Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋರಕ್ಷಣೆಗಾಗಿ ಮತ್ತು ‘ಲವ್ ಜಿಹಾದ್...

ಗೋರಕ್ಷಣೆಗಾಗಿ ಮತ್ತು ‘ಲವ್ ಜಿಹಾದ್ ’ವಿರುದ್ಧ ಹೋರಾಡಲು ತ್ರಿಶೂಲ ವಿತರಣೆ

ವಾರ್ತಾಭಾರತಿವಾರ್ತಾಭಾರತಿ14 Jun 2017 7:28 PM IST
share
ಗೋರಕ್ಷಣೆಗಾಗಿ ಮತ್ತು ‘ಲವ್ ಜಿಹಾದ್ ’ವಿರುದ್ಧ ಹೋರಾಡಲು ತ್ರಿಶೂಲ ವಿತರಣೆ

ಅಹ್ಮದಾಬಾದ್,ಜೂ.14: ಗಾಂಧಿನಗರದಲ್ಲಿ ಸೋಮವಾರ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗ ದಳ ಜಂಟಿಯಾಗಿ ಆಯೋಜಿಸಿದ್ದ ತ್ರಿಶೂಲ ದೀಕ್ಷಾ ಕಾರ್ಯಕ್ರಮದಲ್ಲಿ 75 ಯುವಕರಿಗೆ ತ್ರಿಶೂಲಗಳನ್ನು ವಿತರಿಸಲಾಗಿದೆ. ಗೋರಕ್ಷಣೆ,‘ಲವ್ ಜಿಹಾದ್ ’ವಿರುದ್ಧ ಹೋರಾಟ ಮತ್ತು ಶಿಕ್ಷಣ ಸಂಸ್ಥೆಗಳ ಬಳಿ ರೋಮಿಯೊ ನಿಗ್ರಹ ದಳಗಳ ಕಾರ್ಯಾಚರಣೆ ಗಳಿಗೆ ನೆರವಾಗಲು ತ್ರಿಶೂಲಗಳನ್ನು ವಿತರಿಸಲಾಗಿದೆ ಎಂದು ಈ ಸಂಘಟನೆಗಳು ಹೇಳಿಕೊಂಡಿವೆ.

ಕಳೆದ ಎರಡೂವರೆ ವರ್ಷಗಳಲ್ಲಿ ಗಾಂಧಿನಗರ ಜಿಲ್ಲೆಯಲ್ಲಿ ಸುಮಾರು 4,000 ತ್ರಿಶೂಲಗಳನ್ನು ಯುವಜನರಿಗೆ ವಿತರಿಸಲಾಗಿದೆ ಎಂದು ವಿಹಿಂಪ ಪ್ರಧಾನ ಕಾರ್ಯದರ್ಶಿ ಮಹಾವೀರ ದೇಸಾಯಿ ಅವರು ತಿಳಿಸಿದರು.

ಕಳೆದ ಐದು ತಿಂಗಳುಗಳಲ್ಲಿ ಪ್ರತಿ ತಿಂಗಳು ಗಾಂಧಿನಗರದಲ್ಲಿ ಒಂದು ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕೊನೆಯ ಕಾರ್ಯಕ್ರಮ ಸೆಕ್ಟರ್ 7ರಲ್ಲಿ ನಡೆದಿದೆ ಎಂದು ವಿಹಿಂಪ ಮೂಲಗಳು ತಿಳಿಸಿವೆ.

 ಕಳೆದ ಆರು ಕಾರ್ಯಕ್ರಮಗಳಲ್ಲಿ ಸುಮಾರು 700 ತ್ರಿಶೂಲಗಳನ್ನು ವಿತರಿಸಲಾಗಿದೆ. ಈ ತ್ರಿಶೂಲಗಳು ಮನೆಯಲ್ಲಿ ಪ್ರದರ್ಶನಕ್ಕಿಡುವುದಕ್ಕಲ್ಲ, ಹೊರಗೆ ತಿರುಗಾಡುವಾಗ ತ್ರಿಶೂಲಗಳನ್ನು ಜೊತೆಯಲ್ಲಿಯೇ ಒಯ್ಯುವಂತೆ ಯುವಕರಿಗೆ ನಾವು ಸ್ಪಷ್ಟ ನಿರ್ದೇಶ ನೀಡಿದ್ದೇವೆ ಎಂದು ದೇಸಾಯಿ ತಿಳಿಸಿದರು.

