Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಿಎಸ್ಟಿ ವಿಧೇಯಕ: ವಿಧಾನಸಭೆಯಲ್ಲಿ...

ಜಿಎಸ್ಟಿ ವಿಧೇಯಕ: ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ15 Jun 2017 10:10 PM IST
share
ಜಿಎಸ್ಟಿ ವಿಧೇಯಕ: ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ಬೆಂಗಳೂರು, ಜೂ. 15:ಏಕರೂಪ ತೆರಿಗೆ ಪದ್ಧತಿ ಜಾರಿಗೊಳಿಸುವ ಮಹತ್ವದ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕ(ಎಸ್‌ಜಿಎಸ್‌ಟಿ)ವನ್ನು ವಿಧಾನಸಭೆಯಲ್ಲಿ ಧ್ವನಿಮತದ ಮೂಲಕ ಸರ್ವಾನುಮತದಿಂದ ಅಂಗೀಕಾರ ನೀಡಲಾಯಿತು.

ಗುರುವಾರ ವಿಧಾನಸಭೆಯಲ್ಲಿ ಶಾಸನ ರಚನೆ ಅವಧಿಯಲ್ಲಿ ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ಧರಾಮಯ್ಯ ವಿಧೇಯಕವನ್ನು ಮಂಡಿಸಿದರು. ತೆರಿಗೆ ಸರಳೀಕರಣ ಗೊಳಿಸುವಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೆ ಮುಂದಿದ್ದು, ಆ ವಿಚಾರದಲ್ಲಿ ಪ್ರಗತಿಪರ ರಾಜ್ಯ. ಸರಕು ಮತ್ತು ಸೇವಾ ತೆರಿಗೆ ವಿಧೇಯಕ ಯುಪಿಎ ಸರಕಾರದ ಕೂಸು. ಹೀಗಾಗಿ ವಿರೋಧಿಸುವ ಪ್ರಶ್ನೆಯೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ 2011ರಲ್ಲೆ ಯುಪಿಎ ಸರಕಾರ ಜಿಎಸ್‌ಟಿ ವಿಧೇಯಕ ಮಂಡನೆಗೆ ಸಿದ್ದತೆ ನಡೆಸಿತ್ತು. ಆ ವೇಳೆ ಗುಜರಾತ್, ಮಧ್ಯಪ್ರದೇಶ ಹಾಗೂ ತಮಿಳುನಾಡು ಸರಕಾರಗಳು ವಿರೋಧಿಸಿದ್ದವು. ಇದೀಗ ಜಿಎಸ್‌ಟಿ ಕಾನೂನು ಜಾರಿಗೆ ಅವರೇ ಮುಂದಾಗಿದ್ದಾರೆ ಎಂದರು.

ಕೇಂದ್ರ ಸರಕಾರ ಜಾರಿಗೆ ತಂದಿರುವ ಜಿಎಸ್ಟಿ ಕಾಯ್ದೆಗೆ ಪೂರಕವಾಗಿ ವಿಧೇಯಕವನ್ನು ಮಂಡಿಸಲಾಗಿದೆ. ಇಲ್ಲಿ ನಡೆಯುವ ಚರ್ಚೆಗಳಿಂದ ಬದಲಾವಣೆಗಳು ಅಸಾಧ್ಯ. ಆದರೂ, ಇಲ್ಲಿನ ವ್ಯಕ್ತವಾದ ಅಭಿಪ್ರಾಯಗಳನ್ನು ಜಿಎಸ್ಟಿ ಮಂಡಳಿ ಸಭೆಯಲ್ಲಿ ಕೇಂದ್ರದ ಗಮನಕ್ಕೆ ತರಲಾಗುವುದು ಎಂದು ಸ್ಪಷ್ಟಣೆ ನೀಡಿದರು.

ಆರಂಭಕ್ಕೆ ವಿಧೇಯಕದ ಕುರಿತು ಮಾತನಾಡಿದ ಬಿಜೆಪಿ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ, ಒಂದು ರಾಷ್ಟ್ರ ಒಂದು ತೆರಿಗೆ ಪರಿಕಲ್ಪನೆಗೆ ವಿಧೇಯಕದ ಕುರಿತು ವರ್ತಕರಲ್ಲಿ ಇನ್ನೂ ಗೊಂದಲವಿದ್ದು, ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಅಲ್ಲದೆ, ವರ್ತಕರಲ್ಲಿನ ಎಲ್ಲ ಪ್ರಶ್ನೆಗಳಿಗೆ ಸರಕಾರ ಉತ್ತರ ನೀಡಬೇಕೆಂದು ಕೋರಿದರು.ಕೊಬ್ಬರಿ ಮತ್ತು ಒಣದ್ರಾಕ್ಷಿ ಮೇಲೆ ಹೆಚ್ಚಿನ ಪ್ರಮಾಣದ ತೆರಿಗೆ ವಿಧಿಸಿದ್ದು, ಅದನ್ನು ಇಳಿಕೆ ಮಾಡಬೇಕೆಂದು ಜೆಡಿಎಸ್ ಸದಸ್ಯ ಎಂ.ಟಿ.ಕೃಷ್ಣಪ್ಪ, ಬಿಜೆಪಿ ಸದಸ್ಯ ಲಕ್ಷ್ಮಣ ಸವದಿ, ಆಡಳಿತ ಪಕ್ಷದ ಶಿವಾನಂದ ಪಾಟೀಲ್ ಸೇರಿದಂತೆ ಇನ್ನಿತರರು ಇದೇ ವೇಳೆ ಒತ್ತಾಯಿಸಿದರು.

ಕೇಂದ್ರ ಸಚಿವರ ಅಭಿನಂದನೆ: ಜಿಎಸ್ಟಿ ನೋಂದಣಿಯಲ್ಲಿ ರಾಜ್ಯ ದೇಶದಲ್ಲೇ ಮೊದಲನೆ ಸ್ಥಾನದಲ್ಲಿದೆ. ಜಿಎಸ್ಟಿ ಜಾರಿಗೆ ಪೂರ್ವ ಸಿದ್ಧತೆ ಕೈಗೊಳ್ಳುವಲ್ಲಿ ರಾಜ್ಯ ನಂಬರ್ 1 ಸ್ಥಾನದಲ್ಲಿದೆ ಎಂದು ಕೇಂದ್ರ ಹಣಕಾಸು ಸಚಿವರೇ ಅಭಿನಂದಿಸಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ಏಕ ರೂಪ ತೆರಿಗೆ ಪದ್ಧತಿ ಜಾರಿಗೆ ತರುವ ಮಹತ್ವದ ಕರ್ನಾಟಕ ಸರಕು ಮತ್ತು ಸೇವೆಗಳ ವಿಧೇಯಕಕ್ಕೆ ವಿಧಾನಸಭೆ ಎಲ್ಲ ಸದಸ್ಯರು ಸರ್ವಾನುಮತದ ಅನುಮೋದನೆ ನೀಡಬೇಕು ಎಂದು ಸಿದ್ಧರಾಮಯ್ಯ ಕೋರಿದರು.

ಬಳಿಕ ಸ್ಪೀಕರ್ ಕೆ.ಬಿ.ಕೋಳಿವಾಡ ವಿಧೇಯಕವನ್ನು ಮತಕ್ಕೆ ಹಾಕಿ ಧ್ವನಿಮತದ ಮೂಲಕ ಅಂಗೀಕಾರ ದೊರಕಿಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X