Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 24 ವರ್ಷಗಳಿಂದ ಸೌದಿಯಲ್ಲಿ...

24 ವರ್ಷಗಳಿಂದ ಸೌದಿಯಲ್ಲಿ ತಲೆಮರೆಸಿಕೊಂಡಿದ್ದ ಭಾರತೀಯ ಶೀಘ್ರ ತವರಿಗೆ

2 ದಶಕಗಳಲ್ಲಿ ಒಮ್ಮೆಯೂ ಮನೆಗೆ ಬಂದಿಲ್ಲ!

ವಾರ್ತಾಭಾರತಿವಾರ್ತಾಭಾರತಿ14 Jun 2017 7:55 PM IST
share
24 ವರ್ಷಗಳಿಂದ ಸೌದಿಯಲ್ಲಿ ತಲೆಮರೆಸಿಕೊಂಡಿದ್ದ ಭಾರತೀಯ ಶೀಘ್ರ ತವರಿಗೆ

ಸೌದಿ ಅರೇಬಿಯಾ, ಜೂ.14: ಸುಮಾರು 24 ವರ್ಷಗಳಿಂದ ಸೌದಿ ಅರೇಬಿಯಾದ ಮರಳುಗಾಡಿನಲ್ಲಿ  ತಲೆಮರೆಸಿಕೊಂಡು ನೆಲೆಸಿದ್ದ ಭಾರತೀಯರೊಬ್ಬರು ಸೌದಿ ಸರಕಾರದ 90 ದಿನಗಳ ಕ್ಷಮಾದಾನ ಅವಧಿಯಲ್ಲಿ ಕೊನೆಗೂ ಭಾರತಕ್ಕೆ ಮರಳಲಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿಯ ಗಾನ ಪ್ರಕಾಶಂ 1994ರಲ್ಲಿ ಹೈಲ್ ಪ್ರಾಂತ್ಯಕ್ಕೆ ಕೃಷಿ ಕಾರ್ಮಿಕನಾಗಿ ಬಂದಿದ್ದರು, ಕೆಲಸಕ್ಕೆ ಸೇರಿ ಸುಮಾರು 6 ತಿಂಗಳುಗಳ ಕಾಲ ಅವರಿಗೆ ತಿಂಗಳಿಗೆ 100 ಸೌದಿ ರಿಯಾಲ್ ನೀಡಲಾಗುತ್ತಿತ್ತು. ನಂತರ ಬೇರೊಬ್ಬರ ಜೊತೆ ಅವರು ಕೆಲಸಕ್ಕೆ ಸೇರಿದರು. ನಂತರ ಆರಂಭವಾದ ಪ್ರಕಾಶಂ ಅವರ ಸೌದಿ ಜೀವನ ಅವರು ಭಾರತಕ್ಕೆ ಹಿಂದಿರುಗದಷ್ಟು ಕಷ್ಟಕರವಾಗಿತ್ತು. 24 ವರ್ಷಗಳಿಂದ ಒಂದು ಬಾರಿಯೂ ಅವರು ಮನೆಗೆ ಹಿಂದಿರುಗಿರಲಿಲ್ಲ ಎಂದು ಸೌದಿ ಗ್ಯಾಝೆಟ್ ವರದಿ ಮಾಡಿದೆ.

“ಮೂವರು ಮಾಲಕರಲ್ಲಿ ನನ್ನ ಪ್ರಾಯೋಜಕರು ಯಾರು ಎಂಬುದೇ ನನಗೆ ತಿಳಿಯಲಿಲ್ಲ. ಅವರ್ಯಾರೂ ನನಗೆ ಸಂಬಳ ನೀಡಲಿಲ್ಲ. ಆದ್ದರಿಂದ ನಾನು ಅಲ್ಲಿಂದ ಪರಾರಿಯಾಗಿ ಅಕ್ರಮವಾಗಿ ಸೌದಿಯಲ್ಲಿ ನೆಲೆಸುವಂತಾಯಿತು” ಎಂದು ಪ್ರಕಾಶಂ ಹೇಳಿದ್ದಾರೆ,

“ನಾನು ಮನೆಯಿಂದ ಇಲ್ಲಿಗೆ ಆಗಮಿಸಿದ್ದ ಸಂದರ್ಭ ನನ್ನ ನಾಲ್ವರು ಪುತ್ರಿಯರು ಸಣ್ಣ ವಯಸ್ಸಿನವರಾಗಿದ್ದರು. ಈಗ ನಾನು ಮತ್ತೊಮ್ಮೆ ಹಿಂದಿರುಗಲಿದ್ದು, ಅದೇ ವಯಸ್ಸಿನ ಮೊಮ್ಮಕ್ಕಳಿದ್ದಾರೆ. ಸೌದಿ ಅರೇಬಿಯಾದಲ್ಲಿ ದುಡಿದು ಮೂವರು ಪುತ್ರಿಯರ ಮದುವೆ ಮಾಡಿಕೊಡಲು ಸಾಧ್ಯವಾಯಿತು. ನಾನು ಭಾರತದಿಂದ ಸೌದಿಗೆ ಕಾಲಿಟ್ಟ ನಂತರ ಆಧಾರ್ ಕಾರ್ಡ್, ವೋಟರ್ ಐಡಿ ಜಾರಿಗೆ ಬಂದಿದ್ದರಿಂದ ನನ್ನ ಬಳಿ ಅದ್ಯಾವುದೂ ಇಲ್ಲ. ನನಗೆ ಸ್ವಂತ ಮನೆಯೂ ಇಲ್ಲ” ಎಂದು ಪ್ರಕಾಶಂ ಹೇಳುತ್ತಾರೆ,

ಪ್ರಕಾಶಂ 2015ರಲ್ಲಿ ಕೊನೆಯ ಬಾರಿಗೆ ತನ್ನ ಪತ್ನಿಯಲ್ಲಿ ಮಾತನಾಡಿದ್ದರು. ಆ ಸಂದರ್ಭ ಅವರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದರು. ಆನಂತರ ಅವರು ಪತ್ನಿಯೊಂದಿಗೆ ಮಾತನಾಡಲು ಸಾಧ್ಯವಾಗಿಲ್ಲ. ಅದಾಗಿ ಒಂದು ವರ್ಷದ ಬಳಿಕ ಆಕೆ ಮೃತಪಟ್ಟಿದ್ದರು.

ಹೈಲ್ ಮೂಲದ ಸಾಮಾಜಿಕ ಕಾರ್ಯಕರ್ತ ಸರ್ಫುದ್ದೀನ್ ತಯ್ಯಿಲ್ ಸಹಾಯದಿಂದ ಭಾರತಕ್ಕೆ ಮರಳಲು ಬೇಕಾದ ಎಲ್ಲಾ ಕೆಲಸಗಳನ್ನು ಪ್ರಕಾಶಂ ಮುಗಿಸಿದ್ದಾರೆ. ಶೀಘ್ರವೇ ಅವರು ಭಾರತಕ್ಕೆ ಮರಳಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X