Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ತುಂಗಾ ಡ್ಯಾಂ ಭರ್ತಿಯ...

ಶಿವಮೊಗ್ಗ: ತುಂಗಾ ಡ್ಯಾಂ ಭರ್ತಿಯ ಹಂತಕ್ಕೆ!: ಮಲೆನಾಡಿನಲ್ಲಿ ತಗ್ಗಿದ ಮಳೆಯ ಆರ್ಭಟ

ವಾರ್ತಾಭಾರತಿವಾರ್ತಾಭಾರತಿ13 Jun 2017 5:16 PM IST
share
ಶಿವಮೊಗ್ಗ: ತುಂಗಾ ಡ್ಯಾಂ ಭರ್ತಿಯ ಹಂತಕ್ಕೆ!: ಮಲೆನಾಡಿನಲ್ಲಿ ತಗ್ಗಿದ ಮಳೆಯ ಆರ್ಭಟ

ಶಿವಮೊಗ್ಗ, ಜೂ.13: ಮಲೆನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಚುರುಕುಗೊಂಡಿದ್ದ ಮುಂಗಾರು ಮಳೆಯ ಆರ್ಭಟದಲ್ಲಿ ಮಂಗಳವಾರ ಕೊಂಚ ಇಳಿಕೆ ಕಂಡುಬಂದಿದೆ. ಈ ನಡುವೆ ಮೊದಲ ಮಳೆಗೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯ ಭರ್ತಿಯ ಹಂತಕ್ಕೆ ತಲುಪಿದೆ.

ಡ್ಯಾಂನಿಂದ ಯಾವ ಕ್ಷಣದಲ್ಲಿ ಬೇಕಾದರೂ ನೀರು ಹೊರ ಬಿಡುವ ಸಾಧ್ಯತೆಯಿದೆ. ಮಂಗಳವಾರ ಬೆಳಿಗ್ಗೆಯ ಮಾಹಿತಿಯಂತೆ ತುಂಗಾ ಜಲಾಶಯದ ನೀರಿನ ಮಟ್ಟ 587.27 (ಗರಿಷ್ಠ ಮಟ್ಟ : 588.24) ಅಡಿಯಿದೆ. ಡ್ಯಾಂ ಭರ್ತಿಗೆ ಕೇವಲ 1 ಅಡಿಯಷ್ಟು ನೀರು ಬೇಕಾಗಿದೆ. 7020 ಕ್ಯೂಸೆಕ್ ಒಳಹರಿವಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನ ನೀರಿನ ಮಟ್ಟ 584.95 ಅಡಿಯಿತ್ತು. ತುಂಗಾ ಡ್ಯಾಂ ಕಡಿಮೆ ನೀರು ಸಂಗ್ರಹಣೆಯ ವ್ಯಾಪ್ತಿ - ವಿಸ್ತೀರ್ಣ ಹೊಂದಿದ್ದು, ಕೇವಲ 3.24 ಟಿಎಂಸಿ ನೀರು ಸಂಗ್ರಹಣೆಯ ಸಾಮರ್ಥ್ಯ ಹೊಂದಿದೆ.

ಪ್ರತಿ ವರ್ಷ ಮುಂಗಾರು ಮಳೆಯ ಮೊದಲ ಮಳೆಗೆ ಡ್ಯಾಂ ಗರಿಷ್ಠ ಮಟ್ಟ ತಲುಪುತ್ತದೆ. ಕಳೆದ ಕೆಲ ದಿನಗಳಿಂದ ಜಲಾನಯನ ಪ್ರದೇಶವಾದ ತೀರ್ಥಹಳ್ಳಿ, ಶೃಂಗೇರಿ ಸುತ್ತಮುತ್ತಲು ಉತ್ತಮ ಮಳೆಯಾಗುತ್ತಿರುವ ಕಾರಣದಿಂದ ಡ್ಯಾಂಗೆ ಉತ್ತಮ ಒಳಹರಿವು ಕಂಡುಬಂದಿತ್ತು. ಉಳಿದಂತೆ ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂನ ನೀರಿನ ಮಟ್ಟ 1745.85 (ಗರಿಷ್ಠ ಮಟ್ಟ : 1818) ಅಡಿಯಿದೆ. 11,432 ಕ್ಯೂಸೆಕ್ ಒಳಹರಿವಿದೆ. ಹೊರ ಹರಿವು ಸ್ಥಗಿತಗೊಳಿಸಲಾಗಿದೆ.

ಕಳೆದ ವರ್ಷ ಇದೇ ದಿನದಂದು ಡ್ಯಾಂನ ನೀರಿನ ಮಟ್ಟ 1756.15 ಅಡಿಯಿತ್ತು. ಶಿವಮೊಗ್ಗ - ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿಯೆಂದೇ ಕರೆಯಲಾಗುವ ಭದ್ರಾ ಜಲಾಶಯದ ನೀರಿನ ಮಟ್ಟ 103.2 (ಗರಿಷ್ಠ ಮಟ್ಟ : 186) ಅಡಿಯಿದೆ. 4035 ಕ್ಯೂಸೆಕ್ ಒಳಹರಿವಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನ ನೀರಿನ ಮಟ್ಟ 113.1 ಅಡಿಯಿತ್ತು.

ತಗ್ಗಿದ ಆರ್ಭಟ: ಕಳೆದ ಮೂರು ದಿನಗಳಿಂದ ಜಿಲ್ಲೆಯ ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕುಗೊಂಡಿತ್ತು. ಧಾರಾಕಾರ ಮಳೆಯಾಗುತ್ತಿತ್ತು. ಹಳ್ಳಕೊಳ್ಳಗಳು ತುಂಬಿ ಹರಿಯಲಾರಂಭಿಸಿದ್ದವು. ಆದರೆ ಮಂಗಳವಾರ ಬೆಳಿಗ್ಗೆಯಿಂದ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ ಮುಂದಿನ ದಿನಗಳಲ್ಲಿ ಧಾರಾಕಾರ ಮಳೆಯಾಗುವ ಲಕ್ಷಣಗಳು ಗೋಚರವಾಗುತ್ತಿವೆ.

ಮತ್ತೊಂದೆಡೆ ಕಳೆದ ಮೂರು ದಿನಗಳಿಂದ ಜಿಟಿಜಿಟಿ ಮಳೆಗೆ ಸಾಕ್ಷಿಯಾಗಿದ್ದ ಶಿವಮೊಗ್ಗ ನಗರದಲ್ಲಿ ಮಂಗಳವಾರ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ಚುರುಕು: ಜಿಲ್ಲೆಯ ಬಹುತೇಕ ಎಲ್ಲೆಡೆ ಹದ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಮೆಕ್ಕೆಜೋಳ ಬಿತ್ತನೆ ಕಾರ್ಯವನ್ನು ರೈತರು ಆರಂಭಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X