Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ಪ್ಯಾಂಟ್ ಕಿಸೆಯಲ್ಲಿದ್ದ...

ಉಡುಪಿ : ಪ್ಯಾಂಟ್ ಕಿಸೆಯಲ್ಲಿದ್ದ ಮೊಬೈಲ್‌ನಲ್ಲಿ ಬೆಂಕಿ!

ವಾರ್ತಾಭಾರತಿವಾರ್ತಾಭಾರತಿ13 Jun 2017 9:45 PM IST
share
ಉಡುಪಿ : ಪ್ಯಾಂಟ್ ಕಿಸೆಯಲ್ಲಿದ್ದ ಮೊಬೈಲ್‌ನಲ್ಲಿ ಬೆಂಕಿ!

ಉಡುಪಿ, ಜೂ.13: ಬೈಕ್ ಸವಾರರೊಬ್ಬರ ಪ್ಯಾಂಟ್ ಕಿಸೆಯಲ್ಲಿದ್ದ ಮೊಬೈಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಅಪರಾಹ್ನ 1:30ರ ಸುಮಾರಿಗೆ ಇಂದ್ರಾಳಿಯಲ್ಲಿ ನಡೆದಿದೆ.

ರೈಲು ಟಿಕೆಟ್ ಬುಕ್ ಮಾಡಲೆಂದು ಕಟಪಾಡಿಯ ಮಂಜುನಾಥ್ ಎಂಬವರು ತನ್ನ ಪತ್ನಿ ಜೊತೆ ಬೈಕಿನಲ್ಲಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಹೋಗುತ್ತಿದ್ದರು. ಮಣಿಪಾಲ -ಉಡುಪಿ ಮುಖ್ಯ ರಸ್ತೆಯಿಂದ ಇಂದ್ರಾಳಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಬೈಕ್ ತಿರುಗಿಸುವಾಗ ಮಂಜುನಾಥ್‌ರ ಪ್ಯಾಂಟ್ ಕಿಸೆ ಯಲ್ಲಿದ್ದ ಮೈಕ್ರೋಮ್ಯಾಕ್ಸ್ ಕಂಪನಿಯ ಮೊಬೈಲ್ ತುಂಬಾ ಬಿಸಿಯಾಯಿತು.

ಬೈಕಿನಲ್ಲಿ ಹೋಗುತ್ತಿರುವಾಗ ಅವರ ಕಿಸೆಯಿಂದ ಹೊಗೆ ಬರುತ್ತಿರುವುದು ಕಂಡುಬಂತು. ಕೂಡಲೇ ಅಪಾಯವನ್ನು ಅರಿತ ಅವರು ಬೈಕನ್ನು ಅಲ್ಲೇ ರಸ್ತೆ ಬದಿಯಲ್ಲಿ ನಿಲ್ಲಿಸಿ ಮೊಬೈಲ್‌ನ್ನು ಕಿಸೆಯಿಂದ ತೆಗೆದು ರಸ್ತೆಗೆ ಎಸೆದರು. ರಸ್ತೆಗೆ ಬಿದ್ದ ಮೊಬೈಲ್‌ನಿಂದ ಬ್ಯಾಟರಿ ಪ್ರತ್ಯೇಕಗೊಂಡಿತು. ಇದರಿಂದ ಮೊಬೈಲ್ ಸ್ಪೋಟಗೊಳ್ಳದೆ ಅನಾಹುತವೊಂದು ತಪ್ಪಿದಂತಾಯಿತು.

ಬೆಂಕಿಯಿಂದ ಬ್ಯಾಟರಿ ಸಂಪೂರ್ಣ ಸುಟ್ಟು ಹೋಗಿದೆ. ಕಿಸೆಯಲ್ಲಿಯೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಮೊಬೈಲ್‌ನೊಂದಿಗೆ ಇದ್ದ ಕರ್ಚಿಫ್ ಸುಟ್ಟು ಹೋಗಿದೆ. ಅಲ್ಲದೆ, ಅವರ ತೊಡೆಯ ಭಾಗದ ಚರ್ಮದಲ್ಲಿ ಸುಟ್ಟ ಗಾಯ ಆಗಿದೆ. ಮೊಬೈಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿದ ಸಾರ್ವಜನಿಕರು, ಬೈಕ್ ಸವಾರರು ಸ್ಥಳದಲ್ಲಿ ಜಮಾಯಿಸಿದರು. ‘ಉಡುಪಿಯ ಶೋರೂಂನಲ್ಲಿ ಒಂದು ವರ್ಷದ ಹಿಂದೆ ಮೊಬೈಲ್ ಖರೀದಿ ಸಿದ್ದೆ. ಈವರೆಗೆ ಯಾವುದೇ ತೊಂದರೆ ಆಗಿರಲಿಲ್ಲ. ಇಂದು ಶೇ.56ರಷ್ಟು ಬ್ಯಾಟರಿ ಚಾರ್ಚ್ ಮಾಡಿ ತೆಗೆದುಕೊಂಡು ಬಂದಿದ್ದೆ. ಕಿಸೆಯಲ್ಲಿದ್ದ ಮೊಬೈಲ್ ಬಿಸಿ ಆಗುವ ಅನುಭವವಾಗಿ ಕೂಡಲೇ ಕೈಗೆತ್ತಿಕೊಂಡೆ. ಆಗ ಮೊಬೈಲ್ ಕೆಂಡದಂತೆ ಉರಿಯುತ್ತಿತ್ತು. ಕೂಡಲೇ ರಸ್ತೆಗೆ ಎಸೆದಿರುವುದರಿಂದ ಮೊಬೈಲ್ ಸ್ಪೋಟ ಗೊಂಡಿಲ್ಲ’ ಎಂದು ಮಂಜುನಾಥ್ ಪತ್ರಿಕೆಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X