Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಏಕಾಗ್ರತೆ ಮತ್ತು ಏಕನಿಷ್ಠೆ ಇಲ್ಲದೆ...

ಏಕಾಗ್ರತೆ ಮತ್ತು ಏಕನಿಷ್ಠೆ ಇಲ್ಲದೆ ಯಶಸ್ಸಿನ ಮಾರ್ಗ ಪ್ರವೇಶಿಸಲು ಸಾಧ್ಯವಿಲ್ಲ : ರಾಘವೇಶ್ವರ ಸ್ವಾಮೀಜಿ

ವಿವೇಕಾನಂದ ವಿದ್ಯಾವರ್ಧಕ ಸಂಘದ ನರೇಂದ್ರ ಪ.ಪೂ.ಕಾಲೇಜು ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ14 Jun 2017 6:38 PM IST
share
ಏಕಾಗ್ರತೆ ಮತ್ತು ಏಕನಿಷ್ಠೆ ಇಲ್ಲದೆ ಯಶಸ್ಸಿನ ಮಾರ್ಗ ಪ್ರವೇಶಿಸಲು ಸಾಧ್ಯವಿಲ್ಲ : ರಾಘವೇಶ್ವರ ಸ್ವಾಮೀಜಿ

ಪುತ್ತೂರು,ಜೂ.14 : ಏಕಾಗ್ರತೆ ಮತ್ತು ಏಕನಿಷ್ಠೆ ಇಲ್ಲದೆ ಯಶಸ್ಸಿನ ಮಾರ್ಗ ಪ್ರವೇಶಿಸಲು ಸಾಧ್ಯವಿಲ್ಲ. ಒಂದು ವಿಷಯವನ್ನು ತೆಗೆದುಕೊಂಡು ಕನಸು ಕಾಣುವ ಜೊತೆಗೆ ಏಕಾಗ್ರತೆ ಮತ್ತು ಏಕನಿಷ್ಠೆಯಿಂದ ಮುಂದುವರಿದರೆ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಹೆಳಿದರು.

ಅವರು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಇಲ್ಲಿನ ತೆಂಕಿಲ ವಿವೇಕನಗರದಲ್ಲಿ ನೂತನವಾಗಿ ಆರಂಭಿಸಲಾದ ನರೇಂದ್ರ ಪದವಿ ಪೂರ್ವ ಕಾಲೇಜನ್ನು ಬುಧವಾರ ಲೋಕಾರ್ಪಣೆಗೈದು ಮಾತನಾಡಿದರು.

ನಾವು ಕೇವಲ ಮನುಷ್ಯರಾಗಿ ಬದುಕಿದರೆ ಸಾಲದು, ದೇವಮಾನವರಾಗಬೇಕು. ಮನುಷ್ಯನನ್ನು ದೇವತ್ವಕ್ಕೇರಿಸುವುದೇ ಶಿಕ್ಷಣದ ಉದ್ದೇಶವಾಗಬೇಕು ಎಂದ ಅವರು, ನರೇಂದ್ರ ಅಂದರೆ ಮನುಷ್ಯ ಮತ್ತು ಇಂದ್ರನ ಸಂಗಮವಾಗಿದ್ದು, ಆದರ್ಶದ ಹಾದಿ ತೋರುವ ,ದೇಶಕಟ್ಟುವ ಚಿಂತನೆ ಬೆಳೆಸುತ್ತಿರುವ ಈ ವಿದ್ಯಾಸಂಸ್ಥೆ ಅಭಿನಂದಾರ್ಹವಾಗಿದ್ದು, ಇಲ್ಲಿ ಕಲಿಯುತ್ತಿರುವ ಪ್ರತಿಯೊಬ್ಬ ಮಕ್ಕಳು ನರೇಂದ್ರರಾಗಬೇಕು ಎಂದರು.


ನರೇಂದ್ರ ಪದವಿ ಪೂರ್ವ ಕಾಲೇಜಿನ ಲಾಂಛನ ಬಿಡುಗಡೆಗೊಳಿಸಿದ ದಾವಣಗೆರೆ ಚನ್ನಗಿರಿ ಪಾಂಡುಮಟ್ಟಿ ವಿರಕ್ತ ಮಠದ ಗುರುಬಸವ ಮಹಾಸ್ವಾಮೀಜಿ ಅವರು, ವಿದ್ಯೆ ಇದ್ದವ ಎಲ್ಲಾದರೂ ಬದುಕಬಲ್ಲ, ಅಪಹರಣ ಮಾಡಲಾಗದ ಸಂಪತ್ತು ಅದು. ವಿದ್ಯೆ ಯಾರಪ್ಪನ ಸೊತ್ತೂ ಅಲ್ಲ. ಸಾಧನೆ ಮಾಡಿದವರಿಗೆ ವಿದ್ಯೆ ಕರಗತವಾಗುತ್ತದೆ. ಆದರೆ ವಿನಯವಂತಿಕೆ ಇದ್ದರೆ ಮಾತ್ರ ವಿದ್ಯೆಗೆ ಭೂಷಣ ಬರುತ್ತದೆ,ಬೆಲೆ ಸಿಗುತ್ತದೆ ಎಂದರು.

ವಿದ್ಯೆ ಕಪಿಮುಷ್ಟಿಯಲ್ಲಿ ಸಿಲುಕಿಕೊಳ್ಳಬಾರದು, ಅದು ಸದಾ ನಲಿದಾಡುತ್ತಿರಬೇಕು ಎಂದ ಅವರು ಈ ಹಿಂದೆ ಕೆಲವೇ ಕೆಲವು ಮಂದಿಯ ಕೈಯಲ್ಲಿದ್ದ ವಿದ್ಯೆ ಇದೀಗ ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಸಾವಿರಕ್ಕೂ ಅಧಿಕ ಮಂದಿ ಮಕ್ಕಳು ನೂರಕ್ಕೆ ನೂರು ಅಂಕ ಪಡೆಯುತ್ತಿದ್ದಾರೆ ಎಂದರೆ ನಾವು ಹೆಮ್ಮೆಪಡಬೇಕಾದ ವಿಚಾರ ಎಂದು ಅವರು ತಿಳಿಸಿದರು.

 ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷೆ ರೂಪರೇಖಾ, ಕಾರ್ಯದರ್ಶಿ ವಿನಯಕೃಷ್ಣ, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸಂತೋಷ್, ವಿದ್ಯಾವರ್ಧಕ ಸಂಘದ ನಿರ್ದೇಶಕ ವಾಮನ ಪೈ ಮತ್ತಿತರರು ಉಪಸ್ಥಿತರಿದ್ದರು.

 ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಅವರು ಸ್ವಾಗತಿಸಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವೇಶ್ವರ ಭಟ್ ವಂದಿಸಿದರು.ಉಪನ್ಯಾಸಕಿ ಹರಿಣಿ ಪುತ್ತೂರಾಯ ನಿರೂಪಿಸಿದರು.  ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನರೇಂದ್ರ ಪದವಿ ಪೂರ್ವ ಕಾಲೇಜನ್ನು ಲೋಕಾರ್ಪಣೆಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X