Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯುತ್ ತಂತಿಗಳ ಲೋಪ ಪತ್ತೆ ಸಾಧನ!

ವಿದ್ಯುತ್ ತಂತಿಗಳ ಲೋಪ ಪತ್ತೆ ಸಾಧನ!

ವಾರ್ತಾಭಾರತಿವಾರ್ತಾಭಾರತಿ14 Jun 2017 9:49 PM IST
share
ವಿದ್ಯುತ್ ತಂತಿಗಳ ಲೋಪ ಪತ್ತೆ ಸಾಧನ!

ಮಂಗಳೂರು, ಜೂ.14: ವಿದ್ಯುತ್ ಪ್ರಸರಣ ಮತ್ತು ವಿತರಣೆ ಅದೊಂದು ದೊಡ್ಡ ಜಾಲ. ಇದರ ನಿರ್ವಹಣೆಯೇ ದೊಡ್ಡ ಸವಾಲು. ಬೆಳೆಯುತ್ತಿರುವ ಬೇಡಿಕೆಗಳ ನಡುವೆ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ವಿದ್ಯುತ್ ಪೂರೈಕೆ ಮಾಡುವಾಗ ಸಂರಕ್ಷಣಾ ವ್ಯವಸ್ಥೆಯ ಅಗತ್ಯವೂ ಇದೆ. ಆಕಸ್ಮಿಕ ಘಟನೆಗಳು, ನೈಸರ್ಗಿಕ ಪ್ರಕೋಪಗಳಿಂದಾಗಿ ವಿದ್ಯುತ್ ತಂತಿಗಳಲ್ಲಿ ದೋಷಗಳು ಕಂಡು ಬರುವುದಿದೆ. ಈ ದೋಷಗಳನ್ನು ಕೂಡಲೇ ಪತ್ತೆ ಹಚ್ಚುವ ಮೂಲಕ ಶ್ರಮ, ಸಮಯ, ವಿದ್ಯುತ್ ನಷ್ಟ ಉಳಿಸಿ ದೋಷಗಳಿಗೆ ಪರಿಹಾರ ಹುಡುಕುವಲ್ಲಿಯೂ ಬೆಂಜನಪದವಿನ ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅಂತಿಮ ಬಿ.ಇ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ವಿದ್ಯಾರ್ಥಿಗಳು ಸಫಲರಾಗಿದ್ದಾರೆ.

ಇವರು ರೂಪಿಸಿರುವ ಲೋರಾ ಆಧಾರಿತ ವ್ಯವಸ್ಥೆಯಲ್ಲಿ ವಿದ್ಯುತ್ ತಂತಿಗಳ ಸ್ಥಿತಿಗತಿಯನ್ನು ಯಾವುದೇ ಸ್ಥಳದಿಂದ ನೆಟ್ವರ್ಕ್ ಸರ್ವರ್ ಮೂಲಕ ಪರಿಶೀಲಿಸಬಹುದಾಗಿದೆ. ಇಲ್ಲಿ ಪಾಲ್ಟ್ ಡಿಟೆಕ್ಟರ್ ವ್ಯವಸ್ಥೆ ಲೋಪ ಇರುವ ಸ್ಥಳ ಮತ್ತು ಈ ಬಗ್ಗೆ ನಿಖರ ಮಾಹಿತಿಯನ್ನು ನೀಡುತ್ತದೆ.

ಕಾಲೇಜಿನ ಸಹ ಪ್ರಾಧ್ಯಾಪಕಿ ಕಾವ್ಯ ಎ.ಡಿ.ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಪ್ರೀತಮ್ ಐವನ್ ಡಿಸೋಜಾ ನವಮಿ ಕಿಣಿ, ವೆಂಕಟೇಶ, ಮಾಧವ ಶೆಣೈ ಮೆಸ್ಕಾಂ ತಾಂತ್ರಿಕ ವಿಭಾಗದ ಸಚಿನ್ ಅವರ ಸಲಹೆಯೊಂದಿಗೆ ಈ ಪ್ರಾಜೆಕ್ಟ್ ರೂಪಿಸಿದ್ದಾರೆ.

ಎಲ್.ಪಿ.ಜಿ. ಸುರಕ್ಷೆ:
ಮನೆ ಮತ್ತು ಕೆಲಸದ ಏರಿಯಾಗಳಲ್ಲಿ ಸುರಕ್ಷೆ ಇಂದಿನ ಪ್ರಮುಖ ಆದ್ಯತೆಯಾಗಿದೆ. ಮಿತ ವ್ಯಯದಲ್ಲಿ ಮನೆ ಮತ್ತು ಕಛೇರಿಗಳಲ್ಲಿ ಎಲ್.ಪಿ.ಜಿ. ಅನಿಲ ಸೋರುವಿಕೆಯ ಕುರಿತು ನಿಖರ ಹಾಗೂ ಸುರಕ್ಷಾ ಮಾಹಿತಿಯನ್ನು ನೀಡುವ ಸಾಧನವನ್ನು ಎಂಜಿನಿಯರಿಂಗ್ ಪ್ರಾಜೆಕ್ಟ್ ಮೂಲಕ ಇಲ್ಲಿ ವಿದ್ಯಾರ್ಥಿಗಳು ರೂಪಿಸಿದ್ದಾರೆ. ಅನಿಲ ಸೋರಿಕೆಯ ಪತ್ತೆ, ಸಂವನೀಯ ಅಪಾಯದ ಸಮಯ, ತಡೆಗೆ ಕ್ರಮ ಈ ವ್ಯವಸ್ಥೆಯಲ್ಲಿದೆ.

ಎಂಕ್ಯೂ ಸೆನ್ಸಾರ್ 6 ಬಳಸಿ ರೂಪಿಸಲಾಗಿರುವ ಈ ಸಾಧನದಲ್ಲಿ ಗ್ಯಾಸ್ ಸಿಲಿಂಡರ್ ತೂಕ ತಿಳಿಸುವ ಮೂಲಕ ಸಿಲಿಂಡರ್ ಬದಲಾವಣೆಯ ಸೂಚನೆ ಸಿಗುತ್ತದೆ.ಕಾಲೇಜಿನ ಸಹ ಪ್ರಾಧ್ಯಾಪಕ ಅನುಪ್ ಕುಮಾರ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಮನು ವೆಂಕಟೇಶ್, ಪೂಜಾ ಎಸ್, ನಿಶಾಂತ್ ಜೊಯೆಲ್ ಮಾರ್ಟಿಸ್, ನಿಶ್ಮಿತಾ ನಾಕ್ ಈ ಪ್ರಾಜೆಕ್ಟ್ ರೂಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X