Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಕುಸಿದು ಬೀಳುವ ಹಂತದಲ್ಲಿದೆ...

ಪುತ್ತೂರು: ಕುಸಿದು ಬೀಳುವ ಹಂತದಲ್ಲಿದೆ ಹಳೇಕಾಲದ ಕಿರು ಸೇತುವೆ

ವಾರ್ತಾಭಾರತಿವಾರ್ತಾಭಾರತಿ12 Jun 2017 11:55 PM IST
share
ಪುತ್ತೂರು: ಕುಸಿದು ಬೀಳುವ ಹಂತದಲ್ಲಿದೆ ಹಳೇಕಾಲದ ಕಿರು ಸೇತುವೆ

ಪುತ್ತೂರು, ಜೂ.12: ಪುತ್ತೂರಿನಿಂದ ಗಡಿ ಪ್ರದೇಶವಾಗಿರುವ ಪಾಣಾಜೆಗೆ ಕುಂಜೂರು ಪಂಜದ ಮೂಲಕ ಸಂಪರ್ಕ ಕಲ್ಪಿಸುವ ಸುಮಾರು 100 ವರ್ಷಗಳ ಇತಿಹಾಸವಿರುವ ಚೆಲ್ಯಡ್ಕ ಮುಳುಗು ಸೇತುವೆ ಇದೀಗ ಅಪಾಯದ ಸ್ಥಿತಿಗೆ ತಲುಪಿದೆ.

ತೀರಾ ಹಳೆಯದಾದ ಮತ್ತು ಪ್ರತೀ ವರ್ಷವೂ ಮಳೆಗಾಲದಲ್ಲಿ ಮುಳುಗಡೆಯಾಗುವ ಮೂಲಕ ಈ ಭಾಗದ ಜನತೆಗೆ ಸಮಸ್ಯೆಯಾಗಿ ಕಾಡುವ ಈ ಮುಳುಗು ಸೇತುವೆಗೆ ಮುಕ್ತಿ ನೀಡುವಂತೆ ಆ ಭಾಗದ ಜನತೆ ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಾ, ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯುತ್ತಾ ಬಂದಿದ್ದರೂ ಈ ತನಕವೂ ಪ್ರತಿಫಲ ಶೂನ್ಯವಾಗಿದ್ದು, ಇದೀಗ ಸೇತುವೆಯ ಅಡಿಪಾಯ ಕಲ್ಲುಗಳು ಜರಿಯ ತೊಡಗಿದ್ದು, ಸೇತುವೆಯೇ ಕುಸಿದು ಬೀಳುವ ಹಂತಕ್ಕೆ ತಲುಪಿದೆ.

ಪುತ್ತೂರಿನಿಂದ ಪರ್ಲಡ್ಕ, ಕುಂಜೂರುಪಂಜ, ಒಳತ್ತಡ್ಕ, ದೇವಸ್ಯ ಅಜ್ಜಿಕಲ್ಲು ಮೂಲಕವಾಗಿ ಪಾಣಾಜೆ, ಸುಳ್ಯಪದವು ಕಡೆಗಳಿಗೆ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಪುತ್ತೂರು-ಪಾಣಾಜೆ ರಸ್ತೆಯ ಚೆಲ್ಯಡ್ಕ ಎಂಬಲ್ಲಿ ತಡೆಗೋಡೆ ಇಲ್ಲದ ಈ ಮುಳುಗು ಸೇತುವೆ ಇದೆ. ಇದೀಗ ಮುಳುಗು ಸೇತುವೆಗೆ ಆಧಾರಸ್ಥಂಭವಾಗಿ ಅಳವಡಿಸಲಾಗಿರುವ ಕಗ್ಗಲ್ಲಿನಿಂದ ನಿರ್ಮಿಸಿರುವ ಫಿಲ್ಲರ್‌ಗಳ ಪೈಕಿ ಮೂರು ಪಿಲ್ಲರ್‌ಗಳ ಕಲ್ಲುಗಳು ಕಸಿಯತೊಡಗಿದ್ದು, ಆ ಪೈಕಿ ಎರಡು ಪಿಲ್ಲರ್‌ಗಳ ಕಲ್ಲುಗಳು ಹೆಚ್ಚು ಕುಸಿದಿದ್ದು, ಸೇತುವೆಯ ಎರಡೂ ಬದಿಗಳಲ್ಲಿ ಬಿರುಕುಬಿಟ್ಟಿದೆ. ಇದರಲ್ಲಿ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಸೇತುವೆ ಕುಸಿದು ಬೀಳುವ ಅಪಾಯ ಎದುರಾಗಿದೆ.

ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆಗೆ ಸುಮಾರು 100 ವರ್ಷಗಳ ಇತಿಹಾಸವಿದ್ದು, ತಡೆಗೋಡೆ ಇಲ್ಲದಿರುವ ಈ ಸೇತುವೆಯು ಹೊಳೆಯಿಂದ ಸುಮಾರು 8 ಅಡಿಯಷ್ಟು ಎತ್ತರದಲ್ಲಿದೆ. ಆದರೆ ಇದೀಗ ಹೊಳೆಯಲ್ಲಿ ಹೂಳು ತುಂಬಿಕೊಂಡಿರುವ ಪರಿಣಾಮವಾಗಿ 4 ಅಡಿಗಳಷ್ಟು ಮಾತ್ರವಿದ್ದು, ಸದಾರಣ ಮಳೆಯ ನೀರೂ ಸರಾಗವಾಗಿ ಹರಿದು ಹೋಗುವುದು ಅಸಾಧ್ಯವಾಗಿದೆ. ಪ್ರತೀ ಷರ್ಷ ಮಳೆಗಾಲದಲ್ಲಿ ಹಲವಾರು ಬಾರಿ ಮುಳುವಡೆಯಾಗುವ ಮೂಲಕ ಈ ಭಾಗದ ಜನತೆಯ ಸಂಪರ್ಕ ವ್ಯವಸ್ಥೆಗೆ ಸಮಸ್ಯೆಯಾಗಿ ಕಾಡುತ್ತಿರುವ ಈ ಸೇತುವೆಯ ಅಡಿಪಾಯ ಕಲ್ಲುಗಳು ಕುಸಿಯಲಾರಂಭಿಸಿರುವುದರಿಂದ ಇದೀಗ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿದೆ. ಸೇತುವೆ ಕುಸಿದಲ್ಲಿ ಕುಂಜೂರುಪಂಜದ ಮೂಲಕ ಈ ರಸ್ತೆಯಾಗಿ ಬೆಟ್ಟಂಪಾಡಿ ,ಪಾಣಾಜೆ, ಸುಳ್ಯಪದವು ಕಡೆಗೆ ತೆರಳುವ ಪ್ರಯಾಣಿಕರು ಪುತ್ತೂರು ಪೇಟೆಯಿಂದ ಸಂಟ್ಯಾರು ಮಾರ್ಗವಾಗಿ ಸುತ್ತು ಬಳಸಿ ತೆರಳಬೇಕಾಗಿದೆ.
ಎರಡೂ ಬದಿಗಳಲ್ಲಿ ಬಿರುಕುಬಿಟ್ಟಿರುವ, ಆಧಾರ ಗೋಡೆಯ ಕಲ್ಲಗಳು ಕುಸಿದು ಬೀಳತೊಡಗಿರುವ ಈ ಸೇತುವೆಯಲ್ಲಿ ಮಳೆಗಾಲದಲ್ಲಿ ಘನವಾಹನಗಳು ಸಂಚರಿಸುವುದು ಸೂಕ್ತವಲ್ಲ. ಈ ಬಾರಿಯ ಮಳೆಗಾಲದಲ್ಲಿ ಬಾರೀ ಮಳೆಯಾದಲ್ಲಿ ಹೊಳೆಯಲ್ಲಿ ದೊಡ್ಡ ಪ್ರಮಾಣದ ಮಳೆನೀರು ಹರಿದುಕೊಂಡು ಬಂದು ಸೇತುವೆಯ ಇನ್ನಷ್ಟು ಪಿಲ್ಲರ್ ಕಲ್ಲುಗಳು ಜರಿದು ಹೋಗುವ ಸಾಧ್ಯತೆ ಇರುವುದರಿಂದ ಇಲ್ಲಿ ಘನವಾಹನಗಳು ಸಂಚರಿಸುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ ಎಂಬುದು ಗ್ರಾಮಸ್ಥರ ಅಭಿಪ್ರಾಯ.

ಚೆಲ್ಯಡ್ಕ ಸೇತುವೆಯ ಪುನರ್ ನಿರ್ಮಾಣ ಮಾಡಬೇಕಾಗಿದೆ. ಇದಕ್ಕೆ ಹೆಚ್ಚಿನ ಮೊತ್ತದ ಅನುದಾನ ಬೇಕಾಗುವ ಕಾರಣ ರೂ. 1.25 ಕೋಟಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಈ ಮಳೆಗಾಲ ಕಳೆದ ಮುಂದಿನ ವರ್ಷದ ಮಳೆಗಾಲದ ವೇಳೆಗಾದರೂ ಖಂಡಿತವಾಗಿಯೂ ಚೆಲ್ಯಡ್ಕದ ಮುಳುಗು ಸೇತುವೆಗೆ ಮುಕ್ತಿ ಸಿಗಲಿದೆ
- ಶಕುಂತಳಾ ಶೆಟ್ಟಿ. ಶಾಸಕರು

ಇಲ್ಲಿನ ರಸ್ತೆಯೂ ದೇವಸ್ಯದಿಂದ ಚೆಲ್ಯಡ್ಕತನಕ ತೀರಾ ಹದೆಗೆಟ್ಟಿದೆ. ಅಲ್ಲದೆ ಇದೀಗ ಸೇತುವೆಯೂ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿದೆ. ಸೇತುವೆ ದುರಸ್ತಿಗೊಳಿಸುವಂತೆ ಹಲವಾರು ಬಾರಿ ಸ್ಥಳೀಯರು ಮನವಿಯನ್ನು ಸಲ್ಲಿಸಿದ್ದರೂ ಯಾವುದೇ ಉಪಯೋಗವಾಗಿಲ್ಲ. ಸೇತುವೆ ಸಂಪೂರ್ಣ ಕುಸಿದು ಬೀಳುವ ಮೊದಲು ಸಂಬಂಧಪಟ್ಟವನ್ನು ಕ್ರಮ ಕೈಗೊಳ್ಳಬೇಕು.
ಪುರಂದರ ರೈ, ಕೈಕಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X