Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಮುಂದುವರಿದ ಮಳೆ; ಮನೆಗಳಿಗೆ...

ಭಟ್ಕಳ: ಮುಂದುವರಿದ ಮಳೆ; ಮನೆಗಳಿಗೆ ನುಗ್ಗಿದ ನೀರು, ಕೃಷಿ ನಾಶ

ವಾರ್ತಾಭಾರತಿವಾರ್ತಾಭಾರತಿ11 Jun 2017 11:32 PM IST
share
ಭಟ್ಕಳ: ಮುಂದುವರಿದ ಮಳೆ; ಮನೆಗಳಿಗೆ ನುಗ್ಗಿದ ನೀರು, ಕೃಷಿ ನಾಶ

ಭಟ್ಕಳ, ಜೂ. 11: ತಾಲೂಕಿನಾದ್ಯಂತ ಮುಂಗಾರು ಅಬ್ಬರದಿಂದ ಕೂಡಿದ್ದು ರವಿವಾರವೂ ಮುಂಗಾರು ಮಳೆಯ ಆಕ್ರಮಣ ಮುಂದುವರೆದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ತಾಲೂಕಿನ ಶಿರಾಲಿ ಗ್ರಾಮ ಪಂ. ವ್ಯಾಪ್ತಿಯ ವೆಂಕಟಾಪುರದಲ್ಲಿ ಐಆರ್‌ಬಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ನೀರು ಸರಾಗವಾಗಿ ಹರಿಯದೇ ಮನೆ ಹಾಗೂ ಕೃಷಿ ಭೂಮಿಗಳಿಗೆ ನುಗ್ಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 

ಮಳೆಯ ನೀರು ಹರಿದು ಬಂದು ಆತಂಕಕ್ಕೆ ಸಿಲುಕಿದ ಮನೆಯ ಮಾಲಕರನ್ನು ಲಕ್ಷ್ಮಣ ಭದ್ರಯ್ಯ ದೇವಡಿಗ, ನಾಗೇಶ ಸಣ್ಣ ಹುಡ್ಗ ದೇವಡಿಗ, ಗಜಾನನ ಸಣ್ಣಹುಡ್ಗ ದೇವಡಿಗ, ಪರಮೇಶ್ವರ ಭದ್ರಯ್ಯ ದೇವಡಿಗ ಎಂದು ಗುರುತಿಸಲಾಗಿದೆ. ಪಂಚನಾಮೆ ನಡೆಸಿ ಹಾನಿ ಕಂಡು ಬಂದಲ್ಲಿ ಪರಿಹಾರ ಒದಗಿಸಿಕೊಡುವುದಾಗಿ ಕಂದಾಯ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಕಡವಿನಕಟ್ಟೆ ಡ್ಯಾಮ್‌ನಿಂದ ಆರಂಭವಾಗಿ ವೆಂಕಟಾಪುರ ಹೊಳೆಯನ್ನು ಸೇರುವ ಹಳ್ಳಕ್ಕೆ ಐಆರ್‌ಬಿ ವತಿಯಿಂದ ಸೇತುವೆಯ ಬಳಿ ನಿರ್ಮಿಸಲಾದ ಅಡ್ಡ ಚರಂಡಿ (ಸಿಡಿ) ಅವೈಜ್ಞಾನಿಕವಾಗಿದೆ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಹಳ್ಳದ ದಿಕ್ಕನ್ನು ಬದಲಿಸಿರುವುದರಿಂದ ನೀರು ಮುಂದಕ್ಕೆ ಹರಿಯದೇ ಗದ್ದೆಯಲ್ಲಿ ತುಂಬಿಕೊಳ್ಳುತ್ತಿದ್ದು, ಮನೆ, ಹಿತ್ತಲಿನತ್ತ ಧುಮುಕುತ್ತಿದೆ. ಸದರಿ ಸಿಡಿಯನ್ನು ಒಡೆದು ಹಳ್ಳದ ನೈಸರ್ಗಿಕ ಮಾರ್ಗವನ್ನು ಉಳಿಸಿಕೊಳ್ಳುವ ರೀತಿಯಲ್ಲಿ ಕಾಮಗಾರಿ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಜನರ ಆತಂಕದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಶಿರಾಲಿ ಗ್ರಾಮ ಪಂ. ಅಧ್ಯಕ್ಷ ವೆಂಕಟೇಶ ನಾಯ್ಕ, ಸದಸ್ಯರಾದ ಮೋಹನ ದೇವಡಿಗ, ಭಾಸ್ಕರ ದೈಮನೆ, ಈಶ್ವರ ಮೊಗೇರ ಮತ್ತಿತರರು ಕಂದಾಯ ಹಾಗೂ ಐಆರ್‌ಬಿ ಅಧಿಕಾರಿಗಳ ವಿರುದ್ಧ ಅಸಮಾಧಾನವನ್ನು ಹೊರ ಹಾಕಿದರು.

ಇಲ್ಲಿನ ಪರಿಸ್ಥಿತಿಯ ಬಗ್ಗೆ ಎರಡೆರಡು ಬಾರಿ ಪಂ. ವತಿಯಿಂದ ಐಆರ್‌ಬಿಗೆ ಲಿಖಿತವಾಗಿ ಬರೆದುಕೊಂಡು ಗಮನ ಸೆಳೆದಿದ್ದೇವೆ. ಆದರೆ ಐಆರ್‌ಬಿ ಅಧಿಕಾರಿಗಳು ನಮ್ಮ ಮನವಿಯನ್ನು ಪರಿಗಣಿಸುತ್ತಿಲ್ಲ. ಇದೀಗ ಮಳೆಗಾಲದಲ್ಲಿ ನೀರು ಮನೆಗಳಿಗೆ ಹರಿದು ಬರುತ್ತಿದೆ. 200 ಕ್ಕೂ ಅಧಿಕ ಎಕರೆ ಕೃಷಿ ಭೂಮಿಯಲ್ಲಿ ನೀರು ತುಂಬಿಕೊಂಡ ಕಾರಣ ಬಿತ್ತಿದ ಬೀಜವೆಲ್ಲ ನೀರುಪಾಲಾಗಿದೆ. ಜನರಿಗೆ ಉತ್ತರ ಕೊಡುವವರು ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಐಆರ್‌ಬಿ ನೌಕರ ದೀಪಕ್ ಕಾಮತ್, ಮುರುಡೇಶ್ವರ ಕಂದಾಯ ನಿರೀಕ್ಷಕ ಚಾಂದ್ ಬಾಷಾ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ನಂತರ ಹಿಟಾಚಿ ಯಂತ್ರವನ್ನು ತರಿಸಿಕೊಂಡು ನಿಂತ ನೀರನ್ನು ಮುಂದಕ್ಕೆ ಹರಿಸಲು ಕ್ರಮ ಕೈಗೊಳ್ಳಲಾಯಿತು. ಬೆಂಗ್ರೆ, ಕಾಯ್ಕಿಣಿ ಗ್ರಾಮ ಪಂ. ವ್ಯಾಪ್ತಿಯ ತೆರ್ನಮಕ್ಕಿಯಲ್ಲಿಯೂ ಐಆರ್‌ಬಿಯವರ ಅಪೂರ್ಣ ಕಾಮಗಾರಿಯಿಂದ ನೀರು ತುಂಬಿಕೊಂಡ ಬಗ್ಗೆ ಮಾಹಿತಿ ಲಭಿಸಿದೆ.

ಧರೆಗುರುಳಿದ ವಿದ್ಯುತ್ ಕಂಬ: ಮಳೆಯ ಅಬ್ಬರಕ್ಕೆ ತಾಲೂಕಿನ ವಿವಿದೆಡೆ 10 ವಿದ್ಯುತ್ ಕಂಬಗಳು ಧರೆಗುರುಳಿವೆ. ತಾಲೂಕಿನ ಪ್ರಮುಖ ವಿದ್ಯುತ್ ಮಾರ್ಗ ಹಾದು ಹೋಗಿರುವ ಮೂಡ ಭಟ್ಕಳ ಹಾಗೂ ಮಣ್ಕುಳಿ ಭಾಗದಲ್ಲಿ ಐಆರ್‌ಬಿ ಅಪೂರ್ಣ ಕಾಮಗಾರಿಯಿಂದಾಗಿ ಮಳೆ ನೀರಿಗೆ ಮಣ್ಣು ಕೊಚ್ಚಿಕೊಂಡು ಹೋಗಿ ಕಂಬಗಳು ಕೆಳಕ್ಕುರುಳಿದ ಪರಿಣಾಮವಾಗಿ ಜನರು ರವಿವಾರ ಮಧ್ಯಾಹ್ನದವರೆಗೂ ವಿದ್ಯುತ್ ಇಲ್ಲದೆ ದಿನ ಕಳೆಯಬೇಕಾಯಿತು.
ಚೌಥನಿಯಲ್ಲಿ ನೆರೆಯ ಭೀತಿ: ಕಳೆದ 2-3 ದಿನಗಳಿಂದ ಎಡೆಬಿಡದ ಮಳೆಯಿಂದಾಗಿ ಚೌಥನಿ ಹೊಳೆಯ ಇಕ್ಕೆಲಗಳಲ್ಲಿ ನೆರೆಯ ಭೀತಿ ಸೃಷ್ಟಿಯಾಯಿತು. ಮನೆ ಮಂದಿ ತುಂಬಿದ ಹೊಳೆಯನ್ನು ನೆನೆದು ಮನೆಯ ಅಂಗಳದಲ್ಲಿಯೇ ಎಚ್ಚರವಹಿಸಿ ಕಾದು ಕುಳಿತಿರುವುದು ಕಂಡು ಬಂತು.

ಮುಂಡಳ್ಳಿ ಹೊಸ್ಮನೆ ಭಾಗದಲ್ಲಿ ರವಿವಾರ ಮುಂಜಾನೆ ರಸ್ತೆ ಹೊಳೆಯಾಗಿ ಬದಲಾದ ಕಾರಣ ವಾಹನ ಸವಾರರು ಪರದಾಡಿದರು. ಪುರಸಭಾ ವ್ಯಾಪ್ತಿಯ ಗುಡ್‌ಲಕ್ ರೋಡ್‌ನಲ್ಲಿ ಕಂಪೌಂಡ್ ಗೋಡೆಯೊಂದು ಕುಸಿದು ಬಿದ್ದ ಪರಿಣಾಮವಾಗಿ ಸಂಚಾರಕ್ಕೆ ತೀವೃ ಅಡಚಣೆಯುಂಟಾಯಿತು. ತಾಲೂಕಿನಾದ್ಯಂತ ಮೋಡ ಕವಿದ ವಾತಾವರಣ ಮುಂದುವರೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X