Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಧಾನ ಪರಿಷತ್ ಸಭಾಪತಿ ಶಂಕರಮೂರ್ತಿ...

ವಿಧಾನ ಪರಿಷತ್ ಸಭಾಪತಿ ಶಂಕರಮೂರ್ತಿ ವಿರುದ್ಧ ಅವಿಶ್ವಾಸ ನಿಲುವಳಿ ಮಂಡನೆ

ವಾರ್ತಾಭಾರತಿವಾರ್ತಾಭಾರತಿ13 Jun 2017 8:24 PM IST
share
ವಿಧಾನ ಪರಿಷತ್ ಸಭಾಪತಿ ಶಂಕರಮೂರ್ತಿ ವಿರುದ್ಧ ಅವಿಶ್ವಾಸ ನಿಲುವಳಿ ಮಂಡನೆ

ಬೆಂಗಳೂರು, ಜೂ.13: ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯರು ಸಭಾಪತಿ ಡಿ.ಎಚ್.ಶಂಕರಮೂರ್ತಿ ವಿರುದ್ಧ ಅವಿಶ್ವಾಸ ನಿಲುವಳಿ ಮಂಡಿಸಿ ಚರ್ಚೆಗೆ ಅವಕಾಶ ನೀಡುವಂತೆ ಮಾಡಿದ ಮನವಿಗೆ ಶಂಕರಮೂರ್ತಿ ಚರ್ಚೆಗೆ ಸಮಯ ನಿಗದಿ ಮಾಡುವುದಾಗಿ ಹೇಳಿ ದನವನ್ನು ಮುಂದೂಡಿದರು.

      ಸಭಾಪತಿ ಅಕ್ರಮ ಅವ್ಯವಹಾರಗಳಲ್ಲಿ ತೊಡಗಿ ನೀತಿ ನಿಯಮಗಳನ್ನು ಉಲ್ಲಂಘಿಸಿದರೆ ಮಾತ್ರ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿಯಮಾವಳಿಯಲ್ಲಿ ಅವಕಾಶ ಇದೆ. ಆದರೆ ನನ್ನ ವಿರುದ್ಧ ಯಾವುದೇ ಆರೋಪ ಇಲ್ಲ. ಹಾಗಾಗಿಯೂ ಚರ್ಚೆಗೆ ಸಮಯ ನಿಗದಿ ಮಾಡುವುದಾಗಿ ಹೇಳಿ ಸದನವನ್ನು ಮುಂದೂಡಿದರು.

   ಸದ್ಯದ ಮಟ್ಟಿಗೆ ಜೆಡಿಎಸ್ ತಟಸ್ಥವಾಗಿದ್ದು, ಅವಿಶ್ವಾಸ ನಿರ್ಣಯ ವಿಚಾರದಲ್ಲಿ ಜೆಡಿಎಸ್ ಪಾತ್ರ ನಿರ್ಣಾಯಕವಾಗಿದೆ. ನಿರ್ಣಾಯಕ ಪಾತ್ರ ವಹಿಸಲಿರುವ ಜೆಡಿಎಸ್ ನಿರ್ಣಯ ಪರ ಮತ ಚಲಾಯಿಸಿದರೂ ಅಥವಾ ತಟಸ್ಥ ನಿಲುವು ತಾಳಿದರೂ ಶಂಕರಮೂರ್ತಿ ಅವರು ರಾಜೀನಾಮೆ ಕೊಡಬೇಕಾದಂತಹ ಪರಿಸ್ಥಿತಿ ಎದುರಾಗಲಿದೆ.

ಸಂಖ್ಯಾಬಲದ ಚದುರಂಗದಾಟದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬಲದ ಮುಂದೆ ಬಿಜೆಪಿ ಬಲ ಮಂಕಾಗಲಿದ್ದು, ಶಂಕರಮೂರ್ತಿ ರಾಜೀನಾಮೆ ಕೊಡುವುದನ್ನು ಬಿಟ್ಟರೆ ಅನ್ಯ ವಾರ್ಗ ಇಲ್ಲವಾಗಿದೆ.

ಆದರೆ, ನಿರ್ಣಯದ ಮೇಲೆ ಸುದೀರ್ಘ ಚರ್ಚೆಗೆ ಮತ್ತು ಮತದಾನಕ್ಕೆ ಅವಕಾಶ ಕೊಟ್ಟರೂ ಜೆಡಿಎಸ್ ಏನಾದರೂ ತಟಸ್ಥ ನಿಲುವು ತಾಳಿದರೆ ಗೆಲುವು ಕಾಂಗ್ರೆಸ್ ಪರವಾಗಲಿದೆ. ಒಂದು ವೇಳೆ ಬಿಜೆಪಿ ಜತೆ ಕೈ ಜೋಡಿಸಿದರೆ ಆಗಿನ ಚಿತ್ರಣವೇ ಬದಲಾಗಲಿದೆ.

 ಆಡಳಿತ ಪಕ್ಷದ ಸದಸ್ಯರಾದ ವಿ.ಎಸ್. ಉಗ್ರಪ್ಪ, ಶರಣಪ್ಪಮಟ್ಟೂರು ಮತ್ತು ಕೆ.ಸಿ. ಕೊಂಡಯ್ಯ, ಕೆ.ಅಬ್ದುಲ್ ಜಬ್ಬಾರ್, ಎಂ.ಎ.ಗೋಪಾಲಸ್ವಾಮಿ, ಆರ್. ಪ್ರಸನ್ನಕುಮಾರ್ ಹಾಗೂ ಎಚ್.ಎಂ.ರೇವಣ್ಣ ಇತರರು, ವಿಧಾನ ಪರಿಷತ್ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ-165 ಹಾಗೂ ಸಂವಿಧಾನದ 183ನೆ ಅನುಚ್ಛೇದದ ಸಿ ಖಂಡದಡಿ ಸಭಾಪತಿ ಶಂಕರಮೂರ್ತಿ ಅವರನ್ನು ಸಭಾಪತಿ ಸ್ಥಾನದಿಂದ ತೆಗೆದು ಹಾಕುವ ನಿರ್ಣಯವನ್ನು ಸದನದಲ್ಲಿ ಮಂಡಿಸಿದ್ದು, ಇದರಿಂದಾಗಿ ಸಂಖ್ಯಾಬಲದ ಆಧಾರದ ಮೇಲೆ ಸಭಾಪತಿ ಶಂಕರಮೂರ್ತಿ ಅವರ ಸಭಾಪತಿ ಸ್ಥಾನದ ಭವಿಷ್ಯ ನಿರ್ಧಾರವಾಗಿದೆ.

     ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈಜೋಡಿಸಲಿದೆಯೇ ಅಥವಾ ತಟಸ್ಥವಾಗುಳಿಯಲಿದೆಯೇ ಎನ್ನುವುದು ಯಕ್ಷ ಪ್ರಶ್ನೆಯಾಗಿದ್ದು. ಒಂದು ವೇಳೆ ಬಿಜೆಪಿ ಜತೆ ಕೈಜೋಡಿಸಿದರೆ ಅವಿಶ್ವಾಸಕ್ಕೆ ಸೋಲಾಗಲಿದೆ. ಜೆಡಿಎಸ್ ತಟಸ್ಥವಾಗಿ ಉಳಿದುಕೊಂಡರೆ ಸಭಾಪತಿ ಶಂಕರಮೂರ್ತಿ ತಮ್ಮ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.

  ವಿಧಾನಪರಿಷತ್‌ನ 75 ಸದಸ್ಯ ಬಲದಲ್ಲಿ ವಿಮಲಾಗೌಡ ಅವರ ನಿಧನದಿಂದ ಒಂದು ಸ್ಥಾನ ತೆರವಾಗಿದ್ದು, ಇನ್ನುಳಿದ 74 ಸದಸ್ಯರ ಪೈಕಿ ಆಡಳಿತರೂಢಾ ಕಾಂಗ್ರೆಸ್ ಪಕ್ಷ 34, ಬಿಜೆಪಿ ಸಭಾಪತಿ ಸೇರಿ 22, ಜೆಡಿಎಸ್ 13 ಹಾಗೂ ಪಕ್ಷೇತರರು 5 ಸದಸ್ಯರಿದ್ದಾರೆ. ಐದು ಪಕ್ಷೇತರರಲ್ಲಿ ಬಸವನಗೌಡ ಪಾಟೀಲ್ ಯತ್ನಾಳ ಮತ್ತು ಡಿ.ಯು. ಮಲ್ಲಿಕಾರ್ಜುನ ಬಿಜೆಪಿ ಪರವಾಗಿದ್ದು, ಇನ್ನುಳಿದ ಮೂರು ಪಕ್ಷೇತರರಾದ ಬಿ.ಎಸ್. ಸುರೇಶ್, ಎಂ.ಡಿ.ಲಕ್ಷ್ಮೀನಾರಾಯಣ ಹಾಗೂ ವಿವೇಕ್‌ರಾವ್ ಪಾಟೀಲ್ ಕಾಂಗ್ರೆಸ್ ಪರವಾಗಿದ್ದಾರೆ.

      74 ಸದಸ್ಯ ಸ್ಥಾನದ ಪೈಕಿ ಕಾಂಗ್ರೆಸ್‌ಗೆ ಪಕ್ಷೇತರರು ಸೇರಿ 37, ಬಿಜೆಪಿಗೆ ಸಭಾಪತಿ, ಪಕ್ಷೇತರರು ಸೇರಿ 24, ಹಾಗೂ ಜೆಡಿಎಸ್ 13 ಸದಸ್ಯರಿದ್ದಾರೆ. ಸಭಾಪತಿ ಸ್ಥಾನ ಪಡೆಯಲು ಅರ್ಧಕ್ಕಿಂತ ಹೆಚ್ಚಿನ ಸಂಖ್ಯಾಬಲ ಕಾಂಗ್ರೆಸ್‌ಗೆ ಅಗತ್ಯವಾಗಿದೆ. ಸದ್ಯ 74 ಸದಸ್ಯ ಬಲದಲ್ಲಿ ಕಾಂಗ್ರೆಸ್ ಸಭಾಪತಿ ಸ್ಥಾನ ಪಡೆಯಲು 38 ಸ್ಥಾನದ ಅಗತ್ಯವಿದ್ದು, ಪಕ್ಷೇತರರು ಸೇರಿ 37 ಸದಸ್ಯರನ್ನು ಹೊಂದಿದ್ದು, ಒಂದು ಸ್ಥಾನದ ಕೊರತೆ ಎದುರಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X