ಕುಶಾಲನಗರ, ಜೂ.13: ನಿಯಂತ್ರಣ ತಪ್ಪಿದ ಬೈಕೊಂದು ರಸ್ತೆ ಬದಿಯಲ್ಲಿದ್ದ ಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಕುಶಾಲನಗರ ಸಮೀಪ ನಡೆದಿದೆ.
ಮಾದಪಟ್ಟಣದ ನಿವಾಸಿ ಅಣ್ಣಯ್ಯ(35) ಮೃತರು ಎಂದು ಗುರುತಿಸಲಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.