Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ಪಕ್ಷ ತ್ಯಜಿಸಲು ಕೆ.ಪಿ....

ಕಾಂಗ್ರೆಸ್ ಪಕ್ಷ ತ್ಯಜಿಸಲು ಕೆ.ಪಿ. ನಂಜುಂಡಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ13 Jun 2017 8:28 PM IST
share
ಕಾಂಗ್ರೆಸ್ ಪಕ್ಷ ತ್ಯಜಿಸಲು ಕೆ.ಪಿ. ನಂಜುಂಡಿ ನಿರ್ಧಾರ

 ಬೆಂಗಳೂರು, ಜೂ.13: ವಿಧಾನ ಪರಿಷತ್‌ಗೆ ತನ್ನನ್ನು ನಾಮನಿರ್ದೇಶನ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಧೋರಣೆ ಖಂಡಿಸಿ ವಿಶ್ವಕರ್ಮ ಸಮುದಾಯದ ನಾಯಕ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ.ನಂಜುಂಡಿ ಕಾಂಗ್ರೆಸ್ ಪಕ್ಷದೊಂದಿಗಿನ 16ವರ್ಷಗಳ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದ್ದಾರೆ.

ಮಂಗಳವಾರ ನಗರದಲ್ಲಿನ ತಮ್ಮ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗಿಂತಲೂ ನಾನೇ ಕಾಂಗ್ರೆಸ್ ಪಕ್ಷದಲ್ಲಿ ಸೀನಿಯರ್, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಶ್ವಕರ್ಮ ಜನಾಂಗದ ಶಕ್ತಿಯನ್ನು ಪ್ರದರ್ಶನ ಮಾಡುತ್ತೇನೆ ಎಂದು ಎಚ್ಚರಿಸಿದರು.

16 ವರ್ಷಗಳ ಹಿಂದೆ ನಾನು ತಪ್ಪುನಿರ್ಧಾರ ಮಾಡಿದೆ. ಸಮಾಜದ ಮುಖಂಡರು ಬೇಡವೆಂದರೂ ಕಾಂಗ್ರೆಸ್ ಸೇರುವುದಾಗಿ ಅವರ ಮನವೊಲಿಸಿದೆ. ಅದು ತಪ್ಪು ಅಂತಾ ಈಗ ಸಾಬೀತಾಗಿದೆ. ಹೀಗಾಗಿ ನನ್ನ ಸಮಾಜದ ಮುಖಂಡರು, ಸ್ವಾಮೀಜಿಗಳು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ಬದ್ಧನಾಗಿರುತ್ತೇನೆ ಎಂದು ನಂಜುಂಡಿ ಹೇಳಿದರು.

ಪರಿಷತ್ ಸ್ಥಾನ ಭಿಕ್ಷೆಯಲ್ಲ. ನನ್ನ ಅರ್ಹತೆಗಾಗಿ ಸಿಗಬೇಕಾಗಿತ್ತು. ಆದರೆ, ಕೊಡಲಿಲ್ಲ. ನೀವೆ ಅದನ್ನು ಇಟ್ಟುಕೊಳ್ಳಿ, ನಾವೂ ಮುಖ್ಯವಾಹಿನಿಗೆ ಬಂದೇ ಬರುತ್ತೇವೆ. ಆಗ ಗೊತ್ತಾಗುತ್ತೆ ನಮ್ಮ ಮಹತ್ವ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಮತ್ತೊಮ್ಮೆ ದೇವರಾಜ ಅರಸು ಅವರನ್ನು ನೋಡಬಹುದು ಎಂಬ ಆಸೆ ಎಲ್ಲರಲ್ಲೂ ಇತ್ತು. ಆದರೆ, ಅದು ಈಡೇರಲಿಲ್ಲ ಎಂದು ಅವರು ತಿಳಿಸಿದರು.

ಶೋಷಿತ ಸಮಾಜಗಳನ್ನು ಮೇಲೆತ್ತಿದರೆ ಆಗ ಅವರು ದೇವರಾಜ ಅರಸು ಆಗುತ್ತಿದ್ದರು. ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಬರುವ ಮುನ್ನವೆ ನಾನು ಕಾಂಗ್ರೆಸ್‌ಗೆ ಬಂದಿದ್ದೇನೆ. ಅವರು ಬಂದು 8-9 ವರ್ಷವಾಯ್ತು. ಆದರೆ, ನಾನು 16 ವರ್ಷಗಳಿಂದ ಕಾಂಗ್ರೆಸ್‌ಗಾಗಿ ದುಡಿದ್ದಿದ್ದೇನೆ. ಅವರಿಗೆ ಎಲ್ಲವೂ ಬೇಕು, ನಮಗೆ ಮಾತ್ರ ಏನು ಬೇಡವೇ ಎಂದು ನಂಜುಂಡಿ ಪ್ರಶ್ನಿಸಿದರು.

ವಿಶ್ವಕರ್ಮ ಸಮಾಜ ಕಾಂಗ್ರೆಸ್ ಪಕ್ಷದ ಋಣದಲ್ಲಿಲ್ಲ. ಆದರೆ, ಕಾಂಗ್ರೆಸ್‌ನವರು ನಮ್ಮ ಋಣದಲ್ಲಿದ್ದಾರೆ. ನನಗೆ ಬೇರೆ ಸಮಾಜದವರು ಬೈದಿದ್ದಾರೆ. ಆದರೂ ನಾನು ಪಕ್ಷಕ್ಕೆ ದ್ರೋಹ ಮಾಡಿಲ್ಲ. ಒಂದು ಮಟ್ಟಕ್ಕೆ ಒಂದು ಸಮಾಜವನ್ನು ನಿರ್ಲಕ್ಷಿಸಬೇಕು. ಆದರೆ, ಈ ಮಟ್ಟಕ್ಕೆ ಅಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ನನ್ನುನ್ನು ಪರಿಷತ್ ಸದಸ್ಯರನ್ನಾಗಿ ಏಕೆ ಮಾಡಲಿಲ್ಲ ಎಂಬುದು ಗೊತ್ತಾಗುತ್ತಿಲ್ಲ. ನನಗೆ ಭಾಷಣ ಮಾಡಲು ಬರಲ್ವ, ವಿದ್ಯಾವಂತನಲ್ವ, ಸಂಘಟನೆ ಗೊತ್ತಿಲ್ವ, ಆದರೂ ಏಕೆ ಕೈ ಬಿಟ್ಟರು ಅಂತಾ ಕಾಂಗ್ರೆಸ್ ನಾಯಕರು ಹೇಳಬೇಕು. ನಾನಿನ್ನೂ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ. ನನಗೆ ಸಿದ್ದರಾಮಯ್ಯಗಿಂತ ಸೋನಿಯಾಗಾಂಧಿ ಚೆನ್ನಾಗಿ ಗೊತ್ತು. ಅವರ ಕೈಯಲ್ಲೆ ರಾಜೀನಾಮೆ ನೀಡುತ್ತೇನೆ ಎಂದು ನಂಜುಂಡಿ ಹೇಳಿದರು.

ನಮ್ಮ ಸಮುದಾಯದ ಸ್ವಾಮೀಜಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಜೊತೆ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಸೇರುವಾಗ ಕೈಗೊಂಡ ಆತುರದ ನಿರ್ಧಾರದಿಂದ ಕೈ ಸುಟ್ಟುಕೊಂಡಿದ್ದೇನೆ. ಹೀಗಾಗಿ ಮುಂದೆ ಯಾವ ಪಕ್ಷ ಸೇರಬೇಕೆಂಬುದರ ಕುರಿತು ಯೋಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಅವರು ತಿಳಿಸಿದರು.

ವಿಶ್ವಕರ್ಮ ಸಮಾಜದ ಸ್ವಾಮೀಜಿ ಮಾತನಾಡಿ, ಕೆ.ಪಿ.ನಂಜುಂಡಿಯವರಿಗೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯವಾಗಿದೆ. ನಮ್ಮ ನಂಬಿಕೆಗೆ ಕಾಂಗ್ರೆಸ್ ಚ್ಯುತಿ ತಂದಿದೆ. ಸಿದ್ದರಾಮಯ್ಯ ಮಾಡಿರುವ ಈ ಮೋಸದಿಂದ ವಿಶ್ವಕರ್ಮ ಸಮಾಜಕ್ಕೆ ಏನು ನಷ್ಟವಿಲ್ಲ. ನಮ್ಮಲ್ಲಿನ ಒಗ್ಗಟ್ಟು ಮತ್ತಷ್ಟು ಹೆಚ್ಚುತ್ತದೆ. ಆದರೆ, ನೀವು ಒಂದು ಬಲಿಷ್ಠ ಸಮಾಜದ ಬೆಂಬಲವನ್ನು ಕಳೆದುಕೊಂಡಿದ್ದೀರಾ ಎಂದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X