Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ಸೆಮಿಫೈನಲ್‌ಗೆ: ಸಂಘಟಿತ ದಾಳಿಗೆ...

ಭಾರತ ಸೆಮಿಫೈನಲ್‌ಗೆ: ಸಂಘಟಿತ ದಾಳಿಗೆ ದಕ್ಷಿಣ ಆಫ್ರಿಕ ತತ್ತರ

ವಾರ್ತಾಭಾರತಿವಾರ್ತಾಭಾರತಿ11 Jun 2017 9:34 PM IST
share
ಭಾರತ ಸೆಮಿಫೈನಲ್‌ಗೆ: ಸಂಘಟಿತ ದಾಳಿಗೆ ದಕ್ಷಿಣ ಆಫ್ರಿಕ ತತ್ತರ

ಲಂಡನ್, ಜೂ.11: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ‘ಬಿ’ ಗುಂಪಿನ ಮಹತ್ವದ ಪಂದ್ಯದಲ್ಲಿ ದಕ್ಷಿಣ ಆಫ್ರಿಕ ವಿರುದ್ಧ ಭಾರತ ಭರ್ಜರಿ ಜಯ ಗಳಿಸುವ ಮೂಲಕ ಇಂದು ಸೆಮಿಫೈನಲ್ ಪ್ರವೇಶಿಸಿದೆ.

ಗೆಲುವಿಗೆ 192 ರನ್ ಗಳ ಸವಾಲು ಪಡೆದ ಭಾರತ ಇನ್ನೂ 72 ಎಸೆತಗಳು ಬಾಕಿ ಇರುವಂತೆ 2 ವಿಕೆಟ್ ನಷ್ಟದಲ್ಲಿ 193 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಭಾರತದ ಆರಂಭಿಕ ದಾಂಡಿಗ ಶಿಖರ್ ಧವನ್ 78 ರನ್ (83 ಎ, 12 ಬೌ,1 ಸಿ), ನಾಯಕ ವಿರಾಟ್ ಕೊಹ್ಲಿ ಔಟಾಗದೆ 76 ರನ್ (101 ಎ, 7 ಬೌ,1 ಸಿ) ,ರೋಹಿತ್ ಶರ್ಮ 12 ರನ್ ಮತ್ತು ಯುವರಾಜ್ ಸಿಂಗ್ ಔಟಾಗದೆ 23 ರನ್ ಗಳಿಸಿದರು. ಟಾಸ್ ಜಯಿಸಿದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತ್ತು. ಭಾರತದ ಸಂಘಟಿತ ದಾಳಿಗೆ ಸಿಲುಕಿದ ದಕ್ಷಿಣ ಆಫ್ರಿಕ 44.3 ಓವರ್‌ಗಳಲ್ಲಿ 191 ರನ್‌ಗಳಿಗೆ ಆಲೌಟಾಗಿತ್ತು.

ಭಾರತದ ಆಟಗಾರರ ಚುರುಕಿನ ಕ್ಷೇತ್ರರಕ್ಷಣೆ, ಶಿಸ್ತುಬದ್ಧ ದಾಳಿಯ ಫಲವಾಗಿ ದಕ್ಷಿಣ ಆಫ್ರಿಕದ ಬ್ಯಾಟಿಂಗ್ ಬೇಗನೆ ಕೊನೆಗೊಂಡಿತು. ಅದರಲ್ಲೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧೋನಿ ಎರಡು ಕ್ಯಾಚ್ ಮತ್ತು ಮೂವರನ್ನು ರನೌಟ್ ಮಾಡಿದರು. ದಕ್ಷಿಣ ಆಫ್ರಿಕದ ಕ್ವಿಂಟನ್ ಡಿ ಕಾಕ್ ಅರ್ಧಶತಕ(53) ದಾಖಲಿಸಿದರು. ಹಾಶಿಮ್ ಅಮ್ಲ(35), ಎಫ್‌ಡು ಪ್ಲೆಸಿಸ್(36), ಎವಿ ಡಿವಿಲಿಯರ್ಸ್‌(16) ಮತ್ತು ಜೆಪಿ ಡುಮಿನಿ (20) ಎರಡಂಕೆಯ ಕೊಡುಗೆ ನೀಡಿದರು.

ಇನಿಂಗ್ಸ್ ಆರಂಭಿಸಿದ ಕ್ವಿಂಟನ್ ಡಿ ಕಾಕ್ ಮತ್ತು ಹಾಶಿಮ್ ಅಮ್ಲ ಮೊದಲ ವಿಕೆಟ್‌ಗೆ 17.3 ಓವರ್‌ಗಳಲ್ಲಿ 76 ರನ್ ದಾಖಲಿಸುವ ಮೂಲಕ ಉತ್ತಮ ಅಡಿಪಾಯ ಹಾಕಿಕೊಟ್ಟರು. ಟೂರ್ನಮೆಂಟ್‌ನಲ್ಲಿ ಮೊದಲ ಬಾರಿ ಆಡಿದ ಅಶ್ವಿನ್ 17.3ನೆ ಓವರ್‌ನಲ್ಲಿ ಅಮ್ಲ(35) ಅವರನ್ನು ಪೆವಿಲಿಯನ್‌ಗೆ ಅಟ್ಟಿದರು. ಅಮ್ಲ 54 ಎಸೆತಗಳನ್ನು ಎದುರಿಸಿದರು.3 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸಿದರು. ಪ್ಲೆಸಿಸ್ ತೆರವಾದ ಸ್ಥಾನಕ್ಕೆ ಆಗಮಿಸಿದರು. ಪ್ಲೆಸಿಸ್ ಮತ್ತು ಡಿ ಕಾಕ್ ಎರಡನೆ ವಿಕೆಟ್‌ಗೆ 40 ರನ್ ಸೇರಿಸಿದರು.

ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಅರ್ಧಶತಕ ದಾಖಲಿಸಿದರು. 53 ರನ್ (72ಎ, 4ಬೌ) ಗಳಿಸಿದ ಡಿ ಕಾಕ್ ಅವರು ಜಡೇಜ ಎಸೆತವನ್ನು ಎದುರಿಸಲಾರದೆ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ನಾಯಕ ಎಬಿಡಿ ವಿಲಿಯರ್ಸ್‌ ರನೌಟಾದರು. ವಿಲಿಯರ್ಸ್‌ ಔಟಾದ ಬಳಿಕ ದಕ್ಷಿಣ ಆಫ್ರಿಕ ಒತ್ತಡಕ್ಕೆ ಸಿಲುಕಿತು. ಮತ್ತೆ 51 ರನ್ ತಂಡದ ಖಾತೆಗೆ ಸೇರುವಷ್ಟರಲ್ಲಿ ದಕ್ಷಿಣ ಆಫ್ರಿಕ ಆಲೌಟಾಯಿತು. ಭಾರತದ ಪರ ಭುವನೇಶ್ವರ ಕುಮಾರ್ ಮತ್ತು ಜಸ್‌ಪ್ರೀತ್ ಬುಮ್ರಾ ತಲಾ 2 ವಿಕೆಟ್ , ಆರ್.ಅಶ್ವಿನ್, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜ ತಲಾ 1 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X