Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ನಂಡೆ ಪೆಂಙಳ್’ ಯೋಜನೆ ಯಶಸ್ವಿಗೊಳಿಸೋಣ:...

‘ನಂಡೆ ಪೆಂಙಳ್’ ಯೋಜನೆ ಯಶಸ್ವಿಗೊಳಿಸೋಣ: ಸಚಿವ ಯು.ಟಿ. ಖಾದರ್‌

‘ನಂಡೆ ಪೆಂಙಳ್’ ಸ್ನೇಹ ಸಂಗಮ, ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ14 Jun 2017 8:59 PM IST
share
‘ನಂಡೆ ಪೆಂಙಳ್’ ಯೋಜನೆ ಯಶಸ್ವಿಗೊಳಿಸೋಣ: ಸಚಿವ ಯು.ಟಿ. ಖಾದರ್‌

ಮಂಗಳೂರು, ಜೂ. 14: ಆರ್ಥಿಕವಾಗಿ ಹಿಂದುಳಿದ 30 ಹರೆಯ ಮೀರಿದ ಮುಸ್ಲಿಂ ಹೆಣ್ಮಕ್ಕಳ ವಿವಾಹ ಕಾರ್ಯಕ್ರಮ ನೆರವೇರಿಸುವ ‘ನಂಡೆ ಪೆಂಙಳ್’ ಯೋಜನೆಯನ್ನು ಎಲ್ಲರ ಸಹಭಾಗಿತ್ವದೊಂದಿಗೆ ಯಶಸ್ವಿಗೊಳಿಸೋಣ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹಾರೈಸಿದ್ದಾರೆ.

ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್ ಸಾರಥ್ಯದಲ್ಲಿ ನಗರದ ಐಎಂಎ ಹಾಲ್‌ನಲ್ಲಿ ಬುಧವಾರ ನಡೆದ ‘ನಂಡೆ ಪೆಂಙಳ್’ ಸ್ನೇಹ ಸಂಗಮ ಮತ್ತು ಇಫ್ತಾರ್ ಕೂಟದಲ್ಲಿ ಅವರು ಮಾತನಾಡಿದರು.

ಸೌಹಾರ್ದ ಮತ್ತು ಸಹೋದರತೆಗೆ ಒತ್ತು ನೀಡುತ್ತಿರುವ ಅಬ್ದುಲ್ ರವೂಫ್ ಪುತ್ತಿಗೆ ಅವರ ಸಾರಥ್ಯದ ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್ ಕಳೆದ ಹಲವು ವರ್ಷಗಳಿಂದ ಸಮಾಜ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದು, ಶೈಕ್ಷಣಿಕ ಸಹಿತ ಇತರ ಕ್ಷೇತ್ರಗಳಲ್ಲಿ ಸಮಾಜ ಮುಖಿಯಾಗಿ ಕೆಲಸ ನಿರ್ವಹಿಸುತ್ತಾ ಮಾದರಿ ಸಂಸ್ಥೆಯಾಗಿದೆ.

‘ನಂಡೆ ಪೆಂಙಳ್’ ಯೋಜನೆಗೆ ನನ್ನಿಂದಾಗುವ ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್ ಸಮಾಜದ ಎಲ್ಲ ವರ್ಗದವರ ಪ್ರೀತಿ, ವಿಶ್ವಾಸವನ್ನು ಉಳಿಸಿಕೊಳ್ಳುವಂತಾಗಲಿ. ಸಮುದಾಯದಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಯುವಕರು ಕಾಳಜಿ ವಹಿಸಬೇಕೇ ಹೊರತು ಸಮಸ್ಯೆ ಸೃಷ್ಟಿಗೆ ಕಾರಣೀಭೂತರಾಗಬಾರದು. ಇಂತಹ ಕಾರ್ಯಗಳಿಗೆ ತಾಳ್ಮೆ, ಪ್ರೀತಿ ಮತ್ತು ವಿಶ್ವಾಸದ ಅಗತ್ಯವಿದೆ ಎಂದರು.

ಜಾತ್ಯಾತೀತ ಜನತಾದಳದ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ಮಾತನಾಡಿ, ಬಡ ಹೆಣ್ಣು ಮಕ್ಕಳ ಮದುವೆಗೆ ಉತ್ತೇಜನ ನೀಡುವ ‘ನಂಡೆ ಪೆಂಙಳ್’ ಯೋಜನೆಗೆ ಸಹಾಯ ನೀಡಲು ಸಿದ್ಧನಿದ್ದೇನೆ. ಇಂತಹ ಉತ್ತಮ ಕಾರ್ಯಗಳಿಗೆ ಸಮಾಜದ ಎಲ್ಲರೂ ಸಹಕಾರ ನೀಡುವಂತಾಗಬೇಕು ಎಂದರು.

ರಫೀಕ್ ಮಾಸ್ಟರ್ ಅವರು ‘ನಂಡೆ ಪೆಂಙಳ್’ ಯೋಜನೆಯ ಅಭಿಯಾನದ ಮನೆ ಮನೆ ಭೇಟಿ ಸಂದರ್ಭದಲ್ಲಿ 30 ವರ್ಷ ಮೀರಿದ ಅವಿವಾಹಿತ ಬಡ ಮುಸ್ಲಿಂ ಹೆಣ್ಣು ಮಕ್ಕಳು ಮತ್ತು ಅವರ ಹೆತ್ತವರು ಎದುರಿಸುತ್ತಿರುವ ಸಮಸ್ಯೆಗಳು, ಮಾನಸಿಕ ವೇದನೆ, ಮದುವೆಯಾಗದ ಕೊರಗು, ವಯಸ್ಸು ಮೀರಿದ ಅವಮಾನದಿಂದ ಮನೆಯಿಂದ ಹೊರಬಾರದ ಹೆಣ್ಣು ಮಕ್ಕಳ ಸ್ಥಿತಿಗಳ ಬಗ್ಗೆ ಬೆಳಕು ಚೆಲ್ಲಿದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊದಿನ್ ಬಾವ, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ವೈಟ್ ಸ್ಟೋನ್ ಗ್ರೂಪ್‌ನ ಆಡಳಿತ ನಿರ್ದೇಶಕ ಬಿ.ಮುಹಮ್ಮದ್ ಶರೀಫ್, ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್‌ನ ಅಬ್ದುಲ್ ರವೂಫ್ ಪುತ್ತಿಗೆ, ಹುಸೇನ್ ದಾರಿಮಿ ರೆಂಜಲಾಡಿ, ಲೆಕ್ಕಪರಿಶೋಧಕ ಝಮೀರ್ ಅಂಬರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ನೌಶಾದ್ ಹಾಜಿ ಸೂರಲ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾವುಟಗುಡ್ಡೆ ಈದ್ಗಾ ಮಸೀದಿಯ ಖತೀಬ್ ಸದಖತುಲ್ಲಾಹ್ ನದ್ವಿ ದುವಾ ನೆರವೇರಿಸಿದರು. ನಂಡೆ ಪೆಂಙಳ್ ಯೋಜನೆಯ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಆಝಾದ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X