 ಶಸ್ತ್ರಾಸ್ತ್ರಗಳೊಂದಿಗೆ ತಿರುಗುವುದು ಅಪರಾಧವಲ್ಲವೇ ಎಂಬ ಪ್ರಶ್ನೆಗೆ ದೇಸಾಯಿ, ತ್ರಿಶೂಲಗಳು ಶಸ್ತ್ರಾಸ್ತ್ರಗಳ ವರ್ಗದಲ್ಲಿ ಬರುವುದಿಲ್ಲ. ಅವು ನಿಷೇಧಿತ ಶಸ್ತ್ರಾಸ್ತ್ರಗಳಿಗಿಂತ ಒಂದು ಸೆ.ಮೀ. ಕಿರಿದಾಗಿವೆ. ಹೀಗಾಗಿ ಗೋರಕ್ಷಣೆಗೆ ಅವುಗಳನ್ನು ಬಳಸಬಹುದಾಗಿದೆ. ಗುಜರಾತ್‌ನಲ್ಲಿ ಗೋಹತ್ಯೆ ನಡೆದಿರುವ ಅನೇಕ ನಿದರ್ಶನಗಳಿವೆ ಮತ್ತು ಈ ಅಪರಾಧವನ್ನು ನಿಲ್ಲಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಹಿಂದು ಯುವಕರು ಮುಂದೆ ಬಂದು ಗೋರಕ್ಷಣೆಗಾಗಿ ಹೋರಾಡಬೇಕಾದ ಕಾಲವೀಗ ಬಂದಿದೆ ಎಂದು ದೇಸಾಯಿ ಹೇಳಿದರು.

ಅಲ್ಲದೆ ‘ಲವ್ ಜಿಹಾದ್ ’ಪಿಡುಗನ್ನು ನಿಯಂತ್ರಿಸಲು ಮತ್ತು ನಗರದಲ್ಲಿಯ ಶಿಕ್ಷಣ ಸಂಸ್ಥೆಗಳ ಬಳಿ ರೋಮಿಯೊ ನಿಗ್ರಹ ದಳಗಳ ಸ್ಥಾಪನೆಗೆ ನಾವು ಶ್ರಮಿಸುತ್ತಿದ್ದೇವೆ ಎಂದರು.

ತ್ರಿಶೂಲವು ಶಿವನ ವಿಶ್ವಾಸ ಮತ್ತು ಶಕ್ತಿಯ ಸಂಕೇತವಾಗಿದೆ ಎಂದ ಗಾಂಧಿನಗರ ಬಜರಂಗ ದಳ ಅಧ್ಯಕ್ಷ ಶಕ್ತಿಸಿಂಹ ರಲಾ, ಹಿಂದುತ್ವವನ್ನು ಕಟ್ಟುನಿಟ್ಟಾಗಿ ಪಾಲಿಸುವ ಹಿಂದು ಯುವಕರ ಶಕ್ತಿಶಾಲಿ ಪಡೆಯನ್ನು ರೂಪಿಸಲು ನಾವು ಬಯಸಿದ್ದು, ನಮ್ಮ ತ್ರಿಶೂಲ ದೀಕ್ಷಾ ಕಾರ್ಯ್ರಮವು ಈ ಅಭಿಯಾನದ ಭಾಗವಾಗಿದೆ ಎಂದರು.

 ತನ್ಮಧ್ಯೆ ಗಾಂಧಿನಗರ ಎಸ್‌ಪಿ ವೀರೇಂದ್ರಸಿಂಹ್ ಯಾದವ ಅವರು, ಕಾನೂನು ಎಲ್ಲರಿಗೂ ಒಂದೇ ಅಗಿದೆ. ಯುವಕರ ಬಳಿ ತ್ರಿಶೂಲಗಳು ಪತ್ತೆಯಾದರೆ ಅವರ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದ ತಿಳಿಸಿದರು.

ವಿಹಿಂಪ ಮತ್ತು ಬಜರಂಗ ದಳ ಜೂ.20ರಂದು ಕಲೋಳ್‌ನಲ್ಲಿ ಬೃಹತ್ ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X