Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಹತ್ಯೆ ನಿಷೇಧದ ಬಗ್ಗೆ ವರದಿ ಸಲ್ಲಿಸಲು...

ಗೋಹತ್ಯೆ ನಿಷೇಧದ ಬಗ್ಗೆ ವರದಿ ಸಲ್ಲಿಸಲು ಇಂದಿರಾ ನೇಮಿಸಿದ್ದ ಸಮಿತಿ ವರದಿ ಸಲ್ಲಿಸಲೇ ಇಲ್ಲ ...!

ವಾರ್ತಾಭಾರತಿವಾರ್ತಾಭಾರತಿ11 Jun 2017 9:16 PM IST
share
ಗೋಹತ್ಯೆ ನಿಷೇಧದ ಬಗ್ಗೆ ವರದಿ ಸಲ್ಲಿಸಲು ಇಂದಿರಾ ನೇಮಿಸಿದ್ದ ಸಮಿತಿ ವರದಿ ಸಲ್ಲಿಸಲೇ ಇಲ್ಲ ...!

ಹೊಸದಿಲ್ಲಿ, ಜೂ.11: ಗೋಹತ್ಯೆ ವಿಷಯ ದೇಶದಲ್ಲಿ ಸುಮಾರು ಅರ್ಧ ಶತಮಾನದಿಂದಲೂ ವಿವಾದವಾಗಿಯೇ ಮುಂದುವರಿದಿದೆ. ಆದರೆ ಗೋಹತ್ಯೆ ನಿಷೇಧಿಸಬೇಕೇ ಎಂಬ ಬಗ್ಗೆ ವರದಿ ನೀಡಲು 1966ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ಸಮಿತಿಯೊಂದನ್ನು ನೇಮಿಸಿದ್ದರು. ಆರೆಸ್ಸೆಸ್ ಮುಖಂಡ ಎಂ.ಎಸ್.ಗೋಳ್ವಾಲ್ಕರ್, ಹಿಂದೂ ಮುಖಂಡ ಶಂಕರಾಚಾರ್ಯರು ಸಮಿತಿಯ ಸದಸ್ಯರಾಗಿದ್ದರು. ಆದರೆ 12 ವರ್ಷ ಕಳೆದರೂ ಈ ಸಮಿತಿ ವರದಿ ನೀಡಲೇ ಇಲ್ಲ..

  ಈ ಸ್ವಾರಸ್ಯಕರ ಅಂಶವನ್ನು ಬಿಚ್ಚಿಟ್ಟವರು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್. ಇಂದಿರಾ ಗಾಂಧಿ ಕುರಿತು ಜೈರಾಮ್ ರಮೇಶ್ ಬರೆದಿರುವ ಹೊಸ ಪುಸ್ತಕ- ‘ಇಂದಿರಾಗಾಂಧಿ: ಎ ಲೈಫ್ ಇನ್ ನೇಚರ್’ ಕೃತಿಯಲ್ಲಿ ಈ ಕುರಿತ ವಿವರಣೆಯಿದೆ.

 ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ 1966ರ ನವೆಂಬರ್ 7ರಂದು ಸಾಧುಗಳು ಸಂಸತ್ತಿಗೆ ‘ಮುತ್ತಿಗೆ’ ಹಾಕಿದ್ದ ಪ್ರಕರಣ ನಡೆದಿತ್ತು. ಇವರಲ್ಲಿ ಕೆಲವರು ಕೇಸರಿ ದಿರಿಸು ತೊಟ್ಟಿದ್ದರೆ, ಇನ್ನು ಕೆಲವರು ನಗ್ನರಾಗಿದ್ದರು. ಪ್ರತಿಭಟನೆ ಉಗ್ರರೂಪಕ್ಕೆ ತಿರುಗಿದಾಗ ಪೊಲೀಸರು ಗೋಲಿಬಾರ್ ನಡೆಸಿದ್ದು ಕೆಲವರು ಬಲಿಯಾಗಿದ್ದರು. ಘಟನೆಗೆ ಸಂಬಂಧಿಸಿ ಅಂದಿನ ಗೃಹ ಸಚಿವ ಗುಲ್ಜಾರಿಲಾಲ್ ನಂದ ರಾಜೀನಾಮೆ ನೀಡಬೇಕಾಯಿತು.

 ಜಾನುವಾರು ಹತ್ಯೆ ನಿಷೇಧದ ಬಗ್ಗೆ ಪರಿಶೀಲನೆ ನಡೆಸುವ ಉದ್ದೇಶದಿಂದ ಜೂನ್ 29ರಂದು ಇಂದಿರಾಗಾಂಧಿ ಉನ್ನತ ಮಟ್ಟದ ಸಮಿತಿಯೊಂದನ್ನು ನೇಮಿಸಿದ್ದರು. ಭಾರತದ ಮಾಜಿ ಪ್ರಧಾನ ನ್ಯಾಯಾಧೀಶ ಎ.ಕೆ.ಸರ್ಕಾರ್ ಸಮಿತಿಯ ಮುಖ್ಯಸ್ಥರಾಗಿದ್ದರು. ಡಾ.ವಿ.ಕುರಿಯನ್ ಮುಂತಾದ ಅನುಭವಿಗಳು ಸಮಿತಿಯಲ್ಲಿದ್ದರು.ಶಂಕರಾಚಾರ್ಯ, ಆರೆಸ್ಸೆಸ್ ಮುಖಂಡ ಎಂ.ಎಸ್.ಗೋಳ್ವಾಲ್ಕರ್ ಕೂಡಾ ಸಮಿತಿಯ ಸದಸ್ಯರಾಗಿದ್ದರು.

 ವರದಿ ಸಲ್ಲಿಸಲು ಆರು ತಿಂಗಳ ಕಾಲಾವಕಾಶ ನೀಡಲಾಗಿತ್ತು. 12 ವರ್ಷ ಕಳೆದರೂ ಸಭೆ ಸೇರಿ ಚರ್ಚೆ ನಡೆಸುವುದಕ್ಕಷ್ಟೇ ಸಮಿತಿಯ ಕಾರ್ಯ ಸೀಮಿತವಾಗಿತ್ತು. ಸಮಿತಿ ವರದಿ ಸಲ್ಲಿಸಲೇ ಇಲ್ಲ. ಬಳಿಕ 1979ರಲ್ಲಿ ಇಂದಿರಾಗಾಂಧಿಯವರ ಉತ್ತರಾಧಿಕಾರಿಯಾಗಿದ್ದ ಮೊರಾರ್ಜಿ ದೇಸಾಯಿ ಈ ಸಮಿತಿಯನ್ನು ಬರ್ಖಾಸ್ತುಗೊಳಿಸಿದರು ಎಂದು ಕೃತಿ ಬಿಡುಗಡೆ ಸಮಾರಂಭದಲ್ಲಿ ಜೈರಾಮ್ ರಮೇಶ್ ಹೇಳಿದರು.

 ಹೌದು, ಸಮಿತಿ ವರದಿ ಸಲ್ಲಿಸಲೇ ಇಲ್ಲ ಎಂದು ಸಮಾರಂಭದಲ್ಲಿ ಉಪಸ್ಥಿತರಿದ್ದ ರಾಜ್ಯಸಭಾ ಸದಸ್ಯ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಕರಣ್ ಸಿಂಗ್ ಪ್ರತಿಕ್ರಿಯಿಸಿದರು. ಕರಣ್ ಸಿಂಗ್ ಅವರು ಇಂದಿರಾಗಾಂಧಿ ಸಚಿವ ಸಂಪುಟದ ಸದಸ್ಯರಾಗಿದ್ದವರು. ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X