ ಅಭಿಪ್ರಾಯಪಟ್ಟರು.

ಇದಕ್ಕೂ ಮುನ್ನ ನಕಲಿ ಪಾನ್ ಕಾರ್ಡ್‌ಗಳನ್ನು ನಕಲಿ ಕಂಪನಿಗಳಿಗೆ ನಿಧಿ ವರ್ಗಾಯಿಸಲು ಬಳಸಿಕೊಳ್ಳಲಾಗುತ್ತಿದೆ ಎಂದು ಮುಂಗಡವಾಗಿ ಆಕ್ಷೇಪಣೆ ಸಲ್ಲಿಸಿದ್ದ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವಾಸ್ತವವಾಗಿ ಕಂಪನಿಗಳು ಕೇವಲ ಒಬ್ಬ ವ್ಯಕ್ತಿಯಿಂದ ಸ್ಥಾಪಿಸಲ್ಪಟ್ಟಿರುತ್ತವೆ ಮತ್ತು ಅಂತಹ ವೈಯಕ್ತಿಕ ವ್ಯಕ್ತಿಗಳು ತಮ್ಮ ಪರಿಚಯಕ್ಕಾಗಿ ದಾಖಲೆಗಳನ್ನು ಒದಗಿಸಲೇಬೇಕಾಗುತ್ತದೆ ಎಂದು ಹೇಳಿತು.

ಕಪ್ಪು ಹಣ ಹಾಗೂ ಹಣದ ಕಳ್ಳಸಾಗಾಣಿಕೆಯನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಆದಾಯ ತೆರಿಗೆ ಪಾವತಿಗೆ ಆಧಾರ್ ಜೋಡಣೆಯ ಯೋಜನೆಯನ್ನು ಖಂಡಿಸಲು ಸಾಧ್ಯವಿಲ್ಲ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿತು.

ಆಳವಾಗಿ ಬೇರೂರಿರುವ ಇಂತಹ ಪಿಡುಗನ್ನು ಬಹುಕ್ರಮಗಳ ಮೂಲಕ ನಿಭಾಯಿಸಬೇಕಿದ್ದು, ಅವೆಲ್ಲವನ್ನೂ ಏಕಕಾಲಕ್ಕೂ ಪ್ರಾರಂಭಿಸಬಹುದು. ಇವುಗಳ ಒಟ್ಟು ಕ್ರಮಗಳ ಮೂಲಕ ಫಲಿತಾಂಶ ಪಡೆಯಬಹುದಾಗಿದ್ದು, ಪ್ರತ್ಯೇಕವಾಗಿ ವೈಯಕ್ತಿಕ ಕ್ರಮಗಳನ್ನು ಜರುಗಿಸುವುದು ಸಾಕಾಗುವುದಿಲ್ಲ ಎಂದೂ ಸುಪ್ರೀಂ ಕೋರ್ಟ್ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X