Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಿಷತ್ ಸಭಾಪತಿ ಶಂಕರಮೂರ್ತಿ ವಿರುದ್ಧ...

ಪರಿಷತ್ ಸಭಾಪತಿ ಶಂಕರಮೂರ್ತಿ ವಿರುದ್ಧ ಅವಿಶ್ವಾಸ ಇಂದು ಚರ್ಚೆ

ವಾರ್ತಾಭಾರತಿವಾರ್ತಾಭಾರತಿ12 Jun 2017 11:01 PM IST
share

ಬೆಂಗಳೂರು, ಜೂ.12: ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ವಿರುದ್ಧ ಸಲ್ಲಿಸಿರುವ ಅವಿಶ್ವಾಸ ಕುರಿತ ನೋಟಿಸ್ ಗಡುವು ಸೋಮವಾರಕ್ಕೆ ಮುಗಿಯಲಿದ್ದು, ಮಂಗಳವಾರ ಸದನದಲ್ಲಿ ಚರ್ಚೆಯಾಗಲಿದೆ.

 ಶಂಕರಮೂರ್ತಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನವಾಗಿ ಕಾಂಗ್ರೆಸ್ ಸದಸ್ಯರು ವಿ.ಎಸ್.ಉಗ್ರಪ್ಪನೇತೃತ್ವದಲ್ಲಿ ಮೇ 30ಕ್ಕೆ ನೋಟಿಸ್ ಸಲ್ಲಿಸಿದ್ದರು. ಅದು ಸದನದಲ್ಲಿ ಚರ್ಚೆಯಾಗಲು 14 ದಿನಗಳ ಸಮಯ ಬೇಕಾಗುತ್ತದೆ.

ಹೀಗಾಗಿ, ಉಗ್ರಪ್ಪಸಲ್ಲಿಸಿದ್ದ ನೋಟಿಸ್‌ಗೆ ಜೂನ್ 12ರಂದು 14 ದಿನಗಳಾಗುತ್ತವೆ. ಜೂನ್ 13ರಂದು ಸದನದ ಕಲಾಪ ಪಟ್ಟಿಯಲ್ಲಿ ಈ ನೋಟಿಸ್ ವಿಚಾರವನ್ನು ಸೇರಿಸಬೇಕಾಗುತ್ತದೆ. ಅಂದು ಸಭಾಪತಿ ಅವರು ಅವಕಾಶ ನೀಡಿದಾಗ ನೋಟಿಸ್ ನೀಡಿದ್ದವರು ಅವಿಶ್ವಾಸ ಗೊತ್ತುವಳಿ ಮಂಡನೆಗೆ ಅವಕಾಶ ಕೇಳಬೇಕಾಗುತ್ತದೆ. ಆ ಸಂದರ್ಭದಲ್ಲಿ ಕನಿಷ್ಠ 10 ಮಂದಿ ಬೆಂಬಲ ನೀಡಬೇಕಾಗುತ್ತದೆ. ಆನಂತರ ಸಭಾಪತಿ ಸ್ಥಾನದಲ್ಲಿರುವವರ ವಿರುದ್ಧ ಅವಿಶ್ವಾಸ ಮಂಡಿಸಲು ಅವಕಾಶ ಲಭಿಸುತ್ತದೆ. ಅಲ್ಲಿಂದ 5 ದಿನಗಳ ಒಳಗಾಗಿ ಅವಿಶ್ವಾಸ ನಿರ್ಣಯ ಮಂಡಿಸಬೇಕಾಗುತ್ತದೆ.

 ಅಂದರೆ ಜೂನ್ 13ರಂದು ಸದನದಲ್ಲಿ ಪ್ರಸ್ತಾಪವಾದರೆ ನಂತರದ ಮೂರು ದಿನಗಳಲ್ಲಿ ಮಾತ್ರ ಅವಿಶ್ವಾಸ ನಿರ್ಣಯ ಮಂಡಿಸಿ ಸಭಾಪತಿ ಅವರನ್ನು ಕೆಳಗಿಳಿಸಬೇಕಾಗುತ್ತದೆ. ಏಕೆಂದರೆ, ಸದನ ಜೂನ್ 16ರಂದು ಅಂತ್ಯವಾಗುವುದರಿಂದ ಅವಿಶ್ವಾಸ ನಿರ್ಣಯ ಮಂಡನೆಗೆ ತೀರಾ ಕಡಿಮೆ ಸಮಯ ಇರುತ್ತದೆ. ಹೀಗಾಗಿ, ಕಾಂಗ್ರೆಸ್ ಮಾಡಿರುವ ಈ ಪ್ರಯತ್ನಕ್ಕೆ ಜೆಡಿಎಸ್ ಬೆಂಬಲ ನೀಡಿದರೆ ಕೇವಲ ಮೂರೇ ದಿನಗಳಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿ ಯಶ ಸಾಧಿಸಬಹುದು. ಇಲ್ಲವಾದರೆ ಈ ಅಧಿವೇಶನದಲ್ಲಿ ಪದಚ್ಯುತಿ ಕಷ್ಟಸಾಧ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪರಿಷತ್ತಿನ ಒಟ್ಟು 75 ಮಂದಿ ಸದಸ್ಯ ಬಲದಲ್ಲಿ ಕಾಂಗ್ರೆಸ್ 32 ಸದಸ್ಯರನ್ನು ಹೊಂದಿದ್ದು, ಪಕ್ಷೇತರರಾದ ಬೈರತಿ ಸುರೇಶ್, ಎಂ.ಡಿ.ಲಕ್ಷ್ಮೀನಾರಾಯಣ, ವಿವೇಕರಾವ್ ಪಾಟೀಲ್ ಅವರಿಂದಾಗಿ ಕಾಂಗ್ರೆಸ್ ಬಲ 35ಕ್ಕೇರಿದೆ. ಆದರೆ ಸಭಾಪತಿ ಸೇರಿ ಬಿಜೆಪಿ 23 ಮಂದಿ ಸದಸ್ಯ ಬಲ ಹೊಂದಿದೆ. ಇನ್ನು ಜೆಡಿಎಸ್ 13 ಸದಸ್ಯರನ್ನು ಹೊಂದಿದೆ. ಇದಲ್ಲದೆ ಪಕ್ಷೇತರರಾದ ಡಿ.ಯು. ಮಲ್ಲಿಕಾರ್ಜುನ್ ಮತ್ತು ಯತ್ನಾಳ್ ಕೂಡ ಇದ್ದಾರೆ. ನಾಮ ನಿರ್ದೇಶನ ಸದಸ್ಯರು ಒಂದು ಸ್ಥಾನ ಮತ್ತು ವಿಮಲಾಗೌಡ ನಿಧನದಿಂದ ತೆರವಾಗಿರುವ ಒಂದು ಸ್ಥಾನ ಖಾಲಿ ಇದೆ. ಒಟ್ಟಾರೆ 73 ಸದಸ್ಯ ಬಲವಿದೆ. ಆದರೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಯಶ ಸಾಧಿಸಲು ಕಾಂಗ್ರೆಸ್ಸಿಗೆ 38 ಮತ ಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